ತಿಪಟೂರು : ಬಸ್-ಕಾರು ಡಿಕ್ಕಿ ಮೂವರ ಸಾವು, ಇಬ್ಬರ ಸ್ಥಿತಿ ಗಂಭೀರ


ತಿಪಟೂರು: ಗುಬ್ಬಿಯ ಬಳಿ ವಾದ ಹಿಂದೆ ಕಾರು ಬಸ್ಸು ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಸಾವನ್ನಪ್ಪಿದ ಘಟನೆ ಮಾಸುವ ಮುನ್ನವೇ ಇಂದು ಬೇಳಿಗ್ಗೆ ತಿಪಟೂರಿನ ತಾಲ್ಲೂಕಿನ ಬಿದರಗುಡಿ ತಿಮ್ಮಲಾಪುರ ಸಮೀಪ ಕೆ.ಎಸ್.ಆರ್.ಟಿ.ಸಿ-ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ಮೃತಪಟ್ಟ ಘಟನೆ ನಡೆದಿದೆ

ಕೆ.ಎಸ್.ಆರ್.ಟಿ ಬಸ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೆ ಸಾವನ್ನಪ್ಪಿದ್ದು ಮತ್ತಿಬ್ಬರು ಸ್ಥಿತಿ ಚಿಂತಾಜನಕವಾಗಿದೆ.ಮೃತರು ತುಮಕೂರು ತಾಲ್ಲೂಕಿನ ಬೆಳ್ಳಾವಿ ಮೂಲದ ಸಿದ್ದರಾಜು (38) ಮೋಹನ್ (35) ರಾಜಣ್ಣ (28) ಎಂದು ತಿಳಿದು ಬಂದಿದೆ.


ಶಿವಮೊಗ್ಗದಿಂದ ಬೆಂಗಳೂರಿಗೆ ಹೋಗುತಿದ್ದ ಕೆ.ಎಸ್.ಆರ್ ಟಿ.ಸಿ.ಬಸ್ ಹಾಗೂ ತುಮಕೂರಿನಿಂದ ಅರಸೀಕೆರೆಗೆ ಹೋಗುತ್ತಿದ್ದ ಕಾರು ಮತ್ತಿಹಳ್ಳಿ ತಿರುವಿನಲ್ಲಿ ಮುಖಾಮುಖಿ ಡಿಕ್ಕಿಯಾಗಿವೆ. ಡಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು ಕೆ.ಎಸ್. ಆರ್. ಟಿ. ಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಂದಕಕ್ಕೆ ನುಗ್ಗಿದ್ದು, ಬಸ್‍ನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಗಾಯಗಳಾಗದೆ ಬಜಾವಾಗಿದ್ದಾರೆ.

ಘಟನೆಯ ಸ್ಥಳಕ್ಕೆ ಹೊನ್ನವಳ್ಳಿ ಪೆÇಲೀಸರು ಹಾಗೂ 108 ಅಂಬುಲೆನ್ಸ್ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ಆಗಮಿಸಿ ಗಾಯಗೊಂಡವರನ್ನು ತಕ್ಷಣ ರಕ್ಷಿಸಿ, ತಿಪಟೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೃತ ದೇಹಗಳನ್ನ ತಿಪಟೂರು ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ಸ್ಥಳಾಂತರಿಸಿದ್ದಾರೆ. ಹೊನ್ನವಲ್ಲಿ ಪೆÇಲೀಸರು ದೂರು ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *