ಏ.5ರಂದು ಬಾಬು ಜಗಜೀವನರಾಂ 119ನೇ ಜಯಂತಿ

ತುಮಕೂರು : ಜಿಲ್ಲಾ ಒಳ ಮೀಸಲಾತಿ ಹೋರಾಟ ಸಮಿತಿ ಹಾಗೂ ಜಿಲ್ಲಾ ಮಾದರ ಮಹಾಸಭಾ ವತಿಯಿಂದ ಏ.5ರಂದು ಮಧ್ಯಾಹ್ನ 2 ಗಂಟೆಗೆ ತುಮಕೂರಿನ ಕುಣಿಗಲ್ ರಸ್ತೆಯಲ್ಲಿರುವ ನಾಗಾರ್ಜುನ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನರಾಂ ಅವರ 119ನೇ ಜಯಂತಿಯನ್ನು ಏರ್ಪಡಿಸಲಾಗಿದೆ.

ಕಾರ್ಯಕ್ರಮವನ್ನು ಜನಪರ ಚಿಂತಕ ಕೆ.ದೊರೈರಾಜ್ ಉದ್ಘಾಟಿಸುವರು. ಪರಿಸರ ಹೋರಾಟಗಾರ ಸಿ.ಯತಿರಾಜು ಮುಖ್ಯ ಭಾಷಣ ಮಾಡುವರು. ಡಿಎಸ್ಎಸ್ ಜಿಲ್ಲಾ ಸಂಚಾಲಕ ಕುಂದೂರು ತಿಮ್ಮಯ್ಯ ಅಧ್ಯಕ್ಷತೆ ವಹಿಸುವರು.
ಕಾರ್ಯಕ್ರಮದಲ್ಲಿ ಜಿಲ್ಲಾ ಮಾದರ ಮಹಾಸಭಾ ಜಿಲ್ಲಾಧ್ಯಕ್ಷ ಹಾಗೂ ಜಿಪಂ ಮಾಜಿ ಅಧ್ಯಕ್ಷ ವೈ.ಎಚ್.ಹುಚ್ಚಯ್ಯ, ಮಾಜಿ ಶಾಸಕರಾದ ಗಂಗಹನುಮಯ್ಯ, ಕೆ.ಎಂ.ತಿಮ್ಮರಾಯಪ್ಪ, ಜಿ.ಪಂ ಮಾಜಿ ಸದಸ್ಯ ಕೆಂಚಮಾರಯ್ಯ, ಮಾದಿಗ ದಂಡೋರ ರಾಜ್ಯಾಧ್ಯಕ್ಷ ಪಾವಗಡ ಶ್ರೀರಾಮ್, ನಾಗಾರ್ಜುನ ಪತ್ರಿನ ಸಹಕಾರ ಸಂಘದ ಅಧ್ಯಕ್ಷ ಶಿವನಂಜಪ್ಪ ಭಾಗವಹಿಸಲಿದ್ದ ದಸಂಸ ಜಿಲ್ಲಾ ಸಂಚಾಲಕ ಕುಂದೂರು ತಿಮ್ಮಯ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಇದೇ ವೇಳೆ ಹೋರಾಟಗಾರ ನರಸೀಯಪ್ಪ, ಹೋರಾಟಗಾರ್ತಿ ಕೆ.ಗಂಗಮ್ಮ, ಸಾಹಿತಿ ಡಾ.ಓ.ನಾಗರಾಜ್, ವಿಮರ್ಶಕ ಡಾ.ರವಿಕುಮಾರ್ ನೀ.ಹ. ಪತ್ರಕರ್ತ ತಿಪಟೂರು ಕೃಷ್ಣ ಅವರನ್ನು ಸನ್ಮಾನಿಸಲಾಗುವುದು.

Leave a Reply

Your email address will not be published. Required fields are marked *