ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಸ್ಕಾಲರ್ ಶಿಫ್ ಟೆಸ್ಟ್ ಅಗತ್ಯ : ಡಾ.ಎಂ.ಆರ್.ಹುಲಿನಾಯ್ಕರ್

ತುಮಕೂರು: ಉತ್ತಮ ಅಂಕಗಳೊಂದಿಗೆ ಎಂಜಿನಿಯರಿಂಗ್ ಪದವಿ ಪಡೆಯುವುದು ಉದ್ಯೋಗ ನಿರೀಕ್ಷಿಸಲು ಕೇವಲ ಗೇಟ್ ಪಾಸ್ ಇದ್ದಂತೆ, ಆದರೆ ಉದ್ಯೋಗ ಪಡೆದು ವೃತ್ತಿಯಲ್ಲಿ ಯಶಸ್ಸು ಕಾಣಲು ಕೌಶಲ್ಯಗಳ ಕಲಿಕೆ ಅತ್ಯಂತ ಮುಖ್ಯವಾಗಿದೆ. ಶ್ರೀದೇವಿ ಕಾಲೇಜಿನಲ್ಲಿ 13 ಕ್ಕೂ ಹೆಚ್ಚು ಕೋರ್ಸುಗಳಿದ್ದು, ಅವುಗಳ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳುವ ಅವಕಾಶವಿದೆ. ಇಲ್ಲಿನ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಮತ್ತು ಅವರಿಗೆ ಉತ್ತಮ ಭವಿಷ್ಯ ಕಟ್ಟಿಕೊಡುವ ನಿಟ್ಟಿನಲ್ಲಿ ಕಾಲೇಜು ಆಡಳಿತ ಮಂಡಳಿ ಪೂರ್ಣ ಜವಾಬ್ದಾರಿ ತೆಗೆದುಕೊಳ್ಳಲಿದೆ ಎಂದು ಶ್ರೀದೇವಿ ಸಮೂಹ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಡಾ.ಎಂ.ಆರ್.ಹುಲಿನಾಯ್ಕರ್‍ರವರು ಅಭಿಪ್ರಾಯಪಟ್ಟರು.

 ನಗರದ ಶಿರಾರಸ್ತೆಯ ಶ್ರೀದೇವಿ ಇಂಜಿನಿಯರಿಂಗ್ ಮತ್ತು ತಾಂತ್ರಿಕ ಮಹಾವಿದ್ಯಾಲಯ ವತಿಯಿಂದ ಮೇ.10 ರಂದು ಭಾನುವಾರ ಬೆಳಿಗ್ಗೆ 10 ಗಂಟೆಗೆ ಶ್ರೀದೇವಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪಿ.ಯು.ಸಿ. ಉತ್ತೀರ್ಣರಾಗಿ ಬಿ.ಇ. ಪ್ರವೇಶಾತಿ ಬಯಸುತ್ತಿರುವ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಪ್ರವೇಶಾತಿ ಮತ್ತು ಸ್ಕಾಲರ್ ಶಿಫ್    ಪರೀಕ್ಷೆ-2026 ಉದ್ಘಾಟನಾ ಸಮಾರಂಭದಲ್ಲಿ ಮಾತನಾಡುತ್ತಾ ಬಡತನ ಉನ್ನತ ಶಿಕ್ಷಣಕ್ಕೆ ಅಡ್ಡಿಯಾಗಬಾರದು ಎಂಬ ಸದುದ್ದೇಶ ಹಾಗೂ ಸಾಮಾಜಿಕ ಕಳಕಳಿಯಿಂದ ಕಾಲೇಜು ಕಳೆದ ಹತ್ತು ವರ್ಷಗಳಿಂದಲೂ ಸ್ಕಾಲರ್‍ಶಿಪ್ ಟೆಸ್ಟ್ ನಡೆಸುತ್ತಿದ್ದು, ಈವರೆವಿಗೂ ಹಲವಾರು ವಿದ್ಯಾರ್ಥಿಗಳು ಉಚಿತವಾಗಿ ಪ್ರತಿ ವಿಭಾಗದಲ್ಲೂ ಸೀಟುಗಳನ್ನು ಪಡೆದುಕೊಳ್ಳುತ್ತಿದ್ದು ಹಲವಾರು ಪ್ರತಿಭಾವಂತ ಗ್ರಾಮೀಣ ಭಾಗದ ಆರ್ಥಿಕವಾಗಿ ದುರ್ಬಲರಾದ ವಿದ್ಯಾರ್ಥಿಗಳು ಪ್ರಯೋಜನ ಪಡೆದುಕೊಂಡಿದ್ದಾರೆಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಶ್ರೀದೇವಿ ಸಮೂಹ ಶಿಕ್ಷಣ ಸಂಸ್ಥೆಯ ನಿರ್ದೇಶಕ ಡಾ. ರಮಣ್ ಎಂ ಹುಲಿನಾಯ್ಕರ್‍ರವರು ಮಾತನಾಡುತ್ತಾ ಬೆಂಗಳೂರಿನಂತಹ ಒಂದನೇ ಶ್ರೇಣಿಯ ನಗರಗಳಲ್ಲಿ ವಿದ್ಯಾರ್ಥಿಗಳಿಗೆ ಯಾವೆಲ್ಲಾ ಸೌಲಭ್ಯಗಳು ಲಭ್ಯವಾಗುತ್ತವೆಯೋ ಅವೆಲ್ಲವನ್ನೂ ಈ ಕಾಲೇಜಿನಲ್ಲಿಯೇ ಕಲ್ಪಿಸಲಾಗಿದೆ. ಹೀಗಾಗಿ, ಇಲ್ಲಿನ ಸೌಲಭ್ಯಗಳನ್ನು ವಿದ್ಯಾರ್ಥಿಗಳು ಸೂಕ್ತವಾಗಿ ಬಳಸಿಕೊಂಡರೆ ದೊಡ್ಡ ನಗರಗಳಲ್ಲಿ ಕಲಿತ ವಿದ್ಯಾರ್ಥಿಗಳಿಗೆ ಸರಿಸಮನಾಗಿ ಉದ್ಯೋಗಾವಕಾಶಗಳನ್ನು ಪಡೆಯಲು ಸಾಧ್ಯವಾಗುತ್ತದೆ ಎಂದರು. ಸುತ್ತಮುತ್ತ ನಡೆಯುತ್ತಿರುವ ಬೆಳವಣಿಗೆಗಳನ್ನು ನೋಡಿ ತಮಗೆ ಉದ್ಯೋಗ ಸಿಗುತ್ತದೋ ಇಲ್ಲವೋ ಎಂದು ವಿದ್ಯಾರ್ಥಿಗಳು ನಿರಾಶರಾಗಬಾರದು. ತಂತ್ರಜ್ಞಾನ ಬದಲಾದಂತೆ ಕೆಲವೆಡೆ ಉದ್ಯೋಗ ಕಡಿತವಾಗುವುದು ಸಾಮಾನ್ಯ ಪ್ರಕ್ರಿಯೆಯಾಗಿರುತ್ತದೆ. ಆದರೆ, ಹೊಸ ಕೌಶಲ್ಯಗಳನ್ನು ಕಲಿಯುವ ಪ್ರವೃತ್ತಿ ಮೈಗೂಡಿಸಿಕೊಂಡವರಿಗೆ ಇದರಿಂದ ಯಾವ ತೊಂದರೆಯೂ ಆಗುವುದಿಲ್ಲ. ಹಳೆ ಉದ್ಯೋಗಗಳ ಬದಲಿಗೆ ಹೊಸ ಉದ್ಯೋಗಗಳು ಸೃಷ್ಟಿಯಾಗುತ್ತವೆ ಎಂಬುದನ್ನು ಗಮನದಲ್ಲಿರಿಸಿ ಕೊಳ್ಳಬೇಕು ಎಂದು ನುಡಿದರು.

ಇದೇ ಸಂದರ್ಭದಲ್ಲಿ ಶ್ರೀದೇವಿ ಸಂಸ್ಥೆಯ ಮಾನವ ಸಂಪನ್ಮೂಲ ಮತ್ತು ಮಾಹಿತಿ ತಂತ್ರಜ್ಞಾನ ನಿರ್ದೇಶಕರಾದ ಎಂ.ಎಸ್.ಪಾಟೀಲ್‍ರವರು ಮಾತನಾಡುತ್ತಾ ಕಾಲೇಜಿನಲ್ಲಿ ಈಗಿನ ಉದ್ಯಮ ರಂಗಕ್ಕೆ ಅತ್ಯಂತ ಪ್ರಸ್ತುತವಾದ ಹಾಗೂ ಮುಂದಿನ ಇಪ್ಪತ್ತು ವರ್ಷಗಳ ಕಾಲ ಬೇಡಿಕೆಯಲ್ಲಿರುವ ಕೋರ್ಸ್‍ಗಳಿವೆ. ಎ.ಐ.ತಂತ್ರಜ್ಞಾನದಿಂದ ವಾಸ್ತವವಾಗಿ ಹೊಸ-ಹೊಸ ಬಗೆಯ ಉದ್ಯೋಗಗಳು ಹೆಚ್ಚಾಗಿ ಸೃಷ್ಟಿಯಾಗಲಿವೆ. ಹಾಗೆಯೇ, ಸಿವಿಲ್, ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಕೂಡ ಈಗಿನ ಕಾಲಕ್ಕೆ ಅನುಗುಣವಾದ ಕೌಶಲ್ಯಗಳನ್ನು ಕಲಿತರೆ ಸದಾ ಬೇಡಿಕೆಯಲ್ಲಿರುತ್ತಾರೆ. ಗ್ರಾಮೀಣ ಭಾಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರಕಬೇಕು ಅವರ ಭವಿಷ್ಯ ಹಾಸನಾಗಬೇಕು ಎಂಬ ಉದ್ದೇಶದಿಂದ ಈ ಯೋಜನೆಯನ್ನು ರೂಪಿಸಲಾಗಿದೆ ಎಂದು ವಿವರಿಸಿದರು. ಯಾವ ಕೋರ್ಸ್ ಮಾಡಿದರೆ ಸೂಕ್ತ ಎಂಬ ಬಗ್ಗೆ ವಿದ್ಯಾರ್ಥಿಗಳು ಗೊಂದಲಕ್ಕೆ ಬೀಳಬಾರದು. ಯಾವುದೇ ಕೋರ್ಸ್ ಓದಿದರೂ ಉತ್ಕøಷ್ಟತೆ ಸಾಧಿಸಿದರೆ ಬೇಡಿಕೆಗೇನೂ ಕೊರತೆ ಇಲ್ಲ. ನಮ್ಮ ಸಂಸ್ಥೆಗೆ ಇನ್ಫೊಸಿಸ್, ಟಿಸಿಎಸ್, ಕಾಗ್ನಿಜೆಂಟ್ ಸೇರಿದಂತೆ 75ಕ್ಕೂ ಹೆಚ್ಚು ಕಂಪನಿಗಳು ಕ್ಯಾಂಪಸ್ ಸಂದರ್ಶನಕ್ಕೆ ಬರುತ್ತವೆ. ವಿದ್ಯಾರ್ಥಿಗಳು ಅಂಕ ಗಳಿಕೆಯ ಜೊತೆಗೆ ಸಂದರ್ಶನದಲ್ಲಿ ಉತ್ತಮ ಸಾಧನೆ ಮಾಡಲು ಅಗತ್ಯವಾದ ಕೌಶಲಗಳನ್ನು ಕಲಿಯಲು ಆರಂಭದಿಂದಲೇ ಗಮನ ನೀಡಬೇಕು ಎಂದರು.

1000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಂಧ್ರಪ್ರದೇಶ ಮತ್ತು ತಮಿಳುನಾಡು ರಾಜ್ಯಗಳಿಂದ ವಿದ್ಯಾರ್ಥಿಗಳು ಆಗಮಿಸಿದ್ದಾರೆ. ಬೀದರ್, ರಾಯಚೂರು, ಬಳ್ಳಾರಿ, ಯಾದಗಿರಿ, ಬೆಳಗಾವಿ, ಕಾರವಾರ, ದಾವಣಗೆರೆ, ಉಡುಪಿ, ಗದಗ, ಬಸವಪಟ್ಟಣ, ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು ಸುತ್ತಮುತ್ತಲಿನ ತಾಲ್ಲೂಕುಗಳಿಂದಲೂ ಸೇರಿದಂತೆ ರಾಜ್ಯದ ನಾನಾ ಜಿಲ್ಲೆಗಳಿಂದ ಪೋಷಕರು ಮತ್ತು ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಶ್ರೀದೇವಿ ಇಂಜಿನಿಯರಿಂಗ್ ಕಾಲೇಜಿನ ಉಪಪ್ರಾಂಶುಪಾಲರಾದ ಡಾ.ಎನ್.ಚಂದ್ರಶೇಖರ್‍ರವರು ಮಾತನಾಡುತ್ತಾ ಶ್ರೀದೇವಿ ಇಂಜಿನಿಯರಿಂಗ್ ಕೋರ್ಸ್‍ಗಳ ಸಂಪೂರ್ಣ ಮಾಹಿತಿಗಳನ್ನು ತಿಳಿಸುತ್ತಾ, ಕಾಲೇಜಿಗೆ ಸೇರಿದರೆ ವಿದ್ಯಾರ್ಥಿಗಳ ಭವಿಷ್ಯ ಹೇಗೆ ಉತ್ತಮವಾಗುತ್ತದೆ. ಸ್ಕಾಲರ್‍ಶಿಪ್ ನಡೆದ ಪ್ರವೇಶಾತಿ ಪರೀಕ್ಷೆಯಲ್ಲಿ ಸುಮಾರು 1000 ವಿದ್ಯಾರ್ಥಿಗಳು ಭಾಗವಹಿಸಿದ್ದು, ಎಲ್ಲಾ ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆಸಿ ಅಂದೇ ಫಲಿತಾಂಶದ ರ್ಯಾಂಕಿಂಗ್‍ಗಳನ್ನು ಪ್ರಕಟಿಸಲಾಯಿತು. ಸ್ಕಾಲರ್ ಶಿಪ್ ಪರೀಕ್ಷೆಯಲ್ಲಿ ರ್ಯಾಂಕ್ 1 ರಿಂದ 11 ರವರೆಗೆ ಪಡೆದ ವಿದ್ಯಾರ್ಥಿಗಳಿಗೆ ನಾಲ್ಕು ವರ್ಷ ಉಚಿತ ಶಿಕ್ಷಣ ನೀಡಲಾಗುತ್ತದೆ ಸಿಇಟಿ ಮಾದರಿಯಲ್ಲಿ ಪರೀಕ್ಷೆ ನಡೆಸಲಾಗುತ್ತದೆ. 12 ರಿಂದ 30ನೇ ರ್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಸಿಇಟಿ ಶುಲ್ಕ ಮಾತ್ರ ತೆಗೆದುಕೊಳ್ಳಲಾಗುತ್ತದೆ. 31 ರಿಂದ 60ನೇ ರ್ಯಾಂಕ್ ಪಡೆದ  ಪಡೆದ ವಿದ್ಯಾರ್ಥಿಗಳಿಗೆ ಶೇಕಡ 25 ರಷ್ಟು ಸ್ಕಾಲರ್‍ಶಿಪ್ ಮತ್ತು ಟ್ಯೂಷನ್ ಶುಲ್ಕವನ್ನು ಉಚಿತ ಮಾಡಲಾಗುವುದು. 61 ರಿಂದ 100ನೇ ರ್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಶೇಕಡ 10ರಷ್ಟು ಸ್ಕಾಲರ್‍ಶಿಪ್ ಮತ್ತು ಟ್ಯೂಷನ್ ಶುಲ್ಕವನ್ನು ಉಚಿತ ಮಾಡಲಾಗುವುದು. 101 ಮತ್ತು ಅದಕ್ಕಿಂತ ಹೆಚ್ಚಿನ ರ್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ 10 ಸಾವಿರ ರೂಪಾಯಿ ಲ್ಯಾಬ್ ಶುಲ್ಕ ಉಚಿತ ಮಾಡಲಾಗುತ್ತದೆ ಹೀಗೆ ಪರೀಕ್ಷೆ ಬರೆದ ಎಲ್ಲಾ ವಿದ್ಯಾರ್ಥಿಗಳಿಗೂ ಒಂದಲ್ಲ ಒಂದು ರೀತಿ ಆರ್ಥಿಕ ಪ್ರಯೋಜನವಾಗುತ್ತದೆ.

1 ರಿಂದ 11 ರ್ಯಾಂಕ್ ವಿಜೇತರ ವಿವರ:
ಪ್ರಜ್ಞಾ.ಎಂ.ಎನ್, ರಚನಾ ಮಾರುತಿ.ಎಸ್, ಶ್ರವಂತಿ ಪಿ., ಕೆ.ಬಸವರಾಜು, ಪವನ್.ಡಿ.ಎಲ್, ಅಮನ್.ಎಂ, ದೀಪಕ್ ಹೆಚ್. ರೇಖಾ.ಎ, ಸಚಿನ್.ಬಿ, ಪ್ರೀತಂ ಕೆ, ಭೂಮಿಕಾ ಜೈನ್ ರ್ಯಾಂಕ್ ವಿಜೇತರಾಗಿದ್ದಾರೆ.

 ಶ್ರೀದೇವಿ ಇಂಜಿನಿಯರಿಂಗ್ ವಿದ್ಯಾರ್ಥಿಗಳು 1000 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಒಟ್ಟಾರೆಯಾಗಿ ಸುಮಾರು 1000ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿದ್ಯಾರ್ಥಿಗಳು ಹಾಜರಾಗಿದ್ದರು. ಕಾರ್ಯಕ್ರಮದಲ್ಲಿ ಶ್ರೀದೇವಿ ಎಂ.ಬಿ.ಎ.ವಿಭಾಗದ ಮುಖ್ಯಸ್ಥರಾದ ಡಾ.ಕೆ.ಎಸ್.ರಾಮಕೃಷ್ಣ ಹಾಗೂ ವಿವಿಧ ವಿಭಾಗದ ಮುಖ್ಯಸ್ಥರು ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Leave a Reply

Your email address will not be published. Required fields are marked *