ತುಮಕೂರು : ಜಿಲ್ಲೆಯಲ್ಲಿ ಮಾರ್ಚ್ 18 ರಿಂದ ಏಪ್ರಿಲ್ 2ರವರೆಗೆ ನಡೆಯಲಿರುವ ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಸಂಬಂಧ ಆಗಿರುವ ಸಿದ್ಧತೆ ಕುರಿತು ಶಾಲಾ ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ.
ಈ ಬಾರಿ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ಕ್ಕೆ ತುಮಕೂರು ದಕ್ಷಿಣ ಜಿಲ್ಲೆಯಿಂದ 23,693 ಹಾಗೂ ಮಧುಗಿರಿ ಜಿಲ್ಲೆಯಿಂದ 13,437 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 37,130 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿರುತ್ತಾರೆ.
ತುಮಕೂರು ಜಿಲ್ಲೆಯಲ್ಲಿ 6 ತಾಲ್ಲೂಕುಗಳಿಂದ 82 ಮತ್ತು ಮಧುಗಿರಿ ಜಿಲ್ಲೆಯ 4 ತಾಲ್ಲೂಕುಗಳಿಂದ 49 ಪರೀಕ್ಷಾ ಕೇಂದ್ರಗಳು ಸೇರಿದಂತೆ ಒಟ್ಟು 131 ಪರೀಕ್ಷಾ ಕೇಂದ್ರಗಳನ್ನು ರಚಿಸಲಾಗಿದೆ. ತುಮಕೂರು ದಕ್ಷಿಣ ಜಿಲ್ಲೆಯಲ್ಲಿ 46 ಕ್ಲಸ್ಟರ್ ಸಹಿತ ಪರೀಕ್ಷಾ ಕೇಂದ್ರಗಳು ಹಾಗೂ 36 ಕ್ಲಸ್ಟರ್ ರಹಿತ ಕೇಂದ್ರಗಳು ಇರುತ್ತವೆ. ಮಧುಗಿರಿ ಜಿಲ್ಲೆಯಿಂದ 12 ಕ್ಲಸ್ಟರ್ ಸಹಿತ ಪರೀಕ್ಷಾ ಕೇಂದ್ರಗಳು ಹಾಗೂ 37 ಕ್ಲಸ್ಟರ್ ರಹಿತ ಕೇಂದ್ರಗಳು ಇರುತ್ತವೆ. ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಮುಖ್ಯ ಅಧೀಕ್ಷಕರು, ಪ್ರಶ್ನೆ ಪತ್ರಿಕೆ ಪಾಲಕರುಗಳನ್ನು ನೇಮಕ ಮಾಡಿ, ಆದೇಶಗಳನ್ನು ಜಾರಿ ಮಾಡಲಾಗಿರುತ್ತದೆ.
ಜಿಲ್ಲೆಯ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿಯೂ ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯ ವ್ಯವಸ್ಥೆ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಉತ್ತಮ ಡೆಸ್ಕ್ಗಳ ವ್ಯವಸ್ಥೆ, ಕೊಠಡಿಗಳ ವ್ಯವಸ್ಥೆ ಉತ್ತಮ ಗಾಳಿ ಬೆಳಕಿನ ವ್ಯವಸ್ಥೆಯನ್ನು ಮಾಡಲಾಗಿರುತ್ತದೆ.
ಪರೀಕ್ಷಾ ದಿನಗಳಂದು ಕೇಂದ್ರದ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಭಾ.ನಾ.ಸು.ಸಂ 2023 ಕಲಂ 163ರಡಿ ಕಟ್ಟುನಿಟ್ಟಾದ ನಿμÉೀಧಾಜ್ಞೆಯನ್ನು ಜಾರಿಗೊಳಿಸಲಾಗಿದೆ. ಅದರಂತೆ ಕೇಂದ್ರದ ಸುತ್ತಮುತ್ತಲಿನ ಎಲ್ಲಾ ಜೆರಾಕ್ಸ್, ಪ್ರಿಂಟಿಂಗ್, ಸೈಬರ್ ಕೆಫೆ, ಹಾಗೂ ಟ್ಯುಟೋರಿಯಲ್ ಕೆಂದ್ರಗಳನ್ನು ಪರೀಕ್ಷಾ ದಿನಗಳಂದು ಕಡ್ಡಾಯವಾಗಿ ಮುಚ್ಚಿಸಲು ಕ್ರಮವಹಿಸಲಾಗಿರುತ್ತದೆ.
ಪರೀಕ್ಷಾ ಕೇಂದ್ರಗಳಲ್ಲಿ ಮತ್ತು ಜಿಲ್ಲಾ ಕೇಂದ್ರದಲ್ಲಿ ವೆಬ್ ಕಾಸ್ಟಿಂಗ್ ವ್ಯವಸ್ಥೆಯ ಬಗ್ಗೆ ಜಿಲ್ಲೆಯ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಪ್ರತಿ ಕೊಠಡಿಯಲ್ಲಿ ಪರೀಕ್ಷಾ ಕಚೇರಿಯಲ್ಲಿ ಮತ್ತು ಕಾರಿಡಾರುಗಳಲ್ಲಿ ಕಡ್ಡಾಯವಾಗಿ ಸಿ.ಸಿ ಕ್ಯಾಮೆರಾಗಳನ್ನು ಅಳವಡಿಸಲು ಸೂಚಿಸಿದೆ. ಈ ಕೇಂದ್ರಗಳ ಎಲ್ಲಾ ಚಲನ ವಲನಗಳನ್ನು ವೀಕ್ಷಿಸಲು ಜಿಲ್ಲಾ ಹಂತದಲ್ಲಿ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ವೆಬ್ ಕಾಸ್ಟಿಂಗ್ ವ್ಯವಸ್ಥೆಯನ್ನು ಮಾಡಲಾಗಿರುತ್ತದೆ.
ಎಲ್ಲಾ ಕೇಂದ್ರಗಳಲ್ಲಿಯೂ ಸಿ.ಸಿ ಕ್ಯಾಮೆರಾ ಅಳವಡಿಸಲಾಗುತ್ತಿದ್ದು ಅದನ್ನು ಜಿಲ್ಲಾ ಹಂತದಲ್ಲಿ ವೆಬ್ ಕಾಸ್ಟಿಂಗ್ ಮೂಲಕ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ತೆರೆಯಲಿರುವ ವೆಬ್ ಕಾಸ್ಟಿಂಗ್ ಕೇಂದ್ರದಲ್ಲಿ ವೀಕ್ಷಣೆ ಮಾಡಲಾಗುತ್ತದೆ. ಪ್ರಸ್ತುತ ಬೇಸಿಗೆ ಕಾಲವಾಗಿದ್ದು ಗಾಳಿ ಬೆಳಕಿನ ಅಗತ್ಯತೆ ಇರುತ್ತದೆ. ಇದರಿಂದ ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳಲ್ಲಿ ಹಾಗೂ ಜಿಲ್ಲಾ ವೆಬ್ ಕಾಸ್ಟಿಂಗ್ ಕೇಂದ್ರದಲ್ಲಿ ಯಾವುದೇ ಕಾರಣಕ್ಕೂ ವಿದ್ಯುತ್ ವ್ಯತ್ಯಯವಾಗದಂತೆ ಬೆಸ್ಕಾಂ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿರುತ್ತಾರೆ.
ಎಲ್ಲಾ ಪರೀಕ್ಷಾ ಕೇಂದ್ರಗಳಿಗೂ ಆರೋಗ್ಯ ಇಲಾಖೆಯಿಂದ ಒಬ್ಬರು ಸಿಬ್ಬಂದಿಯನ್ನು ನಿಯೋಜಿಸುವುದು. ಹಾಗೂ ಬಿಸಿಲಿನ ತಾಪ ಹೆಚ್ಚಿರುವುದರಿಂದ ಓ.ಆರ್.ಎಸ್ ಮತ್ತು ಇತರೆ ಪೂರಕ ಅಗತ್ಯ ಔಷದಿಗಳೊಂದಿಗೆ ಕೇಂದ್ರದಲ್ಲಿರುವಂತೆ ಕ್ರಮ ಕೈಗೊಳ್ಳಲು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಕೋರಲಾಗಿದೆ.
ವಿದ್ಯಾರ್ಥಿಗಳಿಗೆ ಪರೀಕ್ಷಾ ದಿನಗಳಂದು ಪ್ರವೇಶ ಪತ್ರ ತೋರಿಸಿದಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿರುತ್ತದೆ ಹಾಗೂ ಪರೀಕ್ಷಾ ದಿನಗಳಂದು ಬಸ್ ಸಂಚಾರದಲ್ಲಿ ವ್ಯತ್ಯಯ ಆಗದಂತೆ ಅಗತ್ಯ ಕ್ರಮ ವಹಿಸುವಂತೆ ತುಮಕೂರು ವಿಭಾಗದ ಕೆ.ಎಸ್.ಆರ್.ಟಿ.ಸಿ ಸಂಚಾರ ವಿಭಾಗೀಯ ನಿಯಂತ್ರಕರಿಗೆ ಜಿಲ್ಲಾಧಿಕಾರಿಗಳು ಸೂಚಿಸಿರುತ್ತಾರೆ.
ಮುಖ್ಯ ಅಧೀಕ್ಷಕರು, ಪ್ರಶ್ನೆ ಪತ್ರಿಕೆ ಪಾಲಕರು ಹಾಗೂ ಪರೀಕ್ಷಾ ಕಾರ್ಯ ನಿರ್ವಹಿಸುವ ಎಲ್ಲರಿಗೂ ಮಂಡಳಿ ವತಿಯಿಂದ ಮಾರ್ಚ್ 11 ಮತ್ತು 12ರಂದು ಹಾಗೂ ಜಿಲ್ಲಾ ಹಂತದಲ್ಲಿ ಮಾರ್ಚ್ 12ರಂದು ವಿಸ್ತøತವಾದ ತರಬೇತಿಯನ್ನು ನೀಡಲಾಗಿರುತ್ತದೆ.
ಪರೀಕ್ಷಾ ಕಾರ್ಯವನ್ನು ವ್ಯವಸ್ಥಿತವಾಗಿ ನಿರ್ವಹಿಸಲು ಮಂಡಳಿಯು ನೀಡಿರುವ ನಿರ್ದೇಶನಗಳ ಅನುಸಾರ ಅಗತ್ಯ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿರುತ್ತದೆ ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿದೇಶಕರು(ಆಡಳಿತ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.