ಕಾಂಗ್ರೆಸ್‌ ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ, ತುಮಕೂರು, ಗುಬ್ಬಿ, ತು.ಗ್ರಾ. ಕ್ಕೆ ಯಾರ ಹೆಸರು ಅಂತಿಮ ಗೊಳಿಸಿಲ್ಲ.

ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಕಾಂಗ್ರೆಸ್ ಇಂದು ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು, ವರುಣಾ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಟಿಕೆಟ್ ನಿಡಲಾಗಿದೆ.

ತುಮಕೂರು ನಗರ, ಗ್ರಾಮಾಂತರ, ಗುಬ್ಬಿ ಕ್ಷೇತ್ರದಕ್ಕೆ ಯಾರ ಹೆಸರನ್ನು ಅಂತಿಮಗೊಳಿಸಿಲ್ಲ.

ತುರುವೇಕೆರೆ-ಕಾಂತರಾಜು ಬೆಮಲ್, ಕೊರಟಗೆರೆ-ಡಾ.ಜಿ.ಪರಮೇಶ್ವರ್, ಶಿರಾ-ಟಿ.ಬಿ.ಜಯಚಂದ್ರ, ಮಧುಗಿರಿ-ಕೆ.ಎನ್.ರಾಜಣ್ಣ, ಪಾವಗಡ-ಹೆಚ್.ವಿ.ವೆಂಕಟೇಶ್, ಚಿಕ್ಕನಾಯಕನಹಳ್ಳಿ-ಕೆ.ಎಸ್.ಕಿರಣ್‍ಕುಮಾರ್, ತಿಪಟೂರು-ಕೆ.ಷಡಕ್ಷರಿ, ಕುಣಿಗಲ್-ಡಾ.ರಂಗನಾಥ ಅವರುಗಳಿಗೆ ಮೊದಲ ಪಟ್ಟಿಯಲ್ಲೇ ಟಿಕೆಟ್ ಘೋಷಣೆಯಾಗಿದೆ.

ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಅಳೆದು ತೂಗಿ 124 ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ವರುಣಾ ಕ್ಷೇತ್ರದಿಂದ ಮಾಜಿ ಸಿಎಂ ಸಿದ್ದರಾಮಯ್ಯ ಸ್ಪರ್ಧಿಸಲಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ 124 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮೊದಲ ಪಟ್ಟಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಹೆಸರಿದೆ.

ಇಲ್ಲಿದೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ

ವರುಣಾ ಕ್ಷೇತ್ರದಿಂದ ಸಿದ್ದರಾಮಯ್ಯ

ಟಿ.ನರಸೀಪುರ- ಹೆಚ್. ಸಿ. ಮಹದೇವಪ್ಪ

ದೇವನಹಳ್ಳಿ ಕ್ಷೇತ್ರದಿಂದ ಕೆ.ಹೆಚ್. ಮುನಿಯಪ್ಪ

Leave a Reply

Your email address will not be published. Required fields are marked *