ಬೆಂಗಳೂರು : ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಯಾಗಿದ್ದ ರವೀಂದ್ರ.ಪಿ.ಎನ್ ಅವರು ಇಂದು ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರಾಗಿ ಅಧಿಕಾರವನ್ನು ಇಂದು ಸಂಜೆ ಸ್ವೀಕರಿಸಿದರು.
2025ರ ಡಿಸೆಂಬರ್ 31ರಂದು ರವೀಂದ್ರ ಅವರನ್ನು ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಲಾಗಿತ್ತು, ಇಂದು ಮಧ್ಯಾಹ್ನ ಚಿಕ್ಕಬಳ್ಳಾಪುರದ ಜಿಲ್ಲಾಧಿಕಾರಿಯಾಗಿ ವರ್ಗಾವಣೆಯಾಗಿ ಬಂದಿದ್ದ ಜಿ.ಪ್ರಭು ಅವರಿಗೆ ಅಧಿಕಾರ ಹಸ್ತಾಂತರಿಸಿದ ನಂತರ ಬೆಂಗಳೂರಿಗೆ ತೆರಳಿ ಅಧಿಕಾರ ಸ್ವೀಕರಿಸಿದರು.