ತುಮಕೂರು : ಕರ್ನಾಟಕ ದಲಿತ ಸಂಘರ್ಷ ಸಮಿತಿ ಮತ್ತು ಚರಕ ಚಾರಿಟಬಲ್ ಟ್ರಸ್ಟ್ ವತಿಯಿಂದ ಮಾರ್ಚ್ 1ರ ಭಾನುವಾರ ಬೆಳಿಗ್ಗೆ 10-30ಕ್ಕೆ ಅಭಿನಂದನಾ ಸಮಾರಂಭ ಮತ್ತು ವಿಚಾರಗೋಷ್ಠಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಾರ್ಯಕ್ರಮದ ಆಯೋಜಕರಾದ ವಿರೂಪಾಕ್ಷ ಡ್ಯಾಗೇರಹಳ್ಳಿ ತಿಳಿಸಿದ್ದಾರೆ.
ಸಮಾರಂಭವನ್ನು ಮಾಜಿ ಸಹಕಾರ ಸಚಿವರಾದ ಶಾಸಕ ಕೆ.ಎನ್.ರಾಜಣ್ಣ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಚರಕ ಆಸ್ಪತ್ರೆಯ ಡಾ||ಬಸವರಾಜು ವಹಿಸಲಿದ್ದಾರೆ. ವಿಚಾರಗೋಷ್ಠಿಯಲ್ಲಿ ಸಮಕಾಲಿನ ಸಾಮಾಜಿಕ, ರಾಜಕೀಯ, ಸಾಂಸ್ಕøತಿಕ ತಲ್ಲಣಗಳು ಎಂಬ ವಿಷಯದ ಬಗ್ಗೆ ಹಿರಿಯ ಪತ್ರಕರ್ತರಾದ ದಿನೇಶ್ ಅಮಿನ್ ಮಟ್ಟು ಮಾತನಾಡಲಿದ್ದು, ದಲಿತ ಚಳುವಳಿಯ ಸವಾಲು ಮತ್ತು ಸಾಧ್ಯತೆಗಳು ಎಂಬ ವಿಷಯದ ಬಗ್ಗೆ ರವಿಕುಮಾರ್ ಬಾಗಿ ಮಾತನಾಡಿದರೆ, ಸಮಕಾಲಿನ ಕರ್ನಾಟಕ ಮತ್ತು ಸಾಮಾಜಿಕ ನ್ಯಾಯದ ಪ್ರಶ್ನೆ ಬಗ್ಗೆ ವಿ.ಎಲ್.ನರಸಿಂಹಮೂರ್ತಿ ಮಾತನಾಡುವರು.
ಇದೇ ಸಂದರ್ಭದಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ಪುರಸ್ಕøತರಾದ ತುಂಬಾಡಿ ರಾಮಯ್ಯ, ಬಾಬು ಜಗಜೀವನ್ ರಾಮ್ ರಾಜ್ಯ ಪ್ರಶಸ್ತಿ ಪುರಸ್ಕøತರಾದ ಕುಂದೂರು ತಿಮ್ಮಯ್ಯ ಮತ್ತು ಕೆ.ದೊರೈರಾಜ್ ಅವರನ್ನು ಸನ್ಮಾನಿಸಲಾಗುವುದು.
ಉಪವಿಭಾಗಾಧಿಕಾರಿ ನಾಹಿದಾ ಜಂ ಜಂ, ಸಾಮಾಜಿಕ ಹೋರಾಟಗಾರ ಶ್ರೀಪಾದ್ ಭಟ್, ಕಲೇಸಂ ತುಮಕೂರು ಜಿಲ್ಲಾಧ್ಯಕ್ಷರಾದ ಡಾ.ಆಶಾರಾಣಿ ಬಗ್ಗನಡು ಉಪಸ್ಥಿತರಿರುವರು. ಡಾ.ರವಿಕುಮಾರ್ ನೀಹ ಅವರು ಅಭಿನಂದನಾ ನುಡಿಗಳನ್ನಾಡಲಿದ್ದು, ಎ.ರಾಮಚಂದ್ರ ಅವರು ಪ್ರಾಸ್ತಾವಿಕ ನುಡಿಗಳನ್ನು ಆಡಲಿದ್ದು, ಡಾ.ಶಿವಣ್ಣ ತಿಮ್ಲಾಪುರ ಅವರು ಕಾರ್ಯಕ್ರಮ ನಿರ್ವಹಣೆ ಮಾಡುವರು.