ಎಕ್ಸ್ ಪ್ರೆಸ್ ಕೆನಾಲ್ ಕಾಮಗಾರಿ ವಿರೋಧಿಸಿ ಪ್ರತಿಭಟಿಸುತ್ತಿದ್ದವರ ಬಂಧನ

ತುಮಕೂರು : ಎಕ್ಸ್ ಪ್ರೆಸ್ ಕೆನಾಲ್ ಕಾಮಗಾರಿ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದವರನ್ನು ಪೊಲೀಸರು ಬಂಧಿಸಿ ಕಾಮಗಾರಿ ಸರಾಗವಾಗಿ ನಡೆಯುವಂತೆ ನೋಡಿಕೊಂಡರು.

ಗುಬ್ಬಿ ತಾಲ್ಲೂಕು ಸುಂಕಪುರ ಬಳಿ ಇಂದು 600ಕ್ಕೂ ಹೆಚ್ಚು ಪೊಲೀಸರ ಸಮ್ಮುಖದಲ್ಲಿ ಎಕ್ಸ್ ಪ್ರೆಸ್ ಕೆನಾಲ್ ಕಾಮಗಾರಿ ನಡೆಸುತ್ತಿರುವುದನ್ನು ವಿರೋಧಿಸಿ ನೋರಾರು ರೈತರು, ಮುಖಂಡರುಗಳು ಪ್ರತಿಭಟನೆ ನಡೆಸಿದರು. ಕಾಮಗಾರಿ ನಡೆಯುತ್ತಿದ್ದ ಸ್ಥಳಕ್ಕೆ ತೆರಳದಂತೆ ನೂರಾರು ಪೊಲೀಸರನ್ನು ನೇಮಿಸಿ, ಬ್ಯಾರಿಕೇಡ್‍ಗಳನ್ನು ಹಾಕಲಾಗಿತ್ತು.

ಎಕ್ ಪ್ರೆಸ್ ಕೆನಾಲ್ ಮಾಡುವುದರಿಂದ ಗುಬ್ಬಿ ಮತ್ತು ತುಮಕೂರು ಭಾಗದ ರೈತರಿಗೆ ನೀರು ಹರಿಯುವದಿಲ್ಲ, ಸಂಕಷ್ಟವನ್ನು ಎದುರಿಸಬೇಕಾಗುತ್ತದೆ, ಕುಣಿಗಲ್‍ಗೆ ನೀರು ತೆಗೆದುಕೊಂಡು ಹೋಗಲು ಚಾನಲ್ ಇದ್ದರೂ ದೊಡ್ಡ ದೊಡ್ಡ ಪೈಪ್‍ಗಳನ್ನು ಹಾಕಿ ಎಕ್ಸ್‍ಪ್ರೆಸ್ ಕೆನಾಲ್ ಮಾಡುವುದರಿಂದ ಹೇಮಾವತಿ ನಾಲೆಯಲ್ಲಿ ನೀರಿನ ಹರಿವು ಕುಂಠಿತಗೊಳ್ಳುವದರಿಂದ ಎಕ್ಸ್ ಪ್ರೆಸ್ ಕೆನಾಲ್ ನ್ನು ನಿರ್ಮಿಸಬಾರದೆಂದು ಆ ಭಾಗದ ರೈತರು ಪ್ರತಿಭಟನೆ ನಡೆಸಿದರು.

ಪ್ರತಿಭಟನೆ ತೀವ್ರಗೊಳ್ಳಬಹುದೆಂದು ಗುರವಾರ ಸ್ತತಃ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಕಾರಿಗಳೇ ನೇತೃತ್ವದಲ್ಲಿ ಸಭೆ ನಡೆಸಿ ಹೆಚ್ಚು ಪೊಲೀಸ್ ಭದ್ರೆತೆಯನ್ನು ಒದಗಿಸಿದ್ದರು.

ಇಂದು ಎಕ್ಸ್ ಪ್ರೆಸ್ ಕೆನಾಲ್ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದವರನ್ನು ಪೊಲೀಸರು ಬಂಧಿಸಿ, ಬಿಡುಗಡೆ ಮಾಡಿದರು.

ಪ್ರತಿಭಟನೆಯಲ್ಲಿ ಮಾಜಿ ಸಚಿವ ಸೊಗಡು ಶಿವಣ್ಣ, ಬಿಜೆಪಿ ಮುಖಂಡ ದಿಲೀಪ್‍ಕುಮಾರ್, ಜಿಲ್ಲಾ ರೈತ ಸಂಘದ ಅಧ್ಯಕ್ಷರಾದ ಎ.ಗೋವಿಂದರಾಜು, ಗ್ರಾಮ ಪಂಚಾಯತಿ ಸದಸ್ಯರಾದ ಕಾಡಶೆಟ್ಟಿಹಳ್ಳಿ ಸತೀಶ್ ಮುಂತಾದವರು ಸೇರಿದಂತೆ ನೂರಾರು ಜನ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Leave a Reply

Your email address will not be published. Required fields are marked *