ತುಮಕೂರು- ಜಿಲ್ಲೆಯಲ್ಲಿ 1351 ಹಾಲು ಉತ್ಪಾದಕರ ಸಹಕಾರ ಸಂಘಗಳು ಕಾರ್ಯನಿರ್ವಹಿಸುತ್ತಿದ್ದು, ಪ್ರತಿನಿತ್ಯ 9.40 ಲಕ್ಷ ಲೀಟರ್ ಹಾಲನ್ನು ಶೇಖರಣೆಯಾಗುತ್ತಿದೆ ಎಂದು ತುಮಕೂರು ಹಾಲು ಒಕ್ಕೂಟಕದ ಆಡಳಿತಾಧಿಕಾರಿ ಡಾ. ಜಿ. ಉಮೇಶ್ ಹೇಳಿದರು.
ಕಳೆದ ಜೂನ್ 28 ರಂದು ಜಿಲ್ಲೆಯಲ್ಲಿ 9,80,836 ಲೀಟರ್ ಹಾಲು ಶೇಖರಣೆಯಾಗಿದ್ದು, ಇದು ಸರ್ವಕಾಲಿಗೆ ದಾಖಲೆಯಾಗಿದೆ ಎಂದು ಅವರು ತಿಳಿಸಿದರು.
ನಗರದ ಹೊರವಲಯದ ಸಿದ್ದಾರ್ಥ ನಗರದಲ್ಲಿರುವ ಡಾ. ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ನಡೆದ ತುಮಕೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಒಕ್ಕೂಟ ನಿಯಮಿತದ 2023-24ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
2023-24ನೇ ಸಾಲಿನಲ್ಲಿ 1053.80 ಕೋಟಿ ರೂ.ಗಳನ್ನು ಹಾಲು ಉತ್ಪಾದಕರುಗಳಿಗೆ ಬಟವಾಡೆ ರೂಪದಲ್ಲಿ ಪಾವತಿಸಲಾಗಿದೆ. ಪ್ರತಿ ಕೆ.ಜಿ. ಹಾಲಿಗೆ ವಾರ್ಷಿಕ ಸರಾಸರಿ 35.20 ರಂತೆ ಹಾಲಿಗೆ ಖರೀದಿ ದರ ನೀಡಲಾಗಿದೆ ಎಂದು ಹೇಳಿದರು.

ತುಮುಲ್ ವ್ಯವಸ್ಥಾಪಕ ನಿರ್ದೇಶ ಜಿ. ಶ್ರೀನಿವಾಸನ್ ಮಾತನಾಡಿ, ಸಹಕಾರ ಸಚಿವ ಕೆ.ಎನ್. ರಾಜಣ್ಣರವರ ಕನಸಿನ ಕೂಸಾದ ರೈತರಿಗೆ ಜಿಡ್ಡಿನ ಆಧಾರದ ಮೇಲೆ ಹಣವನ್ನು ಕೊಡುವ ಯೋಜನೆಯನ್ನು ಸಾಕಾರಗೊಳಿಸಲು ರಾಜ್ಯದ 14 ಒಕ್ಕೂಟಗಳ ಪೈಕಿ ತುಮಕೂರು ಹಾಲು ಒಕ್ಕೂಟವು ಮುಂಚೂಣಿಯಲ್ಲಿದೆ. ತಾಂತ್ರಿಕವಾಗಿ ಒಕ್ಕೂಟವು ಸದೃಢಗೊಳ್ಳುತ್ತಿದ್ದು, ಹಾಲು ಉತ್ಪಾದಕರ ಹಿತದೃಷ್ಟಿಯಿಂದ ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳಿ ಹಾಗೂ ಜಿಲ್ಲಾ ಹಾಲು ಒಕ್ಕೂಟಗಳ ಪರ ಉತ್ಪಾದಕರ ವಿಶ್ವಾಸ ಹೆಚ್ಚಿಸುವ ಹಾಗೂ ಪಾರದರ್ಶಕತೆಗೆ ಪೂರಕವಾಗಿರುವ ಏಕರೂಪ ತಂತ್ರಾAಶವನ್ನು ಒಕ್ಕೂಟದ ವ್ಯಾಪ್ತಿಯ AMCU ಘಟಕವಿರುವ ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ಅಳವಡಿಸಿ ಸಂಘಗಳು ಕಡ್ಡಾಯವಾಗಿ ಎರಡು ಸರತಿಗಳಲ್ಲಿ ಹಾಲಿನ ಪರೀಕ್ಷೆ ಮಾಡಿ ಜಿಡ್ಡಿನಾಧಾರದ ಮೇಲೆ ದರ ನೀಡಲು ಹಾಗೂ ಹಾಲು ಉತ್ಪಾದಕರಿಗೆ ವಾಸ್ತವ ಅವಧಿಯಲ್ಲಿ ಮಾಹಿತಿ ಲಭ್ಯವಾಗುವಂತೆ (Real Time Transfer) ಕ್ರಮ ಕೈಗೊಳ್ಳಲಾಗಿದೆ ಎಂದರು.
ಒಕ್ಕೂಟದಿಂದ ಸಂಘದ ನಿರ್ವಹಣೆಗೆ ನೀಡುತ್ತಿದ್ದ ವಂತಿಕೆಯನ್ನು ಕಳೆದ ಜನವರಿ 16 ರಿಂದ 50 ಪೈಸೆಯಿಂದ 70 ಪೈಸೆಗೆ ಹೆಚ್ಚಿಸಲಾಗಿದೆ. 2024-25ನೇ ಸಾಲಿನಲ್ಲಿ ವಂತಿಕೆಯನ್ನು ಪುನಃ 20 ಪೈಸೆ ಹಾಗೂ ಂಒಅS ತಂತ್ರಾAಶದ ನಿರ್ವಹಣೆಗೆ 10 ಪೈಸೆ ಹೆಚ್ಚಿಸಿ ಒಟ್ಟು 1 ರೂ. ಗಳನ್ನು ಸಂಘದ ನಿರ್ವಹಣೆಗೆ ನೀಡಲಾಗುತ್ತಿದೆ ಎಂದರು.
ಜಿಡ್ಡು ಆಧಾರದ ಮೇಲೆ ರೈತರಿಂದ ಹಾಲು ಸಂಗ್ರಹಿಸಿ ಕಲಬೆರಿಕೆ ಮುಕ್ತ ಹಾಲನ್ನು ಸ್ವೀಕರಿಸುವ ನಿಟ್ಟಿನಲ್ಲಿ ಎನ್.ಡಿ.ಡಿ.ಬಿ ಸಂಸ್ಥೆಯವರು ಅಭಿವೃದ್ಧಿಪಡಿಸಿರುವ ತಂತ್ರಾAಶವನ್ನು 1351 ಸಂಘಗಳ ಪೈಕಿ ತುಮಕೂರು ಹಾಲು ಒಕ್ಕೂಟದಲ್ಲಿ 1200 ಸಂಘಗಳಲ್ಲಿ ಅಳವಡಿಸಲಾಗಿದೆ. ಸದರಿ ಸಂಘಗಳಲ್ಲಿ ಜಿಡ್ಡಿನ ಆಧಾರದ ಮೇಲೆ ರೈತರಿಗೆ ಹಾಲಿನ ಖರೀದಿ ನೀಡಲಾಗುತ್ತಿದೆ. ಇದರಿಂದ ಹಾಲು ಉತ್ಪಾದಕರು ಬಹಳ ಸಂತುಷ್ಟರಾಗಿದ್ದಾರೆ ಎಂದರು.
ಜಿಲ್ಲೆಯ ರೈತರ ಅನುಕೂಲಕ್ಕಾಗಿ ಸ್ಥಾಪಿಸಲಾಗಿರುವ ತುಮಕೂರು ಜಿಲ್ಲಾ ರೈತರ ಮತ್ತು ಎಂ.ಪಿ.ಸಿ.ಎಸ್. ನೌಕರರ ಮತ್ತು ಸಾಮಾನ್ಯ ಕಲ್ಯಾಣ ಟ್ರಸ್ಟ್ ವತಿಯಿಂದ ನಡೆಸಲಾಗುತ್ತಿರುವ ಮಹಿಳಾ-ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ 260 ವಿದ್ಯಾರ್ಥಿನಿಯರು ಇದರ ಅನುಕೂಲವನ್ನು ಪಡೆಯುತ್ತಿದ್ದಾರೆ. ಸರ್ಕಾರ ಹಾಗೂ ಕ.ಹಾ.ಮ ನೆರವಿನೊಂದಿಗೆ 400 ವಿದ್ಯಾರ್ಥಿನಿಯರ ವಸತಿ ನಿಲಯದ ನೂತನ ಕಟ್ಟಡವನ್ನು ನಿರ್ಮಿಸುವ ಸಲುವಾಗಿ ಶಂಕುಸ್ಥಾಪನಾ ಕಾರ್ಯಕ್ರಮವನ್ನು ಗೃಹ ಸಚಿವರಾದ ಡಾ. ಜಿ.ಪರಮೇಶ್ವರ್ ಹಾಗೂ ಸಹಕಾರ ಸಚಿವ ಕೆ.ಎನ್.ರಾಜಣ್ಣರವರು ನೆರವೇರಿಸಿದ್ದು, ಕಾಮಗಾರಿಯು ಪ್ರಗತಿಯಲ್ಲಿದೆ ಎಂದು ಅವರು ತಿಳಿಸಿದರು.
ಒಕ್ಕೂಟದಲ್ಲಿ ಹಾಲು ಮತ್ತು ಹಾಲಿನ ಉತ್ಪನ್ನಗಳ ಮಾರಾಟದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ತುಮಕೂರು ಮತ್ತು ಬೆಂಗಳೂರು ಮಾರುಕಟ್ಟೆ ವ್ಯಾಪ್ತಿಯಲ್ಲಿ ವರದಿ ಸಾಲಿನಲ್ಲಿ ದಿನವಹಿ ಸರಾಸರಿ 3,13,130 ಲೀಟರ್ ಹಾಲು ಮತ್ತು 86,759 ಕೆ.ಜಿ. ಮೊಸರು ಮಾರಾಟ ಮಾಡಲಾಗಿದೆ. ಅಲ್ಲದೆ ಮುಂಬೈ ಮಾರುಕಟ್ಟೆಯಲ್ಲಿ ದಿನವಹಿ ಸರಾಸರಿ 1,99,600 ಲೀಟರ್ ಹಾಲು ಮಾರಾಟವಾಗುತ್ತಿದ್ದು, ಇದನ್ನು 2.50 ಲಕ್ಷ ಲೀಟರ್ಗಳಿಗೆ ಹೆಚ್ಚಿಸಲು ಎಲ್ಲಾ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದರು.
ಶೇಖರಣೆಗೆ ತಕ್ಕಂತೆ ಮಾರಾಟವನ್ನು ಮಾಡುವ ಉದ್ದೇಶದಿಂದ ಮಹಾರಾಷ್ಟç ರಾಜ್ಯದ ನೂತನ ಮಾರುಕಟ್ಟೆ ಪ್ರದೇಶಗಳಾದ ನಾಸಿಕ್, ಔರಂಗಾಬಾದ್, ಅಹ್ಮದ್ನಗರ, ಶಿರಡಿ ಪ್ರದೇಶಗಳಲ್ಲಿ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳ ಮಾರಾಟ ಜಾಲವನ್ನು ವಿಸ್ತರಿಸಲು ಯೋಜಿಸಲಾಗಿದೆ ಎಂದು ಅವರು ಹೇಳಿದರು.
ಇದೇ ಸಂದರ್ಭದಲ್ಲಿ ಹಾಲು ಒಕ್ಕೂಟದ ವತಿಯಿಂದ ಜಿಲ್ಲಾ ಮಟ್ಟದ ಅತ್ಯುತ್ತಮ ಸಾಮಾನ್ಯ ಸಂಘ, ಜಿಲ್ಲಾ ಮಟ್ಟದ ಅತ್ಯುತ್ತಮ ಮಹಿಳಾ ಸಂಘ, ಅತಿ ಹೆಚ್ಚು ಹಾಲು ಶೇಖರಿಸಿದ ತಾಲ್ಲೂಕು, ಅತಿ ಹೆಚ್ಚು ಗುಣಮಟ್ಟದ ಹಾಲು ಶೇಖರಿಸಿದ ತಾಲ್ಲೂಕು, ಅತಿ ಹೆಚ್ಚು ಹಾಲು ಶೇಖರಿಸಿದ ಹಾಲು ಉತ್ಪಾದಕರ ಸಹಕಾರ ಸಂಘ, ಅತಿ ಹೆಚ್ಚು ಗುಣಮಟ್ಟದ ಹಾಲು ಶೇಖರಿಸಿದ ಹಾಲು ಉತ್ಪಾದಕರ ಸಹಕಾರ ಸಂಘ, ತಾಲ್ಲೂಕು ಮಟ್ಟದ ಅತ್ಯುತ್ತಮ ಮಹಿಳಾ ಹಾಲು ಉತ್ಪಾದಕರ ಸಹಕಾರ ಸಂಘಗಳು, ಅತಿ ಹೆಚ್ಚು ಹಾಲು ಉತ್ಪಾದನೆ ಮಾಡಿದ ಮಹಿಳಾ ಸದಸ್ಯ, ಅತಿ ಹೆಚ್ಚು ಹಾಲು ಉತ್ಪಾದನೆ ಮಾಡಿದ ಪುರುಷ ಸದಸ್ಯ ಹಾಗೂ ಎಸ್ಸೆಸ್ಸೆಲ್ಸಿ-ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಒಕ್ಕೂಟದ ಅಧಿಕಾರಿ, ಸಿಬ್ಬಂದಿ ಹಾಗೂ ಸದಸ್ಯರ ಮಕ್ಕಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಹಾಗೂ ಎ.ಎಂ.ಸಿ.ಎಸ್ ತಂತ್ರಾAಶವನ್ನು ತಾಲ್ಲೂಕುಗಳಲ್ಲಿ ಸಾಕಾರಗೊಳಿಸಿದ್ದಕ್ಕಾಗಿ ಕ್ಷೇತ್ರ ವಿಸ್ತರಣಾಧಿಕಾರಿಗಳು ಹಾಗೂ ಕೋರ್ ಕಮಿಟಿ ಮುಖ್ಯಸ್ಥರುಗಳಿಗೆ ಅಭಿನಂದನಾ ಪತ್ರ ನೀಡಿ ಸನ್ಮಾನಿಸಲಾಯಿತು.
ಸಮಾರಂಭದಲ್ಲಿ ಹೈನುಗಾರ ರೈತರ ಆರೋಗ್ಯ ತಪಾಸಣೆ ಮಾಡಲಾಯಿತು.
ಸಭೆಯಲ್ಲಿ ಹಾಲು ಒಕ್ಕೂಟದ ವ್ಯವಸ್ಥಾಪಕರುಗಳಾದ ತಿಮ್ಮನಾಯಕ್, ವಿದ್ಯಾನಂದ್ ಹೆಚ್.ಎಂ., ಗಿರೀಶ್, ರಾಜು, ಚಂದ್ರಶೇಖರ್, ಶ್ರೀನಿವಾಸ್ ಸೇರಿದಂತೆ ಜಿಲ್ಲೆಯ ಹಾಲು ಉತ್ಪಾದಕರ ಸಹಕಾರ ಸಂಘಟಗಳ ಅಧ್ಯಕ್ಷರು, ಸದಸ್ಯರು ಹಾಗೂ ಒಕ್ಕೂಟದ ಅಧಿಕಾರಿ, ಸಿಬ್ಬಂದಿಗಳು ಪಾಲ್ಗೊಂಡಿದ್ದರು.