ತುಮಕೂರು : ಸಮಾಜ ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳಲ್ಲೊಂದು ಮದ್ಯ ಮತ್ತು ಮಾದಕ ವಸ್ತುಗಳ ವ್ಯಸನವಾಗಿದೆ. ಇದು ವ್ಯಕ್ತಿಯ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಹಾಳು ಮಾಡುವುದμÉ್ಟೀ ಅಲ್ಲ, ಕುಟುಂಬದ ಶಾಂತಿ, ಆರ್ಥಿಕ ಸ್ಥಿತಿ ಮತ್ತು ಸಮಾಜದ ಸಮತೋಲನಕ್ಕೂ ಗಂಭೀರ ಹಾನಿಯನ್ನುಂಟು ಮಾಡುತ್ತಿದೆ ಎಂದು ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷರಾದ ಶರಣಪ್ಪ ಸಲಾದಪುರ ಅವರು ಹೇಳಿದ್ದಾರೆ.
ತುಮಕೂರಿನ ಶ್ರೀ ಸಿದ್ದಗಂಗಾ ಮಠದ ವತಿಯಿಂದ, ಮಠದ ಆವರಣದಲ್ಲಿ ಆಯೋಜಿಸಲಾದ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನ ಆವರಣದಲ್ಲಿ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ವತಿಯಿಂದ ನಿರ್ಮಿಸಲಾದ ಮದ್ಯ ಮತ್ತು ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವಂತಹ ಜನಜಾಗೃತಿ ಮಳಿಗೆ ಉದ್ಘಾಟಿಸಿ ಮಾತನಾಡಿದರು.
ಒಬ್ಬ ವ್ಯಕ್ತಿ ವ್ಯಸನಕ್ಕೆ ಒಳಗಾದರೆ ಅದರ ಪರಿಣಾಮ ಅವನೊಬ್ಬನಿಗμÉ್ಟೀ ಸೀಮಿತವಾಗುವುದಿಲ್ಲ. ಕುಟುಂಬದಲ್ಲಿ ಕಲಹ, ಆರ್ಥಿಕ ಸಂಕಷ್ಟ, ಮಕ್ಕಳ ಶಿಕ್ಷಣದಲ್ಲಿ ಅಡೆತಡೆ ಹಾಗೂ ಸಾಮಾಜಿಕ ಸಮಸ್ಯೆಗಳು ಹೆಚ್ಚಾಗುತ್ತವೆ. ಆದ್ದರಿಂದ ವ್ಯಸನ ತಡೆಯುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದರು.
ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿಯು ಮದ್ಯ ಮತ್ತು ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಜನರಲ್ಲಿ ಅರಿವು ಮೂಡಿಸುವ ಕಾರ್ಯವನ್ನು ನಿರಂತರವಾಗಿ ನಡೆಸುತ್ತಿದೆ. ಇಂತಹ ಪ್ರದರ್ಶನ ಮಳಿಗೆಗಳ ಮೂಲಕ ಮದ್ಯ ಮತ್ತು ಮಾದಕ ವಸ್ತುಗಳ ಹಾನಿಕರ ಪರಿಣಾಮಗಳನ್ನು ಸರಳವಾಗಿ ಮತ್ತು ಪರಿಣಾಮಕಾರಿಯಾಗಿ ಜನರಿಗೆ ತಿಳಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದು ತಿಳಿಸಿದರು.
ನಮ್ಮ ಯುವಕರು ದೇಶದ ಭವಿಷ್ಯ. ಅವರು ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಂಡು ವ್ಯಸನಗಳಿಂದ ದೂರ ಉಳಿಯುವುದು ಅತ್ಯಂತ ಅಗತ್ಯವಾಗಿದೆ. ಪೆÇೀಷಕರು, ಶಿಕ್ಷಕರು ಮತ್ತು ಸಮಾಜದ ಪ್ರತಿಯೊಬ್ಬರೂ ಈ ದಿಕ್ಕಿನಲ್ಲಿ ಮಕ್ಕಳಿಗೆ ಮಾರ್ಗದರ್ಶನ ನೀಡಬೇಕು ಎಂದರು.
ಶ್ರೀ ಸಿದ್ದಗಂಗಾ ಮಠವು ಸದಾ ಶಿಕ್ಷಣ, ಸೇವೆ ಮತ್ತು ಸತ್ಸಂಸ್ಕಾರಗಳ ಬೆಳಕನ್ನು ಹರಡುತ್ತಿರುವ ಮಹಾನ್ ಸಂಸ್ಥೆಯಾಗಿದೆ. ಇಂತಹ ಪವಿತ್ರ ಸ್ಥಳದಲ್ಲಿ ಈ ಜಾಗೃತಿ ಕಾರ್ಯಕ್ರಮ ಆಯೋಜಿಸಿರುವುದು ಅತ್ಯಂತ ಅರ್ಥಪೂರ್ಣವಾಗಿದೆ. ಎಲ್ಲರೂ ಮದ್ಯ ಮತ್ತು ಮಾದಕ ವಸ್ತುಗಳಿಂದ ದೂರ ಉಳಿದು ಆರೋಗ್ಯಕರ, ಶಾಂತಿಯುತ ಮತ್ತು ಸುಖಮಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕೆಂದು ಶರಣಪ್ಪ ಸಲಾದಪುರ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಕಾರ್ಯದರ್ಶಿ ಮಹೇಶ್, ಮಂಡಳಿ ಅಧ್ಯಕ್ಷರ ಆಪ್ತ ಕಾರ್ಯದರ್ಶಿ ನರಸಿಂಹಮೂರ್ತಿ ಸೇರಿದಂತೆ ಇತರರು ಉಪಸಿತರಿದ್ದರು.