ಎಸ್‍ಯುಸಿಐ ಕಮ್ಯುನಿಸ್ಟ್ ಪಕ್ಷದ ಎಸ್.ಎನ್.ಸ್ವಾಮಿ ನಾಮಪತ್ರ ಸಲ್ಲಿಕೆ

ತುಮಕೂರು : ಎಸ್‍ಯುಸಿಐ ಕಮ್ಯುನಿಸ್ಟ್ ಪಕ್ಷದ ಲೋಕಸಭಾ ಅಭ್ಯರ್ಥಿಯಾಗಿ ಎಸ್.ಎನ್.ಸ್ವಾಮಿಯವರು ನಾಮ ಪತ್ರ ಜಿಲ್ಲಾ ಲೋಕಸಭಾ ಚುನಾವಣಾಧಿಕಾರಿಗಳಾದ ಶ್ರೀಮತಿ ಶುಭ ಕಲ್ಯಾಣ್ ಅವರಿಗೆ ನಾಮ ಪತ್ರ ಸಲ್ಲಿಸಿದರು.

ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ ಕಮ್ಯುನಿಸ್ಟ್ ಪಕ್ಷದ ವತಿಯಿಂದ ಇಂದು ನಾಮಪತ್ರ ಸಲ್ಲಿಸಲಾಯಿತು. ನಗರದ ಟೌನ್ ಹಾಲ್ ನಿಂದ ಮೆರವಣಿಗೆಯಲ್ಲಿ ತೆÀರಳಿ ಎಸ್‍ಯುಸಿಐ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿ,ರೈತರು,ಕಾರ್ಮಿಕರು ದುಡಿಯುವ ಜನಗಳ ಸಮಸ್ಯೆಗಳ ಧ್ವನಿಯನ್ನು ಸಂಸತ್ತಿನಲ್ಲಿ ಚರ್ಚಿಸಲು ಎಸ.ಎನ್.ಸ್ವಾಮಿಯವರನ್ನು ಬೆಂಬಲಿಸಿ,ಎಸ್‍ಯುಸಿಐ ಪಕ್ಷವನ್ನು ಬಲಪಡಿಸಿ ಎಂಬ ಘೋಷಣೆಗಳೊಂದಿಗೆ ಕಾರ್ಯಕರ್ತರು ಕೂಗುತ್ತ ಮೆರವಣಿಗೆ ನಡೆಸಿದರು.

ಮೆರವಣಿಗೆಗೆ ಮುಂಚೆ ಮಾತನಾಡಿದ ಅಭ್ಯರ್ಥಿ ಸಮಾಜದಲ್ಲಿ ಬಡವರು ಶ್ರೀಮಂತರ ನಡುವಿನ ಅಂತರ ಹೆಚ್ಚುತ್ತಿದೆ. ನಮ್ಮನ್ನು ಆಳುತ್ತಿರುವ ಪಕ್ಷಗಳು ಬಂಡವಾಳ ಶಾಹಿಗಳ ಶ್ರೀಮಂತ ಮನೆತನಗಳ ಲಾಭವನ್ನು ಹೆಚ್ಚಿಸುತ್ತಿವೆ. ದೇಶದಲ್ಲಿ ಜನರು ಬೆಲೆ ಏರಿಕೆ ನಿರುದ್ಯೋಗದಂಥ ಸಮಸ್ಯೆಗಳನ್ನು ತೀರ್ವವಾಗಿ ಎದುರಿಸುತ್ತಿರುವ ಈ ಸಂಧಿಗ್ಧ ಪರಿಸ್ಥಿತಿಯಲ್ಲಿ ಎಡಪಂಥೀಯ ಸಿಪಿಐ, ಸಿಪಿಐಎಂ ಪಕ್ಷಗಳು ಕೆಲವೊಂದು ಸೀಟುಗಳ ಲಾಭಕ್ಕಾಗಿ ಚುನಾವಣಾ ರಾಜಕೀಯದಲ್ಲಿ ಮುಳುಗಿವೆ. ಕಮ್ಯುನಿಷ್ಟ್ ವಿಚಾರಕ್ಕೆ ಕಾರ್ಮಿಕರನ್ನು ಸಜ್ಜುಗೊಳಿಸಬೇಕಾಗಿದ್ದ ಆ ಪಕ್ಷಗಳು ಇಂಡಿಯಾ ಮೈತ್ರಿ ಕೂಟಕ್ಕೆ ಬೆಂಬಲ ಸೂಚಿಸವೆ.

ಆದ್ದರಿಂದ ಈ ಚುನಾವಣೆಯಲ್ಲಿ ನಮ್ಮ ಪಕ್ಷವು ತನ್ನ ಶಕ್ತಿ ಸಾಮಥ್ಯಕ್ಕೆ ತಕ್ಕಂತೆ ಬಲವಾದ ಪರಿಣಾಮ ಬೀರಲು ಏಕಾಂಗಿಯಾಗಿ 19 ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಾಗಿದೆ. ತುಮಕೂರು ಲೋಕಸಭಾ ಕ್ಷೇತ್ರದಿಂದ ನನ್ನನ್ನು ನಿಲ್ಲಿಸಿದ್ದು ಪ್ರಜಾÐವಂತ, ವಿಚಾರಂತ ದುಡಿಯುವ ಜನರು ನಮ್ಮ ಪಕ್ಷದ ಅಭ್ಯರ್ಥಿಗಳಿಗೆ ಮತಹಾಕಿ ಗೆಲ್ಲಿಸಬೇಕೆಂದು ಮನವಿ ಮಾಡಿದರು. ಮೆರವಣಿಗೆ ಮಧ್ಯೆ ಅವರು ಸ್ವಾತಂತ್ರ್ಯ ಚೌಕದಲ್ಲಿನ ಹುತಾತ್ಮರ ಸ್ಥಂಭಕ್ಕೆ ಮಾಲಾರ್ಪಣೆ ಮಾಡಿ ಸ್ವಾತಂತ್ರ್ಯ ಹೋರಾಟಗಾರರ ಕನಸನ್ನು ನನಸು ಮಾಡುವುದು ಅವರ ಆಶಯಗಳನ್ನು ಪೂರ್ಣಗೊಳಿಸಲು ಮತ್ತು ನಮ್ಮ ಪಕ್ಷವು ದುಡಿಯುವ ಜನರ ಸರ್ವಾಧೀಕಾರವನ್ನು ತರಲು ಶ್ರಮಿಸುತ್ತದೆ ಎಂದು ತಿಳಿಸಿದರು.

ಪಕ್ಷ ರಾಜ್ಯ ನಾಯಕರಾದ ಕೆ.ವಿ.ಭಟ್ ಅವರು ಅಭ್ಯರ್ಥಿಗೆ ಶುಭಕೋರಿ ಮಾತನಾಡಿ, ನಮ್ಮ ಪಕ್ಷವು ಜನರ ಸಮಸ್ಯೆಗಳ ಬಗ್ಗೆ ಹೋರಾಟ ಕಟ್ಟುತ್ತಿದೆ. ಆನರ ನಡುವೆ ಇದ್ದು ಹಲವಾರು ಚಳುವಳಿಗೆ ನಾಯಕತ್ವ ನೀಡಿ ತುಮಕೂರಿನಲ್ಲಿ ಪಕ್ಷದ ಜವಾಬ್ದಾರಿ ಹೊತ್ತಿರುವ ಎಸ್.ಎನ್. ಸ್ವಾಮಿಯವರು ಜನರ ನೈಜ ಸಮಸ್ಯೆಗಳಿಗೆ ಸ್ಪಂಸಿಸುವವರು. ಅವರು ಸೂಕ್ತವಾದ ಅಭ್ಯರ್ಥಿಯಾಗಿದ್ದಾರೆ. ತುಮಕೂರಿನ ನಾಕರಿಕರು ಅವರನ್ನು ಬೆಂಬಲಿಸುವ ಮೂಲಕ ಗೆಲ್ಲಿಸಬೇಕೆಂದು ಹೇಳಿದರು.

ಪಕ್ಷದ ರಾಜ್ಯ ನಾಯಕರಾದ ಹೆಚ್.ಪಿ ಶಿವಪ್ರಕಾಶ್, ತುಮಕೂರು ಸಂಘಟನಾ ಸಮಿತಿಯ ಸದಸ್ಯರಾದ ಎಂ.ವಿ.ಕಲ್ಯಾಣಿ,ಮಂಜುಳ ಗೋನವಾರ, ಲೋಕೇಶ್ ಭೈರನಾಯಕನಹಳ್ಳಿ, ರತ್ನಮ್ಮ, ಅಶ್ವಿನಿ, ಪಾರ್ವತಮ್ಮ, ಪ್ರವೀಣ್, ಅಣ್ಣಪ್ಪ, ಪ್ರಶಾಂತ್, ಭಾಗವಹಿಸಿದ್ದರು.

Leave a Reply

Your email address will not be published. Required fields are marked *