ಪ್ರತಿನಿತ್ಯದ ಅಧ್ಯಯನದಿಂದ ಮಾತ್ರ ಸ್ಪರ್ಧಾತ್ಮಕ ಯುಗದಲ್ಲ್ಲಿ ಯಶಸ್ವಿ

ತುಮಕೂರು : ವಿದ್ಯಾರ್ಥಿಗಳು ಪ್ರತಿನಿತ್ಯ ಅಧ್ಯಯನ ಶೀಲರಾಗಿದ್ದಾಗ ಮಾತ್ರ ಸ್ಪರ್ಧಾತ್ಮಕ ಯುಗದಲ್ಲ್ಲಿ ಯಶಸ್ವಿಯಾಗಲು ಸಾಧ್ಯ, ಪ್ರತಿನಿತ್ಯದ ಅಧ್ಯಯನ ನಿಮ್ಮನ್ನು ಸಾಧನೆಯ ಶಿಖರಕ್ಕೇರಿಸುತ್ತದೆ ಎಂದು ನೋವಾಸ್ ಪ್ರೈವೇಟ್ ಲಿಮಿಟೆಡ್‍ನ ಸಂಸ್ಥಾಪಕರಾದ ಹೇಮಂತ್ ರಾಮೇಗೌಡ ತಿಳಿಸಿದರು.

ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ಎರಡು ದಿನ ನಡೆದ ಟೆಕ್ನೋಟಿಯಾ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ವಿದ್ಯಾರ್ಥಿಗಳು ಕಾಲೇಜು ದಿನಗಳಲ್ಲೇ ಸಂಶೋಧನಾ ಮನೋಭಾವವನ್ನು ಬೆಳೆಸಿಕೊಳ್ಳಿ ಇದರಿಂದ ನಿಮ್ಮ ಮುಂದಿನ ಭವಿಷ್ಯ ಉತ್ತಮವಾಗಿರುತ್ತದೆ. ಒಂದು ವಿಚಾರದ ಬಗ್ಗೆ ಕ್ರಿಯಾತ್ಮಕವಾಗಿ ಯೋಚಿಸಿ ಅದನ್ನು ಕಾರ್ಯರೂಪಕ್ಕೆ ತರುವಲ್ಲಿ ಪ್ರಯತ್ನಿಸಿ. ದಿನನಿತ್ಯ ನಾವು ಎದುರಿಸುತ್ತಿರುವ ಸಮಸ್ಯೆಗಳಿಗೆ ಉತ್ತಮ ಪರಿಹಾರ ನೀಡಲು ನಾವು ಸದಾ ಪ್ರಯತ್ನಿಸುತ್ತಿರಬೇಕು. ಟೆಕ್ನೋಡಿಯಾ ಕಾರ್ಯಕ್ರಮವು ವಿದ್ಯಾರ್ಥಿಗಳ ಹೊಸ ಹೊಸ ಆವಿಷ್ಕಾರಗಳಿಗೆ ಪ್ರೋತ್ಸಾಹ ನೀಡುತ್ತದೆ. ಇಂತಹ ಅವಕಾಶಗಳನ್ನು ಬಳಸಿಕೊಳ್ಳಿ ಎಂದು ಹೇಳಿದರು.

ಸಾಹೇ ವಿವಿಯ ಪರೀಕ್ಷಾಂಗ ನಿಯಂತ್ರಕರಾದ ಡಾ. ಸುನಿಲ್ ಮಾತನಾಡಿ ವಿದ್ಯಾರ್ಥಿಗಳು ಈ ಟಿಕ್ನೋಡಿಯಾ ಕಾರ್ಯಕ್ರಮದಲ್ಲಿ ಅತ್ಯತ್ತಮವಾದ ಪ್ರಾಜೆಕ್ಟ್‍ಗಳನ್ನು ಕೇವಲ ಪ್ರದರ್ಶನ ಮಾಡಲು ಇಡದೆ. ಇದರ ಬಗ್ಗೆ ಮತ್ತಷ್ಟು ಸಂಶೋಧನೆಯನ್ನು ಮಾಡಿ ಈ ಪ್ರಾಜೆಕ್ಟ್ ಅನ್ನು ಮತ್ತೊಂದು ಹಂತಕ್ಕೆ ಅಭಿವೃದ್ಧಿಪಡಿಸಿ. ನಿಮ್ಮ ಪ್ರಾಜೆಕ್ಟ್‍ಗಳು ಸಮಾಜದಲ್ಲಿನ ಸಮಸ್ಯೆಗಳಿಗೆ ಪರಿಹಾರವಾಗಿರಬೇಕು ಎಂದು ಹೇಳಿದರು.

ಎಸ್‍ಎಸ್‍ಐಟಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಮಹಾಂತೇಶ್ ಎಂ. ನಡಕಟ್ಟಿ ಮಾತನಾಡಿ ಈ ಟೆಕ್ನೋಡಿಯಾ ಕಾರ್ಯಕ್ರಮ ವಿದ್ಯಾರ್ಥಿಗಳ ಆವಿಷ್ಕಾರಗಳಿಗೆ ಉತ್ತಮ ವೇದಿಕೆಯಾಗಿದೆ. ಇದರ ಮೂಲಕ ವಿದ್ಯಾರ್ಥಿಗಳ ಆತ್ಮ ವಿಶ್ವಾಸವನ್ನು ಹೆಚ್ಚಿಸುತ್ತದೆ. ವಿದ್ಯಾರ್ಥಿಗಳು ಇಂತಹ ವೇದಿಕೆಗಳನ್ನು ಉತ್ತಮವಾಗಿ ಬಳಸಿಕೊಳ್ಳಿ ಎಂದು ಹೇಳಿದರು.

ಈ ಸಂದರ್ಭದಲ್ಲಿ ಅತ್ಯುತ್ತಮವಾಗಿ ಪ್ರಾಜೆಕ್ಟ್‍ಮಾಡಿ ಪ್ರದರ್ಶಿಸಿದ ವಿದ್ಯಾರ್ಥಿಗಳಿಗೆ ವಿಭಾಗವಾರು ಪ್ರಥಮ ದ್ವಿತೀಯ ಬಹುಮಾನಗಳನ್ನು ವಿತರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಅಕಾಡೆಮಿಕ್ ಡೀನ್ ಡಾ. ಎಸ್ ರೇಣುಕಾಲತಾ, ಕಾರ್ಯPssÀ್ರಮ ಸಂಯೋಜಕರಾದ ಡಾ. ಮನು, ಗುರುನಂದನ್ ಹಾಗೂ ಕಾಲೇಜಿನ ಎಲ್ಲಾ ವಿಭಾಗದ ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಹಾಜರಿದ್ದರು.

Leave a Reply

Your email address will not be published. Required fields are marked *