ದ್ವಿತೀಯ ಪಿ.ಯು.ಸಿ.ಫಲಿತಾಂಶ ಪ್ರಕಟ: 28ನೇ ಸ್ಥಾನಕ್ಕೆ ಕುಸಿದ ತುಮಕೂರು ಜಿಲ್ಲೆ


ತುಮಕೂರು : 2021-22ನೇ ಸಾಲಿನ ದ್ವಿತೀಯ ಪಿ.ಯು.ಸಿ.ಫಲಿತಾಂಶ ಪ್ರಕಟಗೊಂಡಿದೆ. ತುಮಕೂರು ಜಿಲ್ಲೆಯು 58.90ರಷ್ಟು ಫಲಿತಾಂತ ಪಡೆದು 28ನೇ ಸ್ಥಾನ ಪಡೆದುಕೊಂಡಿದ್ದರೆ, ಚಿತ್ರದುರ್ಗ ಜಿಲ್ಲೆ ಕೊನೆಯ ಸ್ಥಾನದಲ್ಲಿದ್ದು, ದಕ್ಷಿಣಕನ್ನಡ ಜಿಲ್ಲೆ ಪ್ರಥಮ ಸ್ಥಾನದಲ್ಲಿದೆ.

ಶೈಕ್ಷಣಿಕ ಜಿಲ್ಲೆ ಎಂದು ಹೆಸರು ಪಡೆದುಕೊಂಡಿರುವ ತುಮಕೂರು ಜಿಲ್ಲೆ ಈ ಬಾರಿ ಪಿ.ಯು.ಸಿ. ಫಲಿತಾಂಶದಲ್ಲಿ ಕಳಪೆ ಸಾಧನೆಯನ್ನು ಮಾಡಿದ್ದು, ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಇದೇ ತುಮಕೂರು ಜಿಲ್ಲೆಯವರಾಗಿದ್ದರೂ ಫಲಿತಾಂಶವನ್ನು ಉತ್ತಮಗೊಳಿಸುವಲ್ಲಿ ವಿಫಲರಾಗಿದ್ದಾರೆ ಎನ್ನಲಾಗುತ್ತಿದೆ. 2020ರಲ್ಲಿ ಜಿಲ್ಲೆಯು ಶೇಕಡ 62.26%ರಷ್ಟು ಫಲಿತಾಂಶವನ್ನು ಪಡೆದುಕೊಂಡಿತ್ತು. 2021ರಲ್ಲಿ ಕೋವಿಡ್-19 ಹಿನ್ನಲೆಯಲ್ಲಿ ವ್ಯಾಲ್ಯೂವೇಷನ್ ಇಲ್ಲದೆ ಎಲ್ಲರನ್ನೂ ತೇರ್ಗಡೆಗೊಳಿಸಲಾಗಿತ್ತ
ಈ ಬಾರಿಯು ಬಾಲಕಿಯರೆ ಮೇಲುಗೈ ಸಾಧಿಸಿದ್ದು, ಬಾಲಕರು ಹಿನ್ನಡೆ ಅನುಭವಿಸಿದ್ದಾರೆ.

ಈ ಬಾರಿ 6,83, 563 ವಿದ್ಯಾರ್ಥಿಗಳು ಪರೀಕ್ಷ ಬರೆದಿದ್ದರು. ಇವರ ಪೈಕಿ 4, 22,966 ಮಂದಿ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಬಾಲಕಿಯರು 68.72ರಷ್ಟು ಮಂದಿ ತೇರ್ಗಡೆಯಾಗಿದ್ದರೆ, ಬಾಲಕರು 55.22ರಷ್ಟು ಮಂದಿ ಉತ್ತೀರ್ಣರಾಗಿದ್ದಾರೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.

ವಿಜ್ಞಾನ ವಿಭಾಗದಲ್ಲಿ 72.53ರಷ್ಟು ಫಲಿತಾಂಶ ದಾಖಲಾಗಿದ್ದರೆ, ವಾಣಿಜ್ಯ ವಿಭಾಗದಲ್ಲಿ 64.97ರಷ್ಟು ಫಲಿತಾಂಶ ಬಂದಿದೆ. ಕಲಾ ವಿಭಾಗದಲ್ಲಿ 48.97ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಎಂದರು.

ಈ ಭರಿಯು ದಕ್ಷಿಣ ಕನ್ನಡ ಜಿಲ್ಲೆ 88.02ರಷ್ಟು ಫಲಿತಾಂಶವನ್ನು ಪಡೆದು ಮೊದಲ ಸ್ಥಾನದಲ್ಲಿದ್ದರೆ, ಉಡುಪಿ 86.38ರಷ್ಟು ಫಲಿತಾಂಶ ದಾಖಲಿಸಿ ಎರಡನೇ ಸ್ಥಾನ ಪಡೆದುಕೊಂಡಿದೆ. ವಿಜಯಪುರ 77.14ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಮೂರನೇ ಸ್ಥಾನ ಪಡೆದುಕೊಂಡಿದೆ. ಚಿತ್ರದುರ್ಗ ಜಿಲ್ಲೆ ಕೊನೆಯ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ.

ಎಲ್ಲಾ ವಿಭಾಗಗಳಿಂದಲೂ ಸೇರಿ 91,169 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನಲ್ಲಿ ಉತ್ತೀರ್ಣರಾಗಿದ್ದಾರೆ. 2,14,155 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಪಾಸಾಗಿದ್ದಾರೆ. 68,444 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯನ್ನು ಪಡೆದಿದ್ದಾರೆ.

49, 301 ವಿದ್ಯಾರ್ಥಿಗಳು ಶೇ.50ಕ್ಕಿಂತ ಕಡಿಮೆ ಅಂಕಗಳನ್ನು ಪಡೆದು ತೇರ್ಗಡೆ ಹೊಂದಿದ್ದಾರೆ ಎಂದು ನಾಗೇಶ್ ತಿಳಿಸಿದ್ದಾರೆ.
ಗ್ರಾಮಾಂತರ ಭಾಗದಲ್ಲಿ ಶೇ.62.18 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರೆ, ನಗರ ಪ್ರದೇಶದಲ್ಲಿ ಶೇ.61.78ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಗ್ರಾಮೀಣ ವಿದ್ಯಾರ್ಥಿಗಳೇ ಮೇಲುಗೈ ಸಾಧಿಸಿದ್ದಾರೆ.

Leave a Reply

Your email address will not be published. Required fields are marked *