ಸುರೇಶಗೌಡರನ್ನು ಗೆಲ್ಲಿಸುವುದಾಗಿ ಛಲವಾದಿ ಸಮುದಾಯ ಮಾತು ಕೊಟ್ಟಿದೆ-ಛಲವಾದಿ ನಾರಾಯಣಸ್ವಾಮಿ

ತುಮಕೂರು: ಮಾಜಿ ಶಾಸಕ ಸುರೇಶ್ ಗೌಡರನ್ನು ಗೆಲ್ಲಿಸುವುದಾಗಿ ಛಲವಾದಿ ಸಮುದಾಯ ಮಾತು ಕೊಟ್ಟಿದೆ ಅದನ್ನು ಉಳಿಸಿಕೊಳ್ಳಬೇಕು ಎಂದು ಛಲವಾದಿ ನಾರಾಯಣಸ್ವಾಮಿ ಕರೆ ನೀಡಿದರು.

ತುಮಕೂರು ಗ್ರಾಮಾಂತರ ಕ್ಷೇತ್ರದ ಶಕ್ತಿಸೌಧದಲ್ಲಿ ನಡೆದ ಛಲವಾದಿ ಸಮಾವೇಶದಲ್ಲಿ ಮಾತನಾಡಿದ ಅವರು ಮುಂದೆ ಬರುವುದು ಬಿಜೆಪಿ ಸರ್ಕಾರ, ನೀವು ಸುರೇಶ್ ಗೌಡರನ್ನು ಗೆಲ್ಲಿಸಿದರೆ ನಾನು ಹೋರಾಟ ಮಾಡಿ ಸಚಿವರನ್ನಾಗಿ ಮಾಡುತ್ತೇನೆ ಎಂದು ಭರವಸೆ ನೀಡಿದರು.

ನಾನು ದಾರಿ ತಪ್ಪಿ 40 ವರ್ಷ ಕಾಂಗ್ರೆಸ್ ನಲ್ಲಿದ್ದೆ, ಬರೀ ವೋಟ್ ಬ್ಯಾಂಕ್ ಮಾಡಿಕೊಳ್ಳುತ್ತಾರೆ ಹೊರತು ಏನು ಮಾಡುವುದಿಲ್ಲ, ಮೂಗಿ ತುಪ್ಪ ಸವರುವುದನ್ನಿ ಬಿಟ್ಟು ಏನು ಬರೋದಿಲ್ಲ, ನಮಗೆ ನೆಕ್ಕೋದಕ್ಕೂ ಆಗಲ್ಲ, ಸುಮ್ನೇ ಇರೋಕೆ ಆಗಲ್ಲ ಎನ್ನುವಂತಹ ಸ್ಥಿತಿ ದಲಿತರಿಗೆ ಇದೆ, ಅಂಬೇಡ್ಕರ್ ಅವರನ್ನು ಸೋಲಿಸಿದ ಕಾಂಗ್ರೆಸ್, ದಲಿತರಿಗೆ ಅಧಿಕಾರ ನೀಡುತ್ತದೆಯೇ ಎಂದರು.

ಅಂಬೇಡ್ಕರ್ ಎμÉ್ಟೀ ತೊಂದರೆ, ನೋವು ಆದರೂ ಸಹ ಎಲ್ಲವನ್ನು ನುಂಗಿಕೊಂಡು ದೇಶದ ಜನರನ್ನು ಸಹೋದರತ್ವದಿಂದ ಬಾಳುವಂತಹ ಸಂವಿಧಾನ ನೀಡಿದರು, ಇದನ್ನು ಸಹಿಸದ ಕಾಂಗ್ರೆಸ್ ಅಂಬೇಡ್ಕರ್ ಗೆ ಅಧಿಕಾರ ನೀಡಿದರೆ ಕಾಂಗ್ರೆಸ್ ನಾಶವಾಗಲಿದೆ ಎಂದು ಎರಡು ಬಾರಿ ಸೋಲಿಸಿದರು ಎಂದರು.

ಕಾಂಗ್ರೆಸ್ ಅನ್ನುವುದು ಜೈಲು, 40 ವರ್ಷ ಜೈಲಿನಲ್ಲಿ ಇದ್ದಂತೆ ಇದ್ದೆ, ನಾನು ರಾಜಕೀಯಕ್ಕೆ ಬರುವಾಗ ಬಿಜೆಪಿ ಇರಲಿಲ್ಲ, ಕಾಂಗ್ರೆಸ್ ಅಧಿಕಾರ ಮಾಡುತ್ತಿತ್ತು ದಾರಿ ತಪ್ಪಿ ಹೋಗಿ ಸೇರಿದ ಮೇಲೆಯೇ ಗೊತ್ತಾಗಿದ್ದು, ಅದು ಸುಡುವ ಮನೆ ಎಂದು, ಅಂಬೇಡ್ಕರ್ ಸಹ ಕಾಂಗ್ರೆಸ್ ಗೆ ದಲಿತರು ಹೋಗಬಾರದು, ಬೆಂಬಲಿಸಬಾರದು ಎಂದು ಹೇಳಿದ್ದನ್ನು ಹಿರಿಯರು ಯಾರು ಹೇಳಲಿಲ್ಲ ಎಂದರು.
ಕಾಂಗ್ರೆಸ್ ಮೀಸಲಾತಿ ಪಟ್ಟಿಗೆ ಅನೇಕ ಜಾತಿಗಳನ್ನು ಸೇರಿಸಿದರು, ಜನಸಂಖ್ಯೆಗೆ ಅನುಗುಣವಾಗಿ ಹೆಚ್ಚಿಸಲಿಲ್ಲ, ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹೆಚ್ಚಿಸಿ, ಜನಸಂಖ್ಯೆಗೆ ಅನುಗುಣವಾಗಿ ಒಳ ಮೀಸಲಾತಿ ನೀಡುವ ಮೂಲಕ ಸೌಲಭ್ಯ ನೀಡಿದ್ದ ಬಸವರಾಜ ಬೊಮ್ಮಾಯಿ ಸರ್ಕಾರ ಅರಿಯಬೇಕು ಎಂದು ಹೇಳಿದರು.

ಜನತಾದಳದವ್ರು ದಲಿತರನ್ನು ಹತ್ತಿರಕ್ಕೆ ಸೇರಿಸಿಕೊಳ್ಳುವುದಿಲ್ಲ, ನೂರೋ, ಇನ್ನೋರೋ ಕೊಟ್ಟರೆ ವೋಟು ಹಾಕ್ತಾರೆ ಎಂದು ಭಾವಿಸಿದ್ದಾರೆ, ಛಲವಾದಿಗಳು ಪ್ರೀತಿ, ವಿಶ್ವಾಸಕ್ಕೆ ಸೋಲುತ್ತಾರೆ ಹೊರತು ಹಣಕ್ಕೆ ಅಲ್ಲ ಎನ್ನುವುದನ್ನು ತೋರಿಸಬೇಕು ಎಂದು ಕರೆ ನೀಡಿದರು.

ಮಾಜಿ ಶಾಸಕ ಸುರೇಶ್ ಗೌಡ ಮಾತನಾಡಿ ಮಾದಿಗ ಮತ್ತು ಛಲವಾದಿ ಸಮುದಾಯಕ್ಕೆ ಸಮಾನವಾಗಿ ಅಧಿಕಾರ ಹಂಚುವ ಮೂಲಕ ಗ್ರಾಮಾಂತರದಲ್ಲಿ ದಲಿತರಿಗೆ ಹೆಚ್ಚಿನ ಅಧಿಕಾರವನ್ನು ನೀಡಲಾಗಿತ್ತು, ಸಮುದಾಯಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗಿತ್ತು ಎಂದರು.

ಇಂದು ಗ್ರಾಮಾಂತರದಲ್ಲಿ ದಲಿತ ವರ್ಗದ ಯುವಕರನ್ನು ಹೆಂಡ, ಮಾಂಸಕ್ಕೆ ಸೀಮಿತಗೊಳಿಸಲಾಗುತ್ತಿದೆ, ಸಮುದಾಯದ ಅಭಿವೃದ್ಧಿಗಾಗಿ ಕಟ್ಟಿಸಿದ ಶಾಲೆಗಳು ಹಾಳು ಬಿದ್ದಿವೆ, ಶಿಕ್ಷಣದ ಗುಣಮಟ್ಟ ಕುಸಿದಿದೆ ಇಂತಹ ಆಡಳಿತದಿಂದ ಅಂಬೇಡ್ಕರ್ ಆಶಯಗಳಿಂದ ವಂಚಿಸಲಾಗುತ್ತಿದೆ ಎಂದರು.

ನಾನು ಶಾಸಕನಾಗಿ ಆಯ್ಕೆ ಆದರೆ ಛಲವಾದಿ ಸಮುದಾಯಕ್ಕೆ ಎಲ್ಲ ನೇಮಕಾತಿ ಮತ್ತು ನಾಮನಿರ್ದೇಶನ ಅಧಿಕಾರ ಸ್ಥಾನಗಳಿಗೆ ಮೀಸಲು ನೀಡುವ ಮೂಲಕ ಅಧಿಕಾರಕ್ಕೆ ಬಂದ ಒಂದೇ ವರ್ಷದಲ್ಲಿ ಎರಡು ಎಕರೆ ಜಾಗದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಚಾಲನೆ ನೀಡುವುದಾಗಿ ಹೇಳಿದರು.

ಕಾರ್ಯಕ್ರಮದಲ್ಲಿ ತಾ.ಪಂ.ಮಾಜಿ ಅಧ್ಯಕ್ಷ ಗಂಗಾಜಿನೇಯ, ಹೊಳಕಲ್ಲು ಗ್ರಾ.ಪಂ ಮಾಜಿ ಸದಸ್ಯ ಗಿರೀಶ್, ರತ್ನಮ್ಮ ಇತರರಿದ್ದರು

Leave a Reply

Your email address will not be published. Required fields are marked *