ಕಾಂಗ್ರೆಸ್: ಹೈಕಮಾಂಡ್ ತೀರ್ಮಾನದಂತೆ ಅಭ್ಯರ್ಥಿಗಳ ಆಯ್ಕೆ-ಸಲೀಂ ಅಹಮದ್

ತುಮಕೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಜಿಲ್ಲೆಯ 11 ಕ್ಷೇತ್ರಗಳಲ್ಲಿ ಸ್ಪರ್ಧಿಸಲು 49 ಜನ ಆಕಾಂಕ್ಷಿತರು ಅರ್ಜಿ ಸಲ್ಲಿಸಿದ್ದಾರೆ ಎಂದು ಹಾಗೂ ಹೈಕಮಾಂಡ್ ತೀರ್ಮಾನದಂತೆ 2023ರ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು ರಾಜ್ಯ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ತಿಳಿಸಿದರು.

ಅವರು ಶನಿವಾರ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಬಯಸುವ ಆಕಾಂಕ್ಷಿತರಿಂದ ಅರ್ಜಿ ಸಲ್ಲಿಕೆಗಾಗಿ ಶನಿವಾರ ಸಭೆ ಕರೆಯಲಾಗಿತ್ತು. ಇದರಲ್ಲಿ ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳಿಗೆ 49 ಅಭ್ಯರ್ಥಿಗಳು ಟಿಕೆಟ್ ಬಯಸಿ ಅರ್ಜಿ ಸಲ್ಲಿಸಿದ್ದಾರೆ. ಈ ಪಟ್ಟಿಯನ್ನು ರಾಜ್ಯ ಸಮಿತಿ ಪರಿಶೀಲಿಸಿದ ನಂತರ ಸೂಕ್ತ ಅಭ್ಯರ್ಥಿಗಳನ್ನು ನಿರ್ಧಾರಿಸಲಿದ್ದೇವೆ ಎಂದರು.

ತುಮಕೂರು ನಗರ ಕ್ಷೇತ್ರಕ್ಕೆ 8 ಜನ,ಗ್ರಾಮಾಂತರ ಕ್ಕೆ 4, ಚಿ.ನಾ.ಹಳ್ಳಿ 9,ಪಾವಗಡ 8, ತುರುವೇಕೆರೆ 5, ಶಿರಾ 3, ಗುಬ್ಬಿ 3,ತಿಪಟೂರು 4,ಕುಣಿಗಲ್ 2, ಕೊರಟಗೆರೆ 2 ಹಾಗೂ ಮಧುಗಿರಿ ವಿಧಾನಸಭಾ ಕ್ಷೇತ್ರಗಳಿಗೆ ಸ್ಪರ್ಧಿಸಲು ಒಟ್ಟು 49 ಜನ ಟಿಕೆಟ್ ಗಾಗಿ ಅರ್ಜಿ ಸಲ್ಲಿಸಿದ್ದಾರೆ ಎಂದರು.


ಹೈಕಮಾಂಡ್ ತಿರ್ಮಾನದಂತೆ ಅಭ್ಯರ್ಥಿಗಳ ಪಟ್ಟಿ ಸಿದ್ಧವಾಗಲಿದೆ ಎಂದರು.

ರಾಜ್ಯದಲ್ಲಿ 15೦ ಸ್ಥಾನಗಳಲ್ಲಿ ಗೆಲ್ಲುವ ವಿಶ್ವಾಸ ಹೊಂದಿದ್ದೇವೆ. ಭ್ರಷ್ಟ ಬಿಜೆಪಿ ಸರ್ಕಾರ ವಿರುದ್ಧ ಜನರು ಬೇಸತ್ತಿದ್ದೂ ಈ ಬಾರಿ ಕಾಂಗ್ರೆಸ್ ಅಧಿಕಾರ ನೀಡಲಿದ್ದಾರೆ ಎಂದರು.


ಜನವರಿ 11 ರಿಂದ 29 ರವರಿಗೆ ರಾಜ್ಯ ಮುಖಂಡರ ಸಾಮೂಹಿಕ ನಾಯಕತ್ವದಲ್ಲಿ ರಾಜ್ಯ ಪ್ರವಾಸ ಹಮ್ಮಿಕೊಳ್ಳಲಾಗಿದೆ.ಜ.2 ರಂದು ಚಿತ್ರದುರ್ಗ ದಲ್ಲಿ ಪರಿಶಿಷ್ಟ ಪಂಗಡಗಳ ಸಮಾವೇಶ ನಡೆಯಲಿದೆ. ಜ.11 ರಂದು ಬೃಹತ್ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಇದಕ್ಕೂ ಮುನ್ನ 11 ಕ್ಷೇತ್ರಗಳಿಗೆ ಅರ್ಜಿ ಸಲ್ಲಿಸಿರುವವರ ವೈಯಕ್ತಿಕವಾಗಿ ಚುನಾವಣೆಗೆ ಟಿಕೆಟ್ ಬಯಸಿರುವುದರ ಬಗ್ಗೆ ಮಾಹಿತಿಯನ್ನು ಪಡೆದುಕೊಳ್ಳಲಾಯಿತು.

ಪತ್ರಿಕಾಗೋಷ್ಠಿಯಲ್ಲಿ ರಾಜ್ಯಸಭಾ ಸದಸ್ಯರಾದ ಎಲ್.ಹನುಮಂತಯ್ಯ, ಜಿಲ್ಲಾ ಕಾಂಗ್ರೆಸ್ ಆಧ್ಯಕ್ಷರಾದ ಚಂದ್ರಶೇಖರ್‍ಗೌಡ ಇದ್ದರು.

Leave a Reply

Your email address will not be published. Required fields are marked *