ಬಾವಿಕಟ್ಟೆ ವಿಶ್ವಣ್ಣ ನಿಧನ

ತುಮಕೂರು: ಸಮಾಜ ಸೇವಕ, ಧಾರ್ಮಿಕ ಮುಖಂಡ ನಗರದ ಬಿ.ಎಸ್.ವಿಶ್ವನಾಥ್ ಅವರು ಸೋಮವಾರ ಹೃದಯಾಘಾತದಿಂದ ನಿಧನರಾದರು. ಇವರಿಗೆ 70 ವರ್ಷ ವಯಸ್ಸಾಗಿತ್ತು. ಇವರು ಪತ್ನಿ, ಇಬ್ಬರು ಗಂಡು ಮಕ್ಕಳು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

ಮಾಜಿ ಸಚಿವ ಸೊಗಡು ಶಿವಣ್ಣ ಅವರ ಭಾಮೈದುನರಾದ ವಿಶ್ವನಾಥ್ ಅವರು ಬಾವಿಕಟ್ಟೆ ವಿಶ್ವಣ್ಣ ಎಂದು ಆತ್ಮೀಯರ ವಯಲದಲ್ಲಿ ಪರಿಚಿತರಾಗಿದ್ದರು. ದೇವಸ್ಥಾನಗಳ ಜೀರ್ಣೋದ್ಧಾರ, ಧಾರ್ಮಿಕ ಸೇವಾಕಾರ್ಯಕ್ರಮಗಳಲ್ಲಿ ಹೆಚ್ಚು ತೊಡಗಿಸಿಕೊಂಡಿದ್ದ ಇವರು ಶೆಟ್ಟಿಹಳ್ಳಿ ಆಂಜನೇಯ ದೇವಸ್ಥಾನ, ದಿಬ್ಬೂರಿನ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನ, ಚಿಕ್ಕಪೇಟೆ ಗ್ರಾಮದೇವತೆ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯದಲ್ಲಿ ಪ್ರಮುಖ ಪಾತ್ರವಹಿಸಿದ್ದರು.

ಶಾಸಕ ಜಿ.ಬಿ.ಜ್ಯೋತಿಗಣೇಶ್, ಮಾಜಿ ಸಚಿವ ಸೊಗಡು ಶಿವಣ್ಣ, ಜಿಲ್ಲಾ ಬಿಜೆಪಿ ಅಧ್ಯಕ್ಷ ಹೆಬ್ಬಾಕ ರವಿಶಂಕರ್, ಸಿದ್ಧಗಂಗಾ ಆಸ್ಪತ್ರೆ ನಿರ್ದೇಶಕ ಡಾ.ಎಸ್.ಪರಮೇಶ್ ಸೇರಿದಂತೆ ವಿವಿಧ ಗಣ್ಯರು ಆಗಮಿಸಿ ಅಂತಿಮ ದರ್ಶನ ಮಾಡಿದರು. ಸೋಮವಾರ ಸಂಜೆ ಅಂತ್ಯ ಸಂಸ್ಕಾರ ನೆರವೇರಿತು.

Leave a Reply

Your email address will not be published. Required fields are marked *