ತುಮಕೂರು : 2026-27ನೇ ಶೈಕ್ಷಣಿಕ ವರ್ಷದ ಅಂಗವಾಗಿ ರಾಜ್ಯಾದ್ಯಂತ ಇಂದು ಶಾಲೆಗಳು ಪುನರಾರಂಭಗೊAಡ ಹಿನ್ನೆಲೆಯಲ್ಲಿ ತುಮಕೂರು ನಗರದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಪಾಠಶಾಲೆ, ಎಂಆರ್ಸಿ ಶಾಲೆಯಲ್ಲಿ ಕಲಿಕಾ ಚೇತರಿಕೆ ವರ್ಷ ಹಾಗೂ ದಾಖಲಾತಿ ಆಂದೋಲನ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೋಮವಾರ ಚಾಲನೆ ನೀಡಿದರು.
ಶಾಲೆಯಲ್ಲಿನ ಶೈಕ್ಷಣಿಕ ಚಟುವಟಿಕೆಗಳು ಹಾಗೂ ವಿದ್ಯಾರ್ಥಿಗಳಿಗೆ ಕಲ್ಪಿಸಲಾಗಿರುವ ಮೂಲಭೂತ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಿ ಜಿಲ್ಲಾಧಿಕಾರಿಗಳು, ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕಗಳು ಹಾಗೂ ಸಮವಸ್ತçಗಳನ್ನು ವಿತರಿಸಿ, ವಿದ್ಯಾರ್ಥಿಗಳಿಗೆ ಹೊಸ ಶೈಕ್ಷಣಿಕ ವರ್ಷಕ್ಕೆ ಶುಭಾಶಯ ಕೋರಿದರು.
ನಂತರ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಜಿಲ್ಲಾಧಿಕಾರಿ, ನಿಯಮಿತ ಹಾಜರಾತಿ, ಗುಣಮಟ್ಟದ ಶಿಕ್ಷಣ ಹಾಗೂ ಸರ್ವತೋಮುಖ ವ್ಯಕ್ತಿತ್ವ ವಿಕಸನದ ಮಹತ್ವವನ್ನು ತಿಳಿಸಿದರು. ಶಿಕ್ಷಣವು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದು, ಪ್ರತಿಯೊಬ್ಬ ವಿದ್ಯಾರ್ಥಿಯೂ ಶ್ರದ್ಧೆಯಿಂದ ಕಲಿಕೆಯಲ್ಲಿ ತೊಡಗಿಸಿಕೊಳ್ಳುವಂತೆ ಸಲಹೆ ನೀಡಿದರು.
ಶಿಕ್ಷಕರೊಂದಿಗೆ ಚರ್ಚಿಸಿದ ಜಿಲ್ಲಾಧಿಕಾರಿಗಳು, ಶಾಲಾ ದಾಖಲಾತಿ ಹೆಚ್ಚಳಕ್ಕೆ ವಿಶೇಷ ಒತ್ತು ನೀಡುವಂತೆ ಹಾಗೂ ವಿದ್ಯಾರ್ಥಿಗಳ ಕಲಿಕಾ ಮಟ್ಟವನ್ನು ಮತ್ತಷ್ಟು ಸುಧಾರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು.
ಶಾಲೆಯ ಮೊದಲ ದಿನವೇ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳು ಮತ್ತು ಸಮವಸ್ತçಗಳ ವಿತರಣೆ ಯಶಸ್ವಿಯಾಗಿ ನಡೆದಿದ್ದು, ಮಕ್ಕಳು ಉತ್ಸಾಹದಿಂದ ಹೊಸ ಶೈಕ್ಷಣಿಕ ವರ್ಷವನ್ನು ಸ್ವಾಗತಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಅಶೋಕ್ ಕೆ.ವಿ., ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎಂ.ಎಲ್. ಪುರುಷೋತ್ತಮ್, ಶಿಕ್ಷಣ ಇಲಾಖೆಯ ಅಧಿಕಾರಿಗಳು, ಶಿಕ್ಷಕರು, ಶಾಲಾ ಸಿಬ್ಬಂದಿ, ಪೋಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.