ಅನ್ನ, ಅಕ್ಷರ, ಆಶ್ರಯದಿಂದ ಮಠದ ಹಿರಿಮೆ ಹೆಚ್ಚಿದೆ-ಗೃಹ ಸಚಿವ ಡಾ: ಜಿ. ಪರಮೇಶ್ವರ್

ತುಮಕೂರು : ಸಿದ್ದಗಂಗಾ ಮಠದಲ್ಲಿ ಸಾವಿರಾರು ಮಕ್ಕಳಿಗೆ ಅನ್ನ, ಅಕ್ಷರ, ಆಶ್ರಯವನ್ನು ನೀಡುವುದರ ಮೂಲಕ ಅವರನ್ನು ಸಮಾಜದಲ್ಲಿ ಉತ್ತಮ ಪ್ರಜೆಗಳನ್ನಾಗಿಸಿ, ಅವರ ಜೀವನವನ್ನು ರೂಪಿಸಲಾಗುತ್ತಿದೆ. ಇದರಿಂದ ಮಠದ ಹಿರಿಮೆ ಹೆಚ್ಚಿದೆ ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ:ಜಿ. ಪರಮೇಶ್ವರ್ ಅವರು ಹೇಳಿದರು.

ಸಿದ್ದಗಂಗಾ ಮಠದ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಗುರುಭವನ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ಸಿದ್ದಗಂಗಾ ಮಠದಲ್ಲಿ ಹಾಗೂ ಇಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡಿರುವ ಸಾವಿರಾರು ವಿದ್ಯಾರ್ಥಿಗಳು ದೇಶ ವಿದೇಶಗಳಲ್ಲಿ ಸೇವೆ ಸಲ್ಲಿಸುವ ಮೂಲಕ ಮಠದ ಹಿರಿಮೆಯನ್ನು ಹೆಚ್ಚಿಸಿದ್ದಾರೆ ಎಂದು ಹೇಳಿದರು.

ಶ್ರೀಶ್ರೀಶ್ರೀ ಶಿವಕುಮಾರ ಸ್ವಾಮೀಜಿಯವರು ಹಾಕಿಕೊಟ್ಟ ಮಾರ್ಗದಲ್ಲಿಯೇ ಸಿದ್ಧಲಿಂಗ ಸ್ವಾಮೀಜಿ ಅವರು ಮಠವನ್ನು ಮುನ್ನಡೆಸುತ್ತ ಬರುತ್ತಿದ್ದಾರೆ. ಶ್ರೀಕ್ಷೇತ್ರದಲ್ಲಿ ಮತ್ತಷ್ಟು ಸಮಾಜಮುಖಿ ಕೆಲಸಗಳು ನಡೆಯಲಿ ಎಂದು ಆಶಿಸಿದರು.

ಶ್ರೀ ಮಠದಲ್ಲಿ ವ್ಯಾಸಂಗ ಮಾಡಿರುವ ಹಲವಾರು ವಿದ್ಯಾರ್ಥಿಗಳು ಕರ್ನಾಟಕದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಉನ್ನತ ಮಟ್ಟದ ಅಧಿಕಾರಿಗಳಾಗಿ ಸೇವೆ ಸಲ್ಲಿಸಿದ್ದಾರೆ. ದೇಶ ವಿದೇಶಗಳಲ್ಲಿ ಹಾಗೂ ರಾಷ್ಟ್ರಪತಿ ಮತ್ತು ಪ್ರಧಾನ ಮಂತ್ರಿಗಳು ಕೂಡ ಮಠದ ಬಗ್ಗೆ ಮತ್ತು ಶಿವಕುಮಾರ ಸ್ವಾಮೀಜಿಗಳ ಬಗ್ಗೆ ಮಾತಾಡುತ್ತಾರೆ ಎಂದು ತಿಳಿಸಿದರು.

ಶಿವಯೋಗಿ ಕೃತಿ ಬಿಡುಗಡೆ ಮಾಡಿ ಮಾತನಾಡಿದ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಅವರು, ಶಿವಕುಮಾರ ಸ್ವಾಮೀಜಿಯವರನ್ನು ಎಲ್ಲರೂ ಸ್ಮರಿಸಬೇಕಿದೆ. ನಾನು ಕೂಡ ಮಠದಲ್ಲಿ ಓದಿದವನು. ಶ್ರೀಗಳು ಇಂಗ್ಲೀμï ಬಿ.ಎ. ಆನರ್ಸ್ ಪದವೀಧರರು ಆಗಿದ್ದರು. ನಾನು ಪ್ರೌಢಶಾಲೆಯಲ್ಲಿ ಓದುತ್ತಿರುವ ಸಂದರ್ಭದಲ್ಲಿ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿ ಶ್ರೀಗಳಿಂದ ಪ್ರಥಮ ಬಹುಮಾನ ಪಡೆದಿದ್ದೆನು ಎಂದು ಸ್ಮರಿಸಿದರು.

ನಾನು ಎಲ್ಲಿಯೂ ದೇವರನ್ನು ನೋಡಿಲ್ಲ ಶ್ರೀಶ್ರೀಶ್ರೀ ಶಿವಕುಮಾರ ಸ್ವಾಮೀಜಿಗಳಲ್ಲಿ ದೇವರನ್ನು ಕಂಡಿದ್ದೇನೆ ಎಂದು ಹೇಳಿದರು.

ಸಿದ್ಧಗಂಗಾ ಮಠದ ಅಧ್ಯಕ್ಷರಾದ ಶ್ರೀಶ್ರೀ. ಸಿದ್ದಲಿಂಗ ಸ್ವಾಮೀಜಿ ಅವರು ಮಾತನಾಡಿ, ಶ್ರೀ ಮಠದಲ್ಲಿರುವ ಪ್ರಸಾದ ನಿಲಯ, ವಿದ್ಯಾರ್ಥಿಗಳ ವಸತಿ ನಿಲಯ, ಅತಿಥಿ ಗೃಹಗಳನ್ನು ನಿರ್ಮಿಸಲು ಭಕ್ತರು ಸ್ವಯಂ ಪ್ರೇರಿತರಾಗಿ ತಾವೇ ಮುಂದೆ ಬಂದು ಇಂತಹ ಸೇವಾ ಕಾರ್ಯಗಳನ್ನು ಮಾಡುತ್ತಾ ಬಂದಿದ್ದಾರೆ ಎಂದು ಹೇಳಿದರು.

ಸೋಮಣ್ಣ ಪ್ರತಿಷ್ಠಾನ ವತಿಯಿಂದ ಶ್ರೀ ಮಠದಲ್ಲಿ ಹಲವಾರು ಕಾರ್ಯಕ್ರಮಗಳನ್ನು ಮಾಡಲಾಗುತ್ತದೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರಿಗೆ ಪ್ರಶಸ್ತಿ ನೀಡುವುದರ ಮೂಲಕ ಗೌರವಿಸಲಾಗುತ್ತದೆ ಎಂದು ಹೇಳಿದರು.

ತುಮಕೂರು ಲೋಕಸಭಾ ಕ್ಷೇತ್ರದ ಸದಸ್ಯರಾದ ಜಿ.ಎಸ್ ಬಸವರಾಜು ಅವರು ಮಾತನಾಡಿ, ಪರಮೇಶ್ವರ್ ಅವರು ಶಿಕ್ಷಣ ಭೀಷ್ಮರಾದ ಗಂಗಾಧರಯ್ಯ ಅವರ ಹಾಗೆ ಸಮಾಜಮುಖಿ ಕೆಲಸಗಳನ್ನು ಇಂದಿಗೂ ಮಾಡುತ್ತಾ ಬಂದಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ದೇಗುಲ ಮಠದ ಅಧ್ಯಕ್ಷರಾದ ಶ್ರೀಶ್ರೀ ಮುಮ್ಮಡಿ ನಿರ್ವಾಣ ಮಹಾಸ್ವಾಮಿಗಳು, ಮಾಜಿ ಸಚಿವ ವಿ. ಸೋಮಣ್ಣ, ಶೈಲಜ ಸೋಮಣ್ಣ, ಶಾಸಕರುಗಳಾದ ಸುರೇಶ್ ಗೌಡ, ಜಿ.ಬಿ.ಜ್ಯೋತಿಗಣೇಶ್, ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಅಶೋಕ್ ಕೆ.ವಿ., ಸಿದ್ದಗಂಗಾ ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ಟಿ.ಕೆ.ನಂಜುಂಡಪ್ಪ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *