ಸಿದ್ದರಾಮಯ್ಯ ನವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿ.ಕೆ.ಶಿವಕುಮಾರ್



ಬೆಂಗಳೂರು : ಇಂದು ಬೆಳಿಗ್ಗೆ 9 ಗಂಟೆಗೆ ಮುಖ್ಯಮಂತ್ರಿ ಸಿದಗದರಾಮಯ್ಯನವರು ಏರ್ಪಡಿಸಿದ್ದ ಉಪಹಾರಕ್ಕೆ ಬಂದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪಾದ ಮುಟ್ಟಿ ನಮಸ್ಕರಿಸಿದರು.



ಮುಖ್ಯಮಂತ್ರಿಗಳ ನಿವಾಸದಲ್ಲಿ ನಡೆದ ಉಪಹಾರ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಅಪ್ಪಿಕೊಂಡು ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡಿದ್ದು, ಈ ಸಂದರ್ಭದಲ್ಲಿ ಡಿಸಿಎಂ ಶಿವಕುಮಾರ್ ಅವರು ಸಿದ್ದರಾಮಯ್ಯನವರ ಪಾದ ಮುಟ್ಟಿ ನಮಸ್ಕರಿಸುವ ಮೂಲಕ ಗಮನ ಸೆಳೆದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ 2026ರ ಮೇ 28, ತಮ್ಮ ರಾಜೀನಾಮೆಯನ್ನು ರಾಜ್ಯಪಾಲರಿಗೆ ಸಲ್ಲಿಸುವ ಸಾಧ್ಯತೆಯಿದೆ. ಅವರು ಈಗಾಗಲೇ ರಾಜ್ಯಪಾಲರ ಭೇಟಿಗೆ ಸಮಯಾವಕಾಶ ಕೋರಿದ್ದಾರೆ ಎಂದು ವರದಿಯಾಗಿದೆ.



ಇಂದು ಬೆಳಿಗ್ಗೆ ಬೆಂಗಳೂರಿನಲ್ಲಿರುವ ಸಿಎಂ ನಿವಾಸ ‘ಕಾವೇರಿ’ಯಲ್ಲಿ ಸಚಿವ ಸಂಪುಟದ ಸಹೋದ್ಯೋಗಿಗಳೊಂದಿಗೆ ಸಿದ್ದರಾಮಯ್ಯ ಅವರು ಉಪಹಾರ ಸಭೆಯನ್ನು ಆಯೋಜಿಸಿದ್ದಾರೆ. ಈ ಸಭೆಯ ನಂತರ ಅಧಿಕೃತ ಘೋಷಣೆ ಹೊರಬೀಳುವ ನಿರೀಕ್ಷೆಯಿದೆ.

Leave a Reply

Your email address will not be published. Required fields are marked *