2 ರಂದು ಶ್ರೀ ಯೋಗಿನಾರೇಯಣ ಯತೀಂದ್ರರ ಮಹೋತ್ಸವ

ತುಮಕೂರು : ಜಿಲ್ಲಾ ಬಲಿಜ ಸಂಘ ಹಾಗೂ ಶ್ರೀ ಯೋಗಿನಾರೇಯಣ ಸೇವಾ ಸಮಿತಿ ವತಿಯಿಂದ ಶ್ರೀ ಯೋಗಿನಾರೇಯಣ ಯತೀಂದ್ರರ 191ನೇ ವರ್ಷದ ಜೀವ ಸಮಾಧಿ ಮಹೋತ್ಸವ, ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭ ಆಗಸ್ಟ್ 2 ರಂದು ಭಾನುವಾರ ಬೆಳಿಗ್ಗೆ 11 ಗಂಟೆಗೆ ನಗರದ ಜೆ.ಸಿ.ರಸ್ತೆಯ ವಿನಾಯಕ ನಗರದ ಶ್ರೀ ಸಿದ್ಧಿವಿನಾಯಕ ಸಮುದಾಯ ಭವನದಲ್ಲಿ (ಗಣಪತಿ ಪೆಂಡಾಲ್) ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಬಲಿಜ ಸಂಘದ ಅಧ್ಯಕ್ಷ ಟಿ.ಆರ್. ಅಂಜನಪ್ಪ ವಹಿಸಲಿದ್ದಾರೆ. ಮಾಜಿ ಸಚಿವರು, ವಿಧಾನ ಪರಿಷತ್ ಸದಸ್ಯರು ಹಾಗೂ ಎಂ.ಎಸ್. ರಾಮಯ್ಯ ವಿದ್ಯಾ ಸಂಸ್ಥೆಗಳ ಉಪಾಧ್ಯಕ್ಷ ಎಂ.ಆರ್. ಸೀತಾರಾಂ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ರಮೇಶ್ ಬಾಬು ಭಾಗವಹಿಸಲಿದ್ದಾರೆ.

ಇದೇ ವೇಳೆ ಸಮಾಜ ಸೇವಕಿ ಶ್ರೀಮತಿ ಡಾ? ಮಮತಾ ಆರ್.ವಿ. ದೇವರಾಜು ಮತ್ತು ಬೃಹತ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಸದಸ್ಯೆ ಶ್ರೀಮತಿ ಮಂಜುಳಾ ನಾಯ್ಡು ಅವರು ಮಹಿಳಾ ವಿದ್ಯಾರ್ಥಿ ನಿಲಯದ ನಾಮಫಲಕ ಅನಾವರಣಗೊಳಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಹಿರಿಯ ಲೇಖಕ ಹಾಗೂ ಸಂಶೋಧಕ ಎಂ.ಡಿ. ಶ್ರೀನಿವಾಸ್ ರಚಿತ ‘ಶ್ರೀ ಯೋಗಿನಾರೇಯಣ ಯತೀಂದ್ರರ ಕೃತಿ’ ಬಿಡುಗಡೆಗೊಳ್ಳಲಿದೆ.

ವಿಶೇಷ ಆಹ್ವಾನಿತರಾಗಿ ಖ್ಯಾತ ಹೃದ್ರೋಗ ತಜ್ಞ ಡಾ.ನಟರಾಜ್ ಶೆಟ್ಟಿ, ಕಾಂಗರೂ ಹಾಸ್ಪಿಟಲ್ಸ್ ಸಿ.ಇ.ಓ. ಡಾ.ಶೇಖರ್ ಸುಬ್ಬಯ್ಯ, ಹಿರಿಯ ಖ್ಯಾತ ಕನ್ನಡ ಚಲನಚಿತ್ರ ನಟ ಅಶೋಕ್, ಹಿರಿಯ ಲೇಖಕ ಹಾಗೂ ಸಂಶೋಧಕ ಎಂ.ಡಿ. ಶ್ರೀನಿವಾಸ್, ಮಂಡ್ಯ ಜಿಲ್ಲಾ ಬಲಿಜ ಸಂಘ ಅಧ್ಯಕ್ಷ ಮೋಹನ್ ಕುಮಾರ್, ಬಳ್ಳಾರಿ ಜಿಲ್ಲಾ ಬಲಿಜ ಸಂಘ ಅಧ್ಯಕ್ಷ ರಮೇಶ್ ಬುಜ್ಜಿ, ಸ್ಫೂರ್ತಿ ಡೆವಲಪರ್ಸ್ ಮಾಲೀಕ ಎಸ್.ಪಿ. ಚಿದಾನಂದ್, ತುಮಕೂರು ಗೆಳೆಯರ ಬಳಗ ಅಧ್ಯಕ್ಷ ಎನ್. ಗೋವಿಂದರಾಜು ಭಾಗವಹಿಸುವರು.

Leave a Reply

Your email address will not be published. Required fields are marked *