ಶಿವಮೊಗ್ಗ : ಶಿಕಾರಿಪುರದಿಂದ ಶಸ್ತ್ರ ತ್ಯಾಗ ಮಾಡಿದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ಮಗ ಬಿ.ವೈ.ವಿಜಯೇಂದ್ರರಿಗೆ ಕ್ಷೇತ್ರವನ್ನು ಬಿಟ್ಟು ಕೊಟ್ಟಿದ್ದಾರೆ.
ಬಿ.ವೈ.ವಿಜಯೇಂದ್ರರವರು ಹಳೆ ಮೈಸೂರು ಯಾವುದಾದರೂ ಒಂದು ಕ್ಷೇತ್ರದಲ್ಲಿ ನಿಲ್ಲುತ್ತಾರೆ ಎಂಬುದಕ್ಕೆ ಈಗ ತೆರೆ ಬಿದಿದ್ದು, 2018ರ ಚುನಾವಣೆಯಲ್ಲಿ ವರುಣಾ ಕ್ಷೇತ್ರದಲ್ಲಿ ನಿಲ್ಲುತ್ತಾರೆ ಎಂದು ಕೊನೆ ಕ್ಷಣದವರೆಗೂ ಸುದ್ದಿಯಲ್ಲಿದ್ದರು. ಆದರೆ ಅವರಿಗೆ ಟಿಕೆಟ್ ಸಿಗದ ಕಾರಣ ವರುಣ ಕ್ಷೇತ್ರದ ಸ್ಪರ್ಧೆಯಿಂದ ಹಿಂದೆ ಸರಿದಿದ್ದರು.
ಬಿ.ಎಸ್. ಯಡಿಯೂರಪ್ಪನವರ ವಯೋಸಹಜದಿಂದ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಾಗುತ್ತಿಲ್ಲವಾದ್ದರಿಂದ ಕ್ಷೇತ್ರವನ್ನು ತಮ್ಮ ಪುತ್ರ ವಿಜಯೇಂದ್ರನಿಗೆ ಬಿಟ್ಟು ಕೊಡುತ್ತಿರುವುದಾಗಿ ಶಿಕಾರಿಪುರದಲ್ಲೇ ಘೋಷಿಸಿದ್ದಾರೆ.
ಸಿದ್ಧಗಂಗಾ ಮಠದ ಶ್ರೀ ಶಿವಕುಮಾರಸ್ವಾಮಿಗಳ ಜಯಂತಿಯನ್ನು ಈ ಬಾರಿ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ನಡೆಸಲಾಗಿತ್ತು, ಈ ಜಯಂತಿಯು ವಿಜಯೇಂದ್ರ ಅವರು ವಿಧಾನಪರಿಷತ್ ಸದಸ್ಯರಾಗಿ ಮಂತ್ರಿಯಾಗಲು ಮಾಡುತ್ತಿದ್ದಾರೆ ಎಂದು ಸಹ ಬಿಂಬಿತವಾಗಿತ್ತು. ಆದರೆ ಅದು ಸಾಕಾರಗೊಳ್ಳಲಿಲ