ಮನುಷ್ಯನ ಜೀವನದಲ್ಲಿ ಮಹತ್ವ ಪಡೆದಿರುವ ವಿಜ್ಞಾನ

ತುಮಕೂರು : ವಿಜ್ಞಾನ ಹಾಗೂ ನಮ್ಮ ಜೀವನದಲ್ಲಿ ಅದರ ಮಹತ್ವದ ಬಗ್ಗೆ ಜನಸಾಮಾನ್ಯರಲ್ಲಿ ಅರಿವು ಮೂಡಿಸುವುದು ಈ ವಿಜ್ಞಾನ ದಿನದ ವಿಶೇಷವಾಗಿದೆ ಎಂದು ಆರ್.ವಿ ಕಾಲೇಜಿನ ವಿಜ್ಞಾನ ವಿಭಾಗದ ಡಾ. ತ್ರಿಬಿಕ್ರಮ್ ಗುಪ್ತ ನುಡಿದರು.

ನಗರದ ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಆರ್.ವಿ ಕಾಲೇಜಿನ ವಿಜ್ಞಾನ ವಿಭಾಗದ ಡಾ. ತ್ರಿಬಿಕ್ರಮ್ ಗುಪ್ತ ರವರು ಕಾರ್ಯಕ್ರಮವನ್ನು ಜ್ಯೋತಿ ಬೆಳಿಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಡಾ.ತ್ರಿಬಿಕ್ರಮ್ ಗುಪ್ತ ಮಾತನಾಡಿ, ಏಷ್ಯಾದಲ್ಲೇ ಮೊದಲ ನೊಬೆಲ್ ಭೌತವಿಜ್ಞಾನ ಪ್ರಶಸ್ತಿ ಪುರಸ್ಕøತ ವಿಜ್ಞಾನಿ ಭಾರತದ ಸಿ.ವಿ.ರಾಮನ್ ರವರ ಬೆಳಕಿನ ಚದುರುವಿಕೆಯ ಪರಿಣಾಮದ ಸಾಧನೆಗಳ ನೆನಪಿನಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಆಚರಿಸುತ್ತೆವೆ. 1928ರ ಫೆಬ್ರವರಿ 28ರಂದು ಬೆಂಗಳೂರಿನ ಸೇಂಟ್ರಲ್ ಕಾಲೇಜಿನಲ್ಲಿ ಡಾ.ಸಿ.ವಿ ರಾಮನ್ ಬೆಳಕಿನ ಚದುರುವಿಕೆಯ ಪರಿಣಾಮ ಕುರಿತು ಪ್ರಯೋಗ ಮಂಡಿಸಿದರು. ಈ ಸಂಶೋಧನೆಯು ರಾಮನ್ ಪರಿಣಾಮ ಅಥವಾ ರಾಮನ್ ಎಫೆಕ್ಟ್ ಎಂದು ಜಗತ್ಪ್ರಸಿದ್ಧಿಯಾಯಿತು. ಈ ಕಾರಣಕ್ಕಾಗಿ ಪ್ರತಿವರ್ಷ ಫೆಬ್ರವರಿ 28ರಂದು ದೇಶದಾದ್ಯಂತ ರಾಷ್ಟ್ರೀಯ ವಿಜ್ಞಾನ ದಿನವನ್ನು ಆಚರಿಸಲಾಗುತ್ತದೆ ಎಂದರು.

ಪ್ರತಿವರ್ಷ ಹೊಸದೊಂದು ಘೋಷವಾಕ್ಯದಡಿ ರಾಷ್ಟ್ರೀಯ ವಿಜ್ಞಾನ ದಿನವನ್ನು ಆಚರಿಸಲಾಗುತ್ತದೆ. ಈ ವರ್ಷ ಜಾಗತಿಕ ಸೌಖ್ಯಕ್ಕಾಗಿ ಜಾಗತಿಕ ವಿಜ್ಞಾನ ಎಂಬ ಘೋಷವಾಕ್ಯದಡಿಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನವನ್ನು ಆಚರಿಸಲಾಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಕ್ವಾಂಟಮ್ ಮೇಕ್ಯಾನಿಕ್ಸ್ ಮತ್ತು ಕ್ವಾಂಟಮ್ ಕಂಪ್ಯೂಟೇಶನ್ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ಸಾಹೇ ವಿಶ್ವ ವಿದ್ಯಾಲಯದ ರಿಜಿಸ್ಟ್ರಾರ್ ಡಾ.ಎಂ.ಝೆಡ್ ಕುರಿಯನ್ ಮಾತನಾಡಿ, ಇಂದಿನ ದಿನದಲ್ಲಿ ವಿಜ್ಞಾನ ಕ್ಷೇತ್ರದಲ್ಲಿ ನಾವು ಏನಾದರೂ ಸಾಧನೆ ಮಾಡಬೇಕೆಂದರೆ ತಂತ್ರಜ್ಞಾನ ಅಳವಡಿಕೆ ಮಹತ್ವವಾಗಿದೆ ಎಂದರು.

ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಎಂ.ಎಸ್ ರವಿಪ್ರಕಾಶ, ಪರೀಕ್ಷಾಂಗ ವಿಭಾಗದ ಡೀನ್ ಡಾ.ಕೆ ಕರುಣಾಕರ್, ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಡಾ. ಎಂ.ಎಸ್ ರುದ್ರೇಶ್, ರಸಾಯನ ಶಾಸ್ತ್ರ ವಿಭಾಗ ಮುಖ್ಯಸ್ಥರಾದ ಡಾ.ಕೆ.ಸುನಿಲ್, ಗಣಿತ ವಿಭಾಗದ ಮುಖ್ಯಸ್ಥರಾದ ಡಾ.ವೆಂಕಣಗೌಡ ಹಾಗೂ ಬೋಧಕ ವರ್ಗ ಮತ್ತು ವಿದ್ಯಾರ್ಥಿಗಳು ಭಾಗಿಯಾಗಿದ್ದರು.

Leave a Reply

Your email address will not be published. Required fields are marked *