ಜುಲೈ 3ರಂದು ಅರಸು ಕುರನ್ಗರಾಯ ಹೊತ್ತಗೆ ಲೋಕಾರ್ಪಣೆ

ತುಮಕೂರು : ಅರುಣೋದಯ ಶೈಕ್ಷಣಿಕ ಮತ್ತು ಗ್ರಾಮೀಣಾಭಿವೃದ್ಧಿ ಟ್ರಸ್ಟ್, ತುಮಕೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಜಲಜಂಬೂ ಲಿಂಕ್ಸ್ ಮತ್ತು ಮೈಸೂರಿನ ಆಲೇಖ್ಯ ಪ್ರಕಾಶನ ಇವರ ಸಹಯೋಗದಲ್ಲಿ ಡಾ.ರವಿಕುಮಾರ್ ನೀಹ ಅವರ ಅರಸು ಕುರನ್ಗರಾಯ ಹೊತ್ತಗೆ ಜುಲೈ 3ರ ಭಾನುವಾರ ಬೆಳಿಗ್ಗೆ 10.30ಕ್ಕೆ ತುಮಕೂರಿನ ಕನ್ನಡ ಭವನದಲ್ಲಿ ಲೋಕಾರ್ಪಣೆಗೊಳ್ಳಲಿದೆ.

ಹೊತ್ತಗೆ ಲೋಕಾರ್ಪಣೆಯನ್ನು ಸಂಸ್ಕøತಿ ಚಿಂತಕರು ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಎಸ್.ಜಿ.ಸಿದ್ದರಾಮಯ್ಯ ಮಾಡಲಿದ್ದಾರೆ. ವೇದಿಕೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಸಂಶೋಧಕರು ಹಾಗೂ ಸಾಮಾಜಿಕ ಹೋರಾಟಗಾರ ಹರ್ಷಕುಮಾರ್ ಕುಗ್ವೆ, ಸಂಶೋಧಕರು ಹಾಗೂ ಪ್ರಾಧ್ಯಾಪಕರಾದ ಡಾ.ಆರಡಿಮಲ್ಲಯ್ಯ ಕಟ್ಟೇರ, ಜಿಲ್ಲಾ ಎಸ್‍ಸಿ-ಎಸ್‍ಟಿ ನೌಕರರ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಅಧ್ಯಕ್ಷರಾದ ಡಾ.ವೈ.ಕೆ.ಬಾಲಕೃಷ್ಣಪ್ಪ, ಕೊರಟಗೆರೆ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರಾಂಶುಪಾಲರಾದ ನೇರಂ ನಾಗರಾಜು, ಜಿಲ್ಲಾ ಕ.ಸಾ.ಪ ಅಧ್ಯಕ್ಷರಾದ ಕೆ.ಎಸ್.ಸಿದ್ದಲಿಂಗಪ್ಪ, ಸೂರ್ಯ ಆಸ್ಪತ್ರೆ ಡಾ|| ಲಕ್ಷ್ಮೀಕಾಂತ್ ಮತ್ತು ಅರುಣೋದಯ ಶೈ ಮತ್ತು ಗ್ರಾ. ಟ್ರಸ್ಟ್‍ನ ಅಧ್ಯಕ್ಷರಾದ ಡಾ.ಮುಕುಂದ.ಎಲ್. ಉಪಸ್ಥಿತರಿರುವರು.

Leave a Reply

Your email address will not be published. Required fields are marked *