ಜೂನ್ 3 ರಂದು ತುಮಕೂರು ವಿವಿ ಘಟಿಕೋತ್ಸವ- ಪ್ರೊ.ವೆಂಕಟೇಶ್ವರಲು

ತುಮಕೂರು ವಿಶ್ವವಿದ್ಯಾನಿಲಯದ 19ನೇ ವಾರ್ಷಿಕ ಘಟಿಕೋತ್ಸವವು ದಿನಾಂಕ: 03-06-2026ರಂದು ಬುಧವಾರ ಬೆಳಗ್ಗೆ 11-30 ಗಂಟೆಗೆ ಕುಲಪತಿಗಳ ಕಛೇರಿ ಮುಂಭಾಗದ ಕ್ರೀಡಾಂಗಣದಲ್ಲಿ ಜರುಗಲಿದೆ ಎಂದು ಕುಲಪತಿ ಪ್ರೊ.ವೆಂಕಟೇಶ್ವರಲಿ ತಿಳಿಸಿದರು.

ಅವರಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಕರ್ನಾಟಕದ ರಾಜ್ಯಪಾಲರೂ ಹಾಗೂ ತುಮಕೂರು ವಿಶ್ವವಿದ್ಯಾನಿಲಯದ ಕುಲಾಧಿಪತಿಗಳೂ ಆಗಿರುವ ಥಾವರ್ ಚಂದ್ ಗೆಹ್ಲೋಟ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಅಂತಾರಾಷ್ಟಿçÃಯ ಮಾಹಿತಿ ತಂತ್ರಜ್ಞಾನ ಸಂಸ್ಥೆ, ಬೆಂಗಳೂರು, ಇದರ ನಿರ್ದೇಶಕರಾದ ಪ್ರೊ. ದೇಬಬ್ರತ ದಾಸ್ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು ಘಟಿಕೋತ್ಸವ ಭಾಷಣ ನೆರವೇರಿಸಲಿರುವರು. ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ. ಎಂ. ವೆಂಕಟೇಶ್ವರಲು, ಕುಲಸಚಿವರಾದ ಶ್ರೀಮತಿ ನಾಹಿದಾ ಜûಮ್ ಜûಮ್, ಪರೀಕ್ಷಾಂಗ ಕುಲಸಚಿವರಾದ ಪ್ರೊ. ಮೋಹನ ಹೆಚ್. ಎಸ್., ಸಿಂಡಿಕೇಟ್ ಹಾಗೂ ವಿದ್ಯಾವಿಷಯಕ ಪರಿಷತ್ ಸದಸ್ಯರು ಭಾಗವಹಿಸುವರು.

ಈ ಬಾರಿಯ ಘಟಿಕೋತ್ಸವದಲ್ಲಿ ಒಬ್ಬ ಅಭ್ಯರ್ಥಿ ಡಿ.ಲಿಟ್ ಪದವಿ, 59 ಅಭ್ಯರ್ಥಿಗಳು ಪಿಎಚ್.ಡಿ. ಪದವಿ, 2,058 ಅಭ್ಯರ್ಥಿಗಳು ಸ್ನಾತಕೋತ್ತರ ಹಾಗೂ 8,781 ಅಭ್ಯರ್ಥಿಗಳು ಸ್ನಾತಕ ಪದವಿ ಪಡೆಯಲು ಅರ್ಹರಾಗಿರುತ್ತಾರೆ (ಒಟ್ಟು 10,839 ಅಭ್ಯರ್ಥಿಗಳು). ವಿಶ್ವವಿದ್ಯಾನಿಲಯವು ಎಲ್ಲ ಸ್ನಾತಕೋತ್ತರ ಪದವಿಗಳಿಗೆ ತಲಾ ಐದು ರ‍್ಯಾಂಕುಗಳನ್ನು (ಎಂಎಸ್ಸಿ ವಿದ್ಯುನ್ಮಾನ ಮಾಧ್ಯಮ- 2 ರ‍್ಯಾಂಕ್), ಬಿಎ-ಬಿಎಸ್‌ಡಬ್ಲೂö್ಯ-ಬಿಎಸ್‌ಸಿ-ಬಿಕಾಂ-ಬಿಬಿಎ-ಬಿಇಡಿ (ಸೆಮಿಸ್ಟರ್ ಪದ್ಧತಿ)ಗಳಿಗೆ ತಲಾ ಹತ್ತು ರ‍್ಯಾಂಕುಗಳನ್ನು (ಬಿಎಸ್ಸಿ ಫ್ಯಾಶನ್ ಅಂಡ್ ಅಪಾರೆಲ್ ಡಿಸೈನಿಂಗ್- 1 ರ‍್ಯಾಂಕ್, ಬಿ.ವೋಕ್ – 3 ರ‍್ಯಾಂಕ್) ಘೋಷಿಸಿದೆ. ಒಟ್ಟು 90 ವಿದ್ಯಾರ್ಥಿಗಳಿಗೆ 117 ಚಿನ್ನದ ಪದಕಗಳನ್ನು, ಹಾಗೂ ನಾಲ್ಕು ವಿದ್ಯಾರ್ಥಿಗಳಿಗೆ ನಗದು ಬಹುಮಾನಗಳನ್ನು ವಿಶ್ವವಿದ್ಯಾನಿಲಯವು ಈ ಬಾರಿಯ ಘಟಿಕೋತ್ಸವದಲ್ಲಿ ಪ್ರದಾನಮಾಡಲಿದೆ ಎಂದು ತಿಳಿಸಿದರು.

ಘಟಿಕೋತ್ಸವಕ್ಕೂ ಮುನ್ನ ಮಾನ್ಯ ರಾಜ್ಯಪಾಲರು ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಸ್ಥಾಪನೆಗೊಂಡಿರುವ ‘ತುಮಕೂರು ಇನ್ನೋವೇಶನ್ ಇನ್‌ಕ್ಯುಬೇಶನ್ ಅಂಡ್ ಆಂತ್ರಪ್ರಿನ್ಯುರ್‌ಶಿಪ್ ಕೌನ್ಸಿಲ್’ ಹಾಗೂ ‘ಗೋ ಗ್ರೀನ್ – ಬೈಸಿಕಲ್ ಇನೀಶಿಯೇಟಿವ್’ಗಳನ್ನು ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು.

ವಿವಿಧ ಕ್ಷೇತ್ರದಲ್ಲಿ ಸಾಧನೆಗೈದಿರುವ ಸ್ವಾತಂತ್ರö್ಯ ಹೋರಾಟಗಾರ ಟಿ.ಆರ.ರೇವಣ್ಣ, ಚಾರ್ಟರ್ಡ್ ಅಕೌಂಟೆAಟ್ – ವಕೀಲರಾದ ಕೆ. ಆರ್. ಪ್ರದೀಪ್, ಕವಿ – ಚಿಂತಕರುದ್ವಾರನಕುAಟೆ ಪಾತಣ್ಣ ಅವರುಗಳಿಗೆ ಗೌರವ ಡಾಕ್ಟರೇಟ್ ನೀಡಲಾಗುವುದ ಎಂದು ತಿಳಿಸಿದರು.

Leave a Reply

Your email address will not be published. Required fields are marked *