ಸಿದ್ದರಾಮಯ್ಯನವರ ರಾಜೀನಾಮೆ ಅಂಗೀಕರುಸಿದ ರಾಜ್ಯಪಾಲರು, ಮಂತ್ರಿಮಂಡಲ ವಜಾಗೊಳಿಸಿ ಆದೇಶ

ತುಮಕೂರು: ಇಂದೋರಿನಿಂದ ನಿನ್ನೆ ರಾತ್ರಿ ಆಗಮಿಸಿದ ರಾಜ್ಯಪಾಲ ಥ್ಯಾವರ್ ಚಂದ್ ಗುಹ್ಲೋಟ್ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದ ರಾಮಯ್ಯ ನೀಡಿದ್ದ ರಾಜೀನಾಮೆ ಅಂಗೀಕರಿಸಿ, ಸಿದ್ದರಾಮಯ್ಯ ಯ್ಯನವರ ಸಚಿವ ಸಂಪುಟವನ್ನು ವಜಾಗೊಳಿಸಿರುವುದಾಗಿ ರಾಜ್ಯಪಾಲರು ತಿಳಿಸಿರುವ ಪತ್ರದಲ್ಲಿದೆ.

ಇದೀಗ ಸಿದ್ದರಾಮಯ್ಯ ಸಲ್ಲಿಸಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ ಚಂದ್ ಗೊಹ್ಲೋಟ್ ಅವರು ಅಧಿಕೃತವಾಗಿ ಅಂಗೀಕರಿಸಿದ್ದಾರೆ.

ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಸಿದ್ದರಾಮಯ್ಯ ಅವರು ನಿನ್ನೆ ಬೆಳಗ್ಗೆ ಸಚಿವ ಸಂಪುಟ ಸಹೋದ್ಯೋಗಿಗಳೊಂದಿಗೆ ಉಪಹಾರ ಕೂಟ ನಡೆಸಿ ತಮ್ಮ ನಿರ್ಧಾರ ಪ್ರಕಟಿಸಿದ್ದರು. ತದನಂತರ ಲೋಕಭವನಕ್ಕೆ ತೆರಳಿ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪ್ರಭುಶಂಕರ್ ಅವರಿಗೆ ಅಧಿಕೃತವಾಗಿ ರಾಜೀನಾಮೆ ಪತ್ರ ಸಲ್ಲಿಸಿದ್ದರು. ರಾಜ್ಯಪಾಲ ಗೆಹ್ಲೋಟ್ ಅವರು ತಮ್ಮ ವಿಶೇಷ ವಿವೇಚನಾಧಿಕಾರವನ್ನು ಬಳಸಿ ಈ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ.

ಸಿದ್ದರಾಮಯ್ಯ ನವರ ರಾಜೀನಾಮೆ ಅಂಗೀಕರಿಸಿದ ಬೆನ್ನಲ್ಲೆ ಸಚಿವ ಸಂಪುಟವನ್ನು ವಜಾಗೊಳಿಸಿ ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ.

ಈಗ ರಾಜ್ಯದಲ್ಲಿ ಯಾವ ಮಂತ್ರಿಗಳು, ಸರ್ಕಾರ ಇರುವುದಿಲ್ಲ.
ಹೊಸ ಮುಖ್ಯಮಂತ್ರಿ ಯ ನಂತರ ಹೊಸ ಮಂತ್ರಮಂಡಲ ರಾಜ್ಯದಲ್ಲಿ ಬರಲಿದೆ.

Leave a Reply

Your email address will not be published. Required fields are marked *