ತುಮಕೂರು : ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು ಮೇ 20ಕ್ಕೆ ಮೂರು ವರ್ಷಗಳು ತುಂಬುತ್ತದೆ. ಈ ನೆನಪಿಗಾಗಿ ರಾಜ್ಯ ಸರ್ಕಾರ ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ ಆಗಿರುವ ಅಭಿವೃದ್ಧಿ ಕೆಲಸಗಳನ್ನು ಜನತೆಗೆ ಸಮರ್ಪಣೆ ಮಾಡುವ ವಿಶೇಷ ಕಾರ್ಯಕ್ರಮ ಸಾಧನೆಯ ಸೇವೆಗಳ ಸಮರ್ಪಣೆಯನ್ನು ಮೇ 19ರಂದು ಮಂಗಳವಾರ ತುಮಕೂರಿನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ತಿಳಿಸಿದರು.

ಸೋಮವಾರ ಕಾರ್ಯಕ್ರಮ ನಡೆಯಲಿರುವ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿನ ಪೂರ್ವ ಸಿದ್ಧತೆ ಪರಿಶೀಲಿಸಿದ ನಂತರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, 3 ವರ್ಷಗಳ ಹಿಂದೆ ನಡೆದ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ನನ್ನ ಅಧ್ಯಕ್ಷತೆಯಲ್ಲಿ ಪಕ್ಷದ ಚುನಾವಣಾ ಪ್ರಣಾಳಿಕೆಯನ್ನು ಸಿದ್ಧಪಡಿಸಿತ್ತು. ಐದು ಗ್ಯಾರಂಟಿಗಳೂ ಸೇರಿದಂತೆ ಆದ್ಯತಾ ವಿಷಯಗಳನ್ನು ರಾಜ್ಯದ ಜನತೆಗೆ ಆಶ್ವಾಸನೆ ನೀಡಿ ಚುನಾವಣೆ ಗೆದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಅಧಿಕಾರಕ್ಕೆ ಬಂದೆವು. ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಐದೂ ಗ್ಯಾರಂಟಿಗಳನ್ನೂ ಸಮರ್ಪಕವಾಗಿ ಅನುμÁ್ಠನಗೊಳಿಸಿದ್ದಲ್ಲದೆ ರಾಜ್ಯವನ್ನು ಸವಾರ್ಂಗೀಣ ಅಭಿವೃದ್ಧಿ ಪಥದತ್ತ ಕೊಂಡೊಯ್ಯಲಾಗಿದೆ. ಈ ಮೂಲಕ ನಮ್ಮ ಸರ್ಕಾರ ನುಡಿದಂತೆ ನಡೆದುಕೊಂಡಿದೆ ಎಂದು ತಿಳಿಸಿದರು.
ಕಳೆದ 3 ವರ್ಷಗಳು ರಾಜ್ಯದಲ್ಲಿ ಆಗಿರುವ ಅಭಿವೃದ್ಧಿ ಕೆಲಸಗಳನ್ನು ರಾಜ್ಯದ ಜನತೆಗೆ ಅರ್ಪಿಸಲಾಗಿದೆ. ಈ ಸುಸಂದರ್ಭದಲ್ಲಿ ಉತ್ತರದಾಯಿತ್ವವಾಗಿ ತುಮಕೂರು ಜಿಲ್ಲೆಯಲ್ಲಿ ಕಂದಾಯ ಇಲಾಖೆಯಲ್ಲಿ ಆಗಿರುವ ಅಭೂತಪೂರ್ವ ಅಭಿವೃದ್ಧಿ ಕಾರ್ಯಕ್ರಮವನ್ನು ಈ ಸಮಾವೇಶದ ಮೂಲಕ ಫಲಾನುಭವಿಗಳಿಗೆ ಹಕ್ಕುಪತ್ರ ಸವಲತ್ತುಗಳನ್ನು ನೀಡುವ ಮೂಲಕ ಅನುಷ್ಠಾನಗೊಳಿಸಲಾಗುತ್ತಿದೆ. ಈ ಸಾಧನೆಯಲ್ಲಿ ತುಮಕೂರು ಜಿಲ್ಲೆ ರಾಜ್ಯದಲ್ಲಿಯೇ ಪ್ರಥಮ ಸ್ಥಾನದಲ್ಲಿದ್ದು, ಈ ಸಾಧನೆಗಾಗಿ ಗಿನ್ನಿಸ್ ವಲ್ರ್ಡ್ ಬುಕ್ ಆಫ್ ರೆಕಾರ್ಡ್ ದಾಖಲೆ ಸೇರಿದ್ದು, ನಾಳಿನ ಕಾರ್ಯಕ್ರಮದಲ್ಲಿ ಈ ಸಾಧನೆಯ ಪ್ರಶಸ್ತಿಯನ್ನು ಪ್ರಧಾನ ಮಾಡಲು ಇಂಗ್ಲೇಂಡ್ನಿಂದ ಗಿನ್ನಿಸ್ ಸಂಸ್ಥೆಯವರು ಆಗಮಿಸಲಿದ್ದಾರೆ ಎಂದು ವಿವರಿಸಿದರು.
ತುಮಕೂರು ಜಿಲ್ಲೆಯ ಕಂದಾಯ ಇಲಾಖೆಯ ವಿವಿಧ ಕಾರ್ಯಕ್ರಮಗಳಡಿ ಇ-ಪೌತಿ ಆಂದೋಲನಾ – 1,06,000; ದರಖಾಸ್ತು ಪೋಡಿ – 24,256; ಕಂದಾಯ ಗ್ರಾಮ ಹಕ್ಕು ಪತ್ರ – 20,666 ಮತ್ತು ಪೆÇೀಡಿ ಮುಕ್ತ ಅಭಿಯಾನ – 1570 ಸೇರಿದಂತೆ ಒಟ್ಟು 1,52,492 ಫಲಾನುಭವಿಗಳಿಗೆ ಹಕ್ಕು ಪತ್ರ/ಆದೇಶ ಪತ್ರಗಳನ್ನು ವಿತರಣೆ ಮಾಡಲಾಗುತ್ತಿದೆ. ಅಲ್ಲದೆ, ರಾಜ್ಯದಲ್ಲಿಯೇ ದೊಡ್ಡ ಸಂಖ್ಯೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಒಟ್ಟು 600 ಹುದ್ದೆಗಳ ನೇಮಕಾತಿ ಆದೇಶವನ್ನು ಕಾರ್ಯಕ್ರಮದಲ್ಲಿ ನೀಡಲಾಗುತ್ತಿದೆ ಎಂದು ತಿಳಿಸಿದರು.
ಕಂದಾಯ ಇಲಾಖೆಯಲ್ಲಿ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿರುವ ಗ್ರಾಮ ಆಡಳಿತ ಅಧಿಕಾರಿ, ಕಂದಾಯ ನಿರೀಕ್ಷಕರು, ಉಪ ತಹಶೀಲ್ದಾರರು, ತಹಶೀಲ್ದಾರರು ಹಾಗೂ ಭೂಮಾಪನಾ ಇಲಾಖೆಯ ಸರ್ವೆಯರ್ಗಳು, ಸಹಾಯಕ ಭೂ ದಾಖಲೆಗಳ ಉಪನಿರ್ದೇಶಕರುಗಳಿಗೆ ಮಾನ್ಯರುಗಳಿಂದ ಪ್ರಶಂಸಣಾ ಪತ್ರವನ್ನು ವಿತರಿಸಲಾಗುವುದು ಎಂದು ಮಾಹಿತಿ ನೀಡಿದರು.
ಕಾರ್ಯಕ್ರಮಕ್ಕೆ ಆಗಮಿಸುವ ಫಲಾನುಭವಿಗಳಿಗಾಗಿ ಕಂದಾಯ ಇಲಾಖೆ ಹಾಗೂ ಪಂಚಾಯತಿ ಹಂತದಲ್ಲಿ ಎಲ್ಲಾ ತಾಲ್ಲೂಕುಗಳಿಂದ ಸುಮಾರು 3,000 ಬಸ್ಸುಗಳಲ್ಲಿ ಫಲಾನುಭವಿಗಳು ಆಗಮಿಸುತ್ತಿದ್ದು, ಬಸ್ಸು ಹೊರಡುವ ಜಾಗದಲ್ಲಿಯೇ ಫಲಾನುಭವಿಗಳಿಗೆ ಉಪಹಾರದ ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ, ಫಲಾನುಭವಿಗಳ ಸುರಕ್ಷತೆ ದೃಷ್ಟಿಯಿಂದ ಕರೆತರಲು ಮತ್ತು ವಾಪಸ್ ಕರೆದುಕೊಂಡು ಹೋಗಲು ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, ಬಸ್ಸು ಹೊರಡುವ ಜಾಗದಿಂದ ಜಿಪಿಎಸ್ ವ್ಯವಸ್ಥೆ ಮೂಲಕ ಮಾರ್ಗದ ಮೇಲೆ ನಿಗಾವಹಿಸಲು ಸೂಚಿಸಲಾಗಿದೆ. ಜಿಲ್ಲೆಯಾದ್ಯಂತ ಸುಮಾರು 1,52,000ಕ್ಕೂ ಹೆಚ್ಚು ಫಲಾನುಭವಿಗಳೇ ಇದ್ದು, ಒಟ್ಟು ಸುಮಾರು 2ಲಕ್ಷಕ್ಕೂ ಹೆಚ್ಚಿನ ಜನರು ಈ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ ಎಂದು ಸಚಿವರು ವಿವರಿಸಿದರು.
ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಎಲ್ಲಾ ಸಚಿವರಿಗೆ, ಶಾಸಕರಿಗೆ ಖುದ್ದು ಆಹ್ವಾನ ನೀಡಲಾಗಿದೆ. ಅಲ್ಲದೆ, ಪ್ರತಿಪಕ್ಷ ನಾಯಕರೂ, ಸಂಸದರೂ, ನಿಗಮ ಮಂಡಳಿ ಅಧ್ಯಕ್ಷರು, ಉಪಾಧ್ಯಕ್ಷರು, ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಸಚಿವರು ತಿಳಿಸಿದರು.
ಸುರಕ್ಷತೆ ದೃಷ್ಟಿಯಿಂದ ವ್ಯಾಪಕ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ ಹಾಗೂ ಕಾರ್ಯಕ್ರಮದ ಸ್ಥಳದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ 15 ಅಂಬುಲೆನ್ಸ್ಗಳನ್ನು ನುರಿತ ವೈದ್ಯಕೀಯ ಸಿಬ್ಬಂದಿಗಳೊಂದಿಗೆ ನಿಯೋಜನೆ ಮಾಡಲಾಗಿರುತ್ತದೆ. ಅಗ್ನಿನಂದಕ ವಾಹನಗಳನ್ನು ನಿಯೋಜನೆ ಮಾಡಲಾಗಿರುತ್ತದೆ. ಕಾರ್ಯಕ್ರಮದ ಸ್ಥಳದಲ್ಲಿ ಆಯಾ ಗ್ಯಾಲರಿಗಳಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರು ಮತ್ತು ಮಜ್ಜಿಗೆಯ ವ್ಯವಸ್ಥೆಯನ್ನು ಮಾಡಲಾಗಿದ್ದು, ಅದರ ನಿರ್ವಹಣೆಗಾಗಿ ವಿವಿಧ ಜಿಲ್ಲಾ/ತಾಲ್ಲೂಕು ಮಟ್ಟದ ಅಧಿಕಾರಿ/ಸಿಬ್ಬಂದಿಗಳನ್ನು ನಿಯೋಜಿಸಲಾಗಿರುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಶಾಸಕ ಹೆಚ್.ವಿ. ವೆಂಕಟೇಶ್, ಗ್ಯಾರಂಟಿ ಸಮಿತಿಯ ಜಿಲ್ಲಾ ಅಧ್ಯಕ್ಷ ಚಂದ್ರಶೇಖರ್ ಗೌಡ, ಬಿ.ಎಂ.ಟಿ.ಸಿ. ಉಪಾಧ್ಯಕ್ಷ ನಿಕೇತ್ ರಾಜ್ ಎಂ., ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಉಪಸ್ಥಿತರಿದ್ದರು.