ತುಮಕೂರು: ತುಮಕೂರು ವಿಶ್ವವಿದ್ಯಾನಿಲಯದ ಸಮಾಜ ಕಾರ್ಯ ಅಧ್ಯಯನ ಮತ್ತು ಸಂಶೋಧನ ವಿಭಾಗಕ್ಕೆ ಬೆಂಗಳೂರಿನ ಗೋಕುಲ್ ಎಕ್ಸ್ಪೆÇೀರ್ಟ್ಸ್ ಫೌಂಡೇಶನ್ ವತಿಯಿಂದ ಡಿಜಿಟಲ್ ಟಿವಿಗಳನ್ನು ಹಾಗೂ ಉತ್ಕರ್ಷ ಗ್ಲೋಬಲ್ ಎನ್ವಿರಾನ್ಮೆಂಟ್ ವತಿಯಿಂದ 300 ವಾಟರ್ ಬಾಟಲ್ಗಳನ್ನು ಕೊಡುಗೆಯಾಗಿ ನೀಡಲಾಯಿತು.
ಗೋಕುಲ್ ಎಕ್ಸ್ಪೆÇೀರ್ಟ್ಸ್ನ ಸಿಎಸ್ಆರ್ ಮತ್ತು ಇಎಚ್ಎಸ್ ಜನರಲ್ ಮ್ಯಾನೇಜರ್ ಮಹಾಂತೇಶ್ ಬಂಗಾರಿ ಮಾತನಾಡಿ, “ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು ನಮ್ಮ ಸಂಸ್ಥೆಯ ಮುಖ್ಯ ದ್ಯೇಯವಾಗಿದೆ. ಇಂದಿನ ಡಿಜಿಟಲ್ ಯುಗದಲ್ಲಿ ವಿದ್ಯಾರ್ಥಿಗಳ ಸಾಮರ್ಥ್ಯ ವೃದ್ಧಿಗೆ ತಂತ್ರಜ್ಞಾನ ಅತ್ಯಗತ್ಯ. ಈ ನಿಟ್ಟಿನಲ್ಲಿ ನಾವು ನೀಡುತ್ತಿರುವ ಸೌಲಭ್ಯಗಳು ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಪೂರಕವಾಗಲಿವೆ. ಇದರೊಂದಿಗೆ ಪ್ಲಾಸ್ಟಿಕ್ ಮುಕ್ತ ಸಮಾಜವನ್ನು ನಿರ್ಮಿಸುವುದು ನಮ್ಮ ಪ್ರಮುಖ ಗುರಿಯಾಗಿದೆ” ಎಂದು ತಿಳಿಸಿದರು.
ಸಂಸ್ಥೆಯ ಉಪಾಧ್ಯಕ್ಷರಾದ ಅಖಿಲ್ ಪಾಶ ಮಾತನಾಡಿ, “ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿ ತಂತ್ರಜ್ಞಾನದ ಬಗ್ಗೆ ಅರಿವು ಮೂಡಿಸುವುದು ಮತ್ತು ಅದರ ಬಳಕೆಯ ಜ್ಞಾನವನ್ನು ಹೆಚ್ಚಿಸುವುದು ಇಂದಿನ ಅಗತ್ಯವಾಗಿದೆ” ಎಂದರು.
ತುಮಕೂರು ವಿವಿ ಕುಲಪತಿಗಳಾದ ಪೆÇ್ರ. ಎಂ. ವೆಂಕಟೇಶ್ವರಲು ಮಾತನಾಡಿ ವಿಶ್ವವಿದ್ಯಾನಿಲಯಕ್ಕೆ ಡಿಜಿಟಲ್ ಟಿವಿ ಹಾಗೂ ವಾಟರ್ ಬಾಟಲ್ ಕೊಡುಗೆಯಾಗಿ ನೀಡಿದ ಸಂಸ್ಥೆಗೆ ಧನ್ಯವಾದಗಳು. ಇಂತಹ ಸಮಾಜಮುಖಿ ಕಾರ್ಯಕ್ರಮಗಳು ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಮತ್ತು ಅವರ ಜ್ಞಾನದ ಮಟ್ಟವನ್ನು ಹೆಚ್ಚಿಸಲು ಸಹಕಾರಿಯಾಗಲಿವೆ” ಎಂದು ಶ್ಲಾಘಿಸಿದರು.
ಇದೇ ಸಂದರ್ಭದಲ್ಲಿ ಸಮಾಜ ಕಾರ್ಯ ವಿಭಾಗದ ಮುಖ್ಯಸ್ಥರಾದ ಪೆÇ್ರ. ಕೆ. ಜಿ. ಪರಶುರಾಮ್ ಅವರು ವಿಭಾಗದ ಮತ್ತಷ್ಟು ಅಭಿವೃದ್ಧಿಗಾಗಿ ಮತ್ತು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕಂಪ್ಯೂಟರ್ ಲ್ಯಾಬ್ನ ಅಗತ್ಯವಿದೆ ಎಂಬ ಬೇಡಿಕೆಯನ್ನು ಸಂಸ್ಥೆಯ ಮುಂದಿಟ್ಟರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಂಸ್ಥೆಯ ಮುಖ್ಯಸ್ಥರು, ಮುಂದಿನ ದಿನಗಳಲ್ಲಿ ಈ ಬೇಡಿಕೆಯನ್ನು ಈಡೇರಿಸಲು ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ಉತ್ಕರ್ಷ ಗ್ಲೋಬಲ್ ಎನ್ವಿರಾನ್ಮೆಂಟ್ನ ರಾಜ್ಯ ಸಹ ಕಾರ್ಯದರ್ಶಿ ಜೋನಿತಾ, ವಿಭಾಗದ ಅಧ್ಯಾಪಕರು ಹಾಗೂ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.