ಆದಿಶಕ್ತಿ ಹೆತ್ತೇನಹಳ್ಳಿ ಮಾರಮ್ಮ ದೇವಿಗೆ ಬೆಳ್ಳಿ ಖಡ್ಗ ಸಮರ್ಪಣೆ

ತುಮಕೂರು ಗ್ರಾಮಾಂತರ: ಹೆತ್ತೇನಹಳ್ಳಿ ಮಾರಮ್ಮನಿಗೆ ಮಾಜಿ ಶಾಸಕರಾದ ಸುರೇಶ್ ಗೌಡ ಅವರು ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರ ಆಶಯದಂತೆ ಮಂಗಳವಾರ ಬೆಳ್ಳಿ ಖಡ್ಗವನ್ನು ಸಮರ್ಪಿಸಿದರು.

ಡಿಸೆಂಬರ್-7 ರಂದು ಭಾರತೀಯ ಜನತಾ ಪಕ್ಷದ ತುಮಕೂರು ಗ್ರಾಮಾಂತರ ವಿಧಾನ ಸಭಾ ಕ್ಷೇತ್ರದ ಕಛೇರಿ “ ಶಕ್ತಿ ಸೌಧ”  ಉದ್ಘಾಟಿಸಲು ಆಗಮಿಸಿದ್ದ ನಾಡಿನ  ಜನಪ್ರಿಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸುರೇಶ್ ಗೌಡರವರು  ಬೆಳ್ಳಿ ಖಡ್ಗವನ್ನು ನೀಡಿದ್ದರು.

ಮುಖ್ಯಮಂತ್ರಿಗಳು ಬೆಳ್ಳಿ ಖಡ್ಗವನ್ನು  ಈ ಭಾಗದ ಶಕ್ತಿ ದೇವತೆಗೆ ಸಮರ್ಪಿಸುವಂತೆ ತಿಳಿಸಿದ್ದರು. ಈ ಹಿನ್ನೆಲೆ ಪಕ್ಷದ ಮುಖಂಡರು, ಕಾರ್ಯಕರ್ತರೊಂದಿಗೆ ಮಾನ್ಯ ಮಾಜಿ ಶಾಸಕರಾದ ಸುರೇಶ್ ಗೌಡರವರು ಮಾರಮ್ಮ ದೇಗುಲಕ್ಕೆ ಬೆಳ್ಳಿಖಡ್ಗ ನೀಡಿದರು.

ಮಾಜಿ ಶಾಸಕ ಸುರೇಶ್ ಗೌಡ ಅವರು ಮಾತನಾಡಿ, ಮಾನ್ಯ ಮುಖ್ಯಮಂತ್ರಿಗಳ ಆಶಯದಂತೆ ಬೆಳ್ಳಿ ಖಡ್ಗವನ್ನು ಶಕ್ತಿದೇವತೆಗೆ ಸಮರ್ಪಿಸಲಾಗಿದೆ. ಈ ಭಾಗದ ದುಷ್ಟ ಶಕ್ತಿಗಳು ನಿರ್ಮೂಲನೆಯಾಗಿ, ಒಳ್ಳೆಯ ಕೆಲಸಗಳಾಗಲಿ. ಈ ಭಾಗದ ಜನತೆಗೆ ತಾಯಿ ಒಳ್ಳೆಯದು ಮಾಡಲಿ ಎಂದು ಪ್ರಾರ್ಥಿಸಲಾಗಿದೆ ಎಂದರು.

ಉಪವಿಭಾಗಾಧಿಕಾರಿ  ಅಜಯ್ ಕುಮಾರ್, ತಹಶೀಲ್ದಾರ್ ಸಿದ್ದೇಶ್ , ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಶಂಕರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಶಿವಕುಮಾರ್,ಉದ್ಯಮಿ ನೀಲೇಶ್, ಸಿದ್ದೇಗೌಡ್ರು,ರವೀಂದ್ರ,ರಾಜಣ್ಣ ನರಸಿಂಹಮೂರ್ತಿ,ಸಿದ್ದರಾಜು, ಎಪಿಎಂಸಿ ಸದಸ್ಯ ಚಂದ್ರಣ್ಣ, ಎ ಪಿ ಎಂಸಿ ಉಪಾಧ್ಯಕ್ಷ ಶಿವರಾಜು, ಬಿಜೆಪಿ ಉಪಾಧ್ಯಕ್ಷ ರಾಜಶೇಖರ್,  ಗ್ರಾಮ ಪಂಚಾಯಿತಿ ಸದಸ್ಯರಾದ ಸಿದ್ದರಾಜು, ಎಸ್ ಸಿ ಮೋರ್ಚ ಅಧ್ಯಕ್ಷರಾದ ರಮೇಶ್, ಕಾರ್ಯಕರ್ತರು, ಮುಖಂಡರು, ಗ್ರಾಮ ಪಂಚಾಯಿತಿ ಸದಸ್ಯರು,ಅಧ್ಯಕ್ಷರು ಗ್ರಾಮಸ್ಥರು ಇದ್ದರು.

Leave a Reply

Your email address will not be published. Required fields are marked *