4 ಕೋಟಿ ರೂ. ಕಾಮಗಾರಿಗೆ ಸುರೇಶ್‌ಗೌಡ ಚಾಲನೆ

ತುಮಕೂರು: ಗ್ರಾಮಾಂತರ ಕ್ಷೇತ್ರದ ಹೆಬ್ಬೂರು ಹಾಗೂ ಬಳ್ಳಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯಲಾದಹಳ್ಳಿ ಗ್ರಾಮದಲ್ಲಿ ಶುಕ್ರವಾರ ಶಾಸಕ ಬಿ. ಸುರೇಶ್‌ಗೌಡರು 4.20 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದರು.

ಲೋಕೋಪಯೋಗಿ ಇಲಾಖೆ ವತಿಯಿಂದ ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿಯಲ್ಲಿ ಒಂದು ಕೋಟಿ ರೂ.ಗಳ ಸಿ.ಸಿ ರಸ್ತೆ ಹಾಗೂ ಸಿ.ಸಿ ಚರಂಡಿ ಮತ್ತು 20 ಲಕ್ಷ ರೂ. ಗಳ ಅನುದಾನದಲ್ಲಿ ಸಮುದಾಯ ಭವನ ಕಾಮಗಾರಿಯ ಭೂಮಿ ಪೂಜೆ ನೆರವೇರಿಸಿದರು.

ಇದೇ ದಿನ ಹೆಬ್ಬೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲಾ ಬ್ಲಾಕ್‌ಗಳಲ್ಲಿ ಸುಮಾರು ಮೂರು ಕೋಟಿ ರೂಗಳ ಅನುದಾನದಲ್ಲಿ ಸಿ.ಸಿ ರಸ್ತೆ ಹಾಗೂ ಸಿ.ಸಿ ಚರಂಡಿ ಕಾಮಗಾರಿಗೆ ಗುದ್ದಲಿಪೂಜೆ ಮಾಡಿದರು.

ಈ ಸಂದರ್ಭದಲ್ಲಿ ಹೆಬ್ಬೂರು ಮತ್ತು ಬಳ್ಳಗೆರೆ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷರು, ಮಾಜಿ ಉಪಾಧ್ಯಕ್ಷರುಗಳು, ಮಾಜಿ ಸದಸ್ಯರು, ಗ್ರಾಮದ ಮುಖಂಡರಾದ ಮಾಸ್ತಿ ಗೌಡರು, ಬಾಬಣ್ಣ, ವೈ,ಟಿ ನಾಗರಾಜ್, ವೆಂಕಟೇಶ್, ಶಿವಕುಮಾರ್, ಸಿದ್ದಗಂಗಪ್ಪ, ನಾರಾಯಣಪ್ಪ, ಪ್ರಕಾಶ್ ಮಂಜುನಾಥ್, ಹರೀಶ್, ಶಿವು, ಪ್ರದೀಪ್, ಗಗನ್, ನರಸಯ್ಯ ಗಾಂಧಿರಾಜ್, ಕೃಷ್ಣಪ್ಪ, ಚಿಕ್ಕಸ್ವಾಮಿ, ಶರತ್, ಶಿವರಾಮ್, ಗುತ್ತಿಗೆದಾರ ಪ್ರದೀಪ್, ಗ್ರಾಮ ಪಂಚಾಯಿತಿ ಆಡಳಿತ ಅಧಿಕಾರಿ ರುದ್ರಪ್ರಸಾದ್, ಅಭಿವೃದ್ಧಿ ಅಧಿಕಾರಿ ಮಂಜಣ್ಣ ಹಾಜರಿದ್ದರು.

Leave a Reply

Your email address will not be published. Required fields are marked *