ತುಮಕೂರು:ಸಮಗ್ರ, ಸಂವೃದ್ದ, ಸೌಹಾರ್ಧ ಕರ್ನಾಟಕ ಘೋಷ ವಾಕ್ಯದೊಂದಿಗೆ ತುಮಕೂರಿನಲ್ಲಿ ನಡೆದ ಸಿಪಿಐ(ಎಂ)ನ 24ನೇ ರಾಜ್ಯ ಸಮ್ಮೇಳನದಲ್ಲಿ ಪಕ್ಷದ ಮುಂದಿನ ಮೂರು ವರ್ಷಗಳ ನಡೆ ಕುರಿತು ಚರ್ಚೆ ನಡೆಸಿ, 32 ನಿರ್ಣಯಗಳನ್ನ ಕೈಗೊಂಡಿದ್ದು,ಪ್ರಜಾಪ್ರಭುತ್ವ ಮತ್ತು ಕೋಮು ಸೌಹಾರ್ಧತೆಯನ್ನು ಉಳಿಸುವ ನಿಟ್ಟಿನಲ್ಲಿ ಮುಂದಿನ ಮೂರು ವರ್ಷ ಕೆಲಸ ಮಾಡಲಿದೆ ಎಂದು ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಯು.ಬಸವರಾಜು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು,ಸರ್ವಾಧಿಕಾರ ಮತ್ತು ಕೋಮುವಾದಿಕರಣವನ್ನು ಹಿಮ್ಮೆಟ್ಟಿಸಲು, ಪ್ರಜಾಪ್ರಭುತ್ವದ ಸಂರಕ್ಷಣೆಗೆ ಸಿಪಿಐ(ಎಂ) ಕೆಲಸ ಮಾಡಲಿದೆ. ಜೊತೆಗೆ, ಕೇಂದ್ರ ಮತ್ತು ರಾಜ್ಯ ಸರಕಾರಗಳ ನವ ಉದಾರೀಕರಣದಿಂದ ಜನರ ಮೇಲಾಗುತ್ತಿರುವ ದಾಳಿಯ ವಿರುದ್ದ ಜನರ ಬದುಕನ್ನು ಸಂರಕ್ಷಿಸಲು ಪ್ರಬಲವಾದ ಆಂದೋಲನವನ್ನು ಕಟ್ಟುವ ನಿಟ್ಟಿನಲ್ಲಿ ಮಾಕ್ರ್ಸ್ವಾದಿ ಕಮ್ಯುನಿಷ್ಟ ಪಕ್ಷ ಕೆಲಸ ಮಾಡಲಿದೆ ಎಂದರು.
ದೇಶದಲ್ಲಿ ರಾಜಕೀಯ ಪ್ರಜಾಪ್ರಭುತ್ವವನ್ನು ಉಳಿಸುವ ನಿಟ್ಟಿನಲ್ಲಿ, ಕೋಮು ಸೌರ್ಹಾಧತೆಯನ್ನು ಕಾಯ್ದುಕೊಳ್ಳುವ ಸಲುವಾಗಿ ಎನ್.ಡಿ.ಎ ಮಿತ್ರಗಳನ್ನು ಅಧಿಕಾರದಿಂದ ದೂರ ಇಡಲು ಎಡ ಪಕ್ಷಗಳ ನಡುವೆ ಸಮನ್ವಯ ಸಾಧಿಸುವ ಮೂಲಕ ಪರ್ಯಾಯ ರಾಜಕೀಯ ಶಕ್ತಿಯನ್ನು ಹುಟ್ಟು ಹಾಕುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಕೆಲಸ ಮಾಡಲಿದೆ. ಇದರ ಅಂಗವಾಗಿ 2025ರ ಫೆಬ್ರವರಿ 20 ರಂದು ಕೇಂದ್ರ ಮತ್ತು ರಾಜ್ಯ ಸರಕಾರದ ನೀತಿಗಳ ವಿರುದ್ದ ಬೃಹತ್ ಪಾದಯಾತ್ರೆ ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ ಎಂದು ಯು.ಬಸವರಾಜು ನುಡಿದರು.
ಮುಂಬರುವ ಜನವರಿಯಲ್ಲಿ ಆರ್.ಎಸ್.ಎಸ್. ಗುಲ್ಬರ್ಗದಲ್ಲಿ ಕಲ್ಯಾಣ ಕರ್ನಾಟಕ ಶರಣ ಚಳವಳಿಯ ಮೇಲೆ ದಾಳಿ ನಡೆಸುವ ನಿಟ್ಟಿನಲ್ಲಿ ಭಾರತೀಯ ಸಂಸ್ಕøತಿ ದರ್ಶನದ ಹೆಸರಿನಲ್ಲಿ ಮಾಡುತ್ತಿರುವ ಸಮಾವೇಶಕ್ಕೆ ಪರ್ಯಾಯವಾಗಿ ಪ್ರಗತಿಪರರು, ಚಿಂತಕರು 2025ರ ಜನವರಿ 3ನೇ ವಾರದಲ್ಲಿ ರೂಪಿಸುವ ಸಮಾವೇಶದಲ್ಲಿ ಸಿಪಿಐ(ಎಂ) ಪಾಲ್ಗೊಳ್ಳಲಿದೆ.ರಾಜ್ಯದಲ್ಲಿ ಕೋಮು ಸೌಹಾರ್ಧತೆ ಕಾಪಾಡುವ ನಿಟ್ಟಿನಲ್ಲಿ ನಡೆಯುವ ಎಲ್ಲಾ ಹೋರಾಟಗಳಲ್ಲಿ ಪಕ್ಷ ಸಕ್ರಿಯವಾಗಿ ಪಾಲ್ಗೊಳ್ಳಬೇಕೆಂದು ಸಮಾವೇಶದಲ್ಲಿ ನಿರ್ಣಯ ಕೈಗೊಳ್ಳಲಾಗಿದೆ ಎಂದು ಯು.ಬಸವರಾಜು ತಿಳಿಸಿದರು.
ಸಿಪಿಐ(ಎಂ) ರಾಜ್ಯ ಕಾರ್ಯಕಾರಿ ಮಂಡಳಿ ಸದಸ್ಯ ಮೀನಾಕ್ಷಿ ಸುಂದರಂ ಮಾತನಾಡಿ,ಸುಮಾರು 50 ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯ ಸರಕಾರದ ಬಜೆಟ್ ಅಧಿವೇಶನ ನಡೆಯುವ ಮುನ್ನ 2025ರ ಮಾರ್ಚ್ನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲು ಮುಂದಾಗಿದೆ.ಇದರ ಜೊತೆಗೆ, ಕೇಂದ್ರ ಸರಕಾರ ಜಾರಿಗೆ ತಂದಿರುವ ಕಾರ್ಮಿಕರಿಗೆ ಸಂಬಂಧಿಸಿದ ನಾಲ್ಕು ಸಂಹಿತೆಗಳನ್ನು ರಾಜ್ಯದಲ್ಲಿ ಜಾರಿ ಮಾಡಬಾರದು ಎಂಬ ಬೇಡಿಕೆಯನ್ನು ರಾಜ್ಯ ಸರಕಾರದ ಮುಂದಿಡಲಾಗುವುದು ಎಂದರು.
ಸುದ್ದಿಗೋಷ್ಠಿಯಲ್ಲಿ ಸಿಪಿಐ(ಎಂ) ರಾಜ್ಯ ಕಾರ್ಯಕಾರಿ ಮಂಡಳಿ ಸದಸ್ಯ ಸೈಯದ್ ಮುಜೀಬ್, ಜಿಲ್ಲಾ ಕಾರ್ಯದರ್ಶಿ ಎನ್.ಕೆ.ಸುಬ್ರಮಣ್ಯ ಉಪಸ್ಥಿತರಿದ್ದರು.