ಉಪಮುಖ್ಯ ಮಂತ್ರಿ ಡಾ.ಜಿ.ಪರಮೇಶ್ವರ್ ಗೆ ಭವ್ಯ ಸ್ವಾಗತ, ಮೆರವಣಿಗೆ, ಪಟಾಕಿ ಸಿಡಿಸಿ, ಹೂ ಮಳೆಗೈದು ಸಂಭ್ರಮಿಸಿದ ಅಭಿಮಾನಿಗಳು-ಕಾರ್ಯಕರ್ತರು

ತುಮಕೂರು : ಎರಡನೇ ಬಾರಿಗೆ ಡಿ.ಕೆ.ಶಿವಕುಮಾರ್ ಸಂಪುಟದಲ್ಲಿ ಉಪಮುಖ್ಯಮಂತ್ರಿಯಾದ ಡಾ.ಜಿ.ಪರಮೇಶ್ವರ್ ಅವರು ತುಮಕೂರಿಗೆ ಇಂದು ಮಧ್ಯಾಹ್ನ ಆಗಮಿಸಿದಾಗ ಬಿ.ಹೆಚ್.ರಸ್ತೆಯ ಬಟವಾಡಿ ಸರ್ಕಲ್‍ನಿಂದ ಟೌನ್ ಹಾಲ್ ನವರಿಗೆ ಬೈಕ್ ರ್ಯಾಲಿ ಮೆರವಣಿಗೆಯೊಂದಿಗೆ ಕರೆ ತರಲಾಯಿತು.

2018ರಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿಯ ಸಂಪುಟದಲ್ಲಿ ಉಪಮುಖ್ಯಮಂತ್ರಿಯಾಗಿದ್ದರು, 2013ರಲ್ಲಿ ವಿಧಾನ ಪರಿಷತ್ ಸದಸ್ಯರಾಗಿ ಹಾಗೂ 2023ರ ಸಿದ್ದರಾಮಯ್ಯನವರ ಸಂಪುಟದಲ್ಲಿ ಗೃಹ ಸಚಿವರಾಗಿ ಕಾರ್ಯ ನರ್ವಹಿಸಿದ್ದರು, 2026ರ ಜೂನ್ 3ರಂದು ಡಿ.ಕೆ.ಶಿವಕುಮಾರ್ ಅವರ ಸಂಪುಟದಲ್ಲಿ ಉಪ ಮುಖ್ಯಂತ್ರಿಯಾಗಿದ್ದಾರೆ.

ಈ ಸರ್ಕಾರದಲ್ಲಿ ಡಾ.ಜಿ.ಪರಮೇಶ್ವರ್ ಅವರು ಕಂದಾಯ ಮತ್ತು ಯುವ ಸಬಲೀಕರಣ ಸಂಪುಟ ದರ್ಜೆ ಸಚಿವರಾಗಿದ್ದಾರೆ.

2013ರ ಸಿದ್ದರಾಮಯ್ಯ ಸರ್ಕಾರದಲ್ಲಿ, 2018ರ ಕುಮಾರಸ್ವಾಮಿ ಸರ್ಕಾರದಲ್ಲಿ ಮತ್ತು 2023ರ ಸಿದ್ದರಾಮಯ್ಯ ಸರ್ಕಾರದಲ್ಲಿ ಗೃಹ ಸಚಿವರಾಗಿ ಪೊಲೀಸ್ ಇಲಾಖೆಯನ್ನು ಉತ್ತಮ ಕಾರ್ಯ ಮಾಡುವಂತೆ ಸ್ನೇಹ ಇಲಾಖೆಯನ್ನಾಗಿ ಮಾಡಿದ್ದಾರೆ.

2023 ರಲ್ಲಿ ಸಿದ್ದರಾಮಯ್ಯನವರ ಸಂಪುಟದಲ್ಲಿ ಮತ್ತೆ ಗೃಹ ಸಚಿವರನ್ನಾಗಿ ಮಾಡಿದ್ದಕ್ಕೆ ನನಗೆ ಗೃಹ ಖಾತೆ ಬೇಡ, ಬೇರೆ ಖಾತೆ ನೀಡುವಂತೆ ಮನವಿ ಮಾಡಿದರೂ ಸಿದ್ದರಾಮಯ್ಯನವರು ನೀವೆ ಗೃಹ ಸಚಿವರಾಗಿರಬೇಕೆಂದು ಅದೇ ಖಾತೆ ನೀಡಿದ್ದರು.

ಮೇ 19ರಂದು ತುಮಕೂರಿನಲ್ಲಿ ಸಿದ್ದರಾಮಯ್ಯನವರ ಸಾಧನೆಯ ಸಮಾವೇಶದ ಸಂಧರ್ಭದಲ್ಲಿ ತುಮಕೂರಿಗೆ ಮುಖ್ಯಮಂತ್ರಿ ಸ್ಥಾನ ಸಿಗುವ ಸಾಧ್ಯತೆಗಳಿವೆ ಎಂದು ತಮ್ಮ ಮನದಾಳವನ್ನು ಬಿಚ್ಚಿಟ್ಟಿದ್ದರು, ನಾನು 8 ವರ್ಷಗಳ ಕಾಲ ಪಕ್ಷ ಅಧಿಕಾರಕ್ಕೆ ಬರಲು ದುಡಿದಿದ್ದೇನೆ, ಪಕ್ಷವು ಮೊದಲು ನನಗೆ ಕೂಲಿ ಕೊಡಬೇಕು, ಈ ಹಿನ್ನೆಲೆಯಲ್ಲಿ ನಾನು ಮುಖ್ಯಮಂತ್ರಿ ಸ್ಥಾನದ ಅಕಾಂಕ್ಷಿ ಎಂದು ಹೇಳಿದ್ದರು.

ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ತುಮಕೂರು ಜಿಲ್ಲೆಯ ಜನತೆ ಪರಮೇಶ್ವರ್ ಅವರಿಗೆ ಮುಖ್ಯಮಂತ್ರಿ ಮಾಡುವರೆಂಬ ಕನಸ್ಸು ನನಸ್ಸಾಗಲಿಲ್ಲ, ಕೊನೆಯ ಕ್ಷಣದಲ್ಲಿ ಉಪ ಮುಖ್ಯಮಂತ್ರಿ ಸ್ಥಾನ ನೀಡಿ ಪರಮೇಶ್ವರ್ ಅವರನ್ನು ಸಮದಾನ ಪಡಿಸಿದ್ದಾರೆ.

ಎರಡನೇ ಬಾರಿ ಉಪ ಮುಖ್ಯಮಂತ್ರಿಯಾದ ನಂತರ ಮೊದಲ ಬಾರಿ ಡಾ. ಜಿ.ಪರಮೇಶ್ವರ್ ಅವರು ತುಮಕೂರಿಗೆ ಆಗಮಿಸಿದಾಗ ಅವರ ಅಭಿಮಾನಿಗಳು, ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಹೂ ಮಳೆಗೈದು ಬಟವಾಡಿಯಿಂದ ಟೌನ್ ಹಾಲ್ ನ ಅಂಬೇಂಡ್ಕರ್ ಪುತ್ತಳಿ ತನಕ ತೆರೆದ ಜೀಪಿನ ಮೂಲಕ ಮೆರವಣಿಗೆಯಲ್ಲಿ ಕರೆ ತಂದು ಸಂಭ್ರಮಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ಕೆ.ಎನ್.ರಾಜಣ್ಣ, ಮಾಜಿ ಸಂಸದ ಎಸ್.ಪಿ.ಮುದ್ದಹನುಮೇಗೌಡ, ಡಿಸಿಸಿ ಅಧಯಕ್ಷರಾದ ಚಂದ್ರಶೇಖರಗೌಡ, ನಿಕೇತ್ ರಾಜ್ ಮೌರ್ಯ ಮುಂತಾದವರಿದ್ದರು.

ಜಿಲ್ಲಾಡಳಿತದಿಂದ ಮಾನ್ಯ ಉಪ ಮುಖ್ಯಮಂತ್ರಿಗಳಿಗೆ ಸ್ವಾಗತ

ರಾಜ್ಯದ ಉಪಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ ಡಾ. ಜಿ. ಪರಮೇಶ್ವರ ಅವರು ಉಪಮುಖ್ಯಮಂತ್ರಿಗಳಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಶನಿವಾರ ತುಮಕೂರು ಜಿಲ್ಲೆಗೆ ಆಗಮಿಸಿದ ಸಂದರ್ಭದಲ್ಲಿ ಜಿಲ್ಲಾಡಳಿತದ ವತಿಯಿಂದ ಅವರಿಗೆ ಆತ್ಮೀಯ ಹಾಗೂ ಭವ್ಯ ಸ್ವಾಗತ ಕೋರಲಾಯಿತು.

ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದು, ಉಪಮುಖ್ಯಮಂತ್ರಿಗಳನ್ನು ಸ್ವಾಗತಿಸಿ ಗೌರವ ಸಲ್ಲಿಸಿದರು.

Leave a Reply

Your email address will not be published. Required fields are marked *