ಪಡಿತರ ರೇಷನ್ ಪಡೆಯಲು 2 ಬಾರಿ ಬಯೋ ಮೆಟ್ರಿಕ್

ಎಲ್ಲಾ ಪಡಿತರ ಚೀಟಿದಾರರು ನ್ಯಾಯಬೆಲೆ ಅಂಗಡಿಗಳಲ್ಲಿ ಸೆಪ್ಟೆಂಬರ್-2022 ರ ಮಾಹೆಯಿಂದ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯ ಅನ್ನ ಭಾಗ್ಯ ಮತ್ತು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಗಳ ಪಡಿತರ ಆಹಾರಧಾನ್ಯಗಳನ್ನು ವಿತರಿಸುವ ಸಂದರ್ಭದಲ್ಲಿ ಎರಡು ಯೋಜನೆಗಳಿಗೆ ಯೋಜನೆವಾರು ಪ್ರತ್ಯೇಕವಾಗಿ ಆಧಾರ್ ಬಯೋ ದೃಢೀಕರಣ ಪಡೆಯುವಂತೆ ಆಹಾರ ಇಲಾಖೆಯ ತಂತ್ರಾಂಶದಲ್ಲಿ ಮಾರ್ಪಾಡು ಮಾಡಲಾಗಿರುತ್ತದೆ.

ಈ ಸಂಬಂಧ ಜಿಲ್ಲೆಯ ಪಡಿತರ ಚೀಟಿದಾರರು ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಆಹಾರಧಾನ್ಯಗಳನ್ನು ಪಡೆಯುವ ಸಂದರ್ಭದಲ್ಲಿ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯ ಅನ್ನ ಭಾಗ್ಯ ಮತ್ತು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಗಳಿಗೆ ಯೋಜನೆವಾರು ಪ್ರತ್ಯೇಕವಾಗಿ (ಎರಡು ಬಾರಿ) ಆಧಾರ್ ಬಯೋ ದೃಢೀಕರಣ ನೀಡಿ ಪಡಿತರ ಆಹಾರಧಾನ್ಯಗಳನ್ನು ಪಡೆಯುವಂತೆ ಪಡಿತರ ಚೀಟಿದಾರರಲ್ಲಿ ಮನವಿ ಮಾಡಲಾಗಿದೆಯೆಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ತಿಳಿಸಿದೆ.

Leave a Reply

Your email address will not be published. Required fields are marked *