ತುಮಕೂರು : ಕಾಂಗ್ರೆಸ್ ಪಕ್ಷದ ಸಂಸದರು, ವಿಪಕ್ಷ ನಾಯಕರಾದ ರಾಹುಲ್ ಗಾಂಧಿ ಅವರ ಸತ್ಯವಾದ ಹೇಳಿಕೆಯನ್ನು ಸಹಿಸಲಾರದೆ ಕೇಂದ್ರ ಬಿಜೆಪಿ ಸರ್ಕಾರ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸುವ ಮೂಲಕ ತಮ್ಮ ಹೇಡಿತನವನ್ನು ಪ್ರದರ್ಶಿಸಿದೆ ಎಂದು ತುಮಕೂರು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾದ ರಾಯಸಂದ್ರ ಎಸ್.ರವಿಕುಮಾರ್ ತೀವ್ರಾವಾಗಿ ಖಂಡಿಸಿದ್ದಾರೆ.
ದೀಪ ಆರುವ ಮುನ್ನ ಜೋರಾಗಿ ಉರಿಯುವ ಹಾಗೆ ಬಿಜೆಪಿ ಪಕ್ಷ ತನ್ನ ಅಂತ್ಯವನ್ನು ತಾನೇ ಸಿದ್ಧಪಡಿಸಿಕೊಳ್ಳುತ್ತಿದೆ. ಬಿಜೆಪಿ ಸರ್ಕಾರದ ಇಂತಹ ಬೆದರಿಕೆಗಳಿಗೆ ಭಯಪಡುವುದಕ್ಕೆ, ಕ್ಷಮೆ ಕೇಳುವುದಕ್ಕೆ, ನಾವು ಸಾವರ್ಕರ ಅನುಯಾಯಿಗಳಲ್ಲ ಮಹಾತ್ಮಾ ಗಾಂಧಿ ಅವರ ಅನುಯಾಯಿಗಳು ಎಂದು ಹೇಳಿದ್ದಾರೆ.
ರಾಹುಲ್ ಗಾಂಧಿ ಅವರನ್ನು ನೇರವಾಗಿ ಎದುರಿಸಲು ಸಾಧ್ಯವಾಗದ ಸಂದರ್ಭದಲ್ಲಿ ಇಂತಹ ಅನ್ಯಮಾರ್ಗಗಳ ಮೂಲಕ ಕುಗ್ಗಿಸಬೇಕು ಎಂದು ಹೊರಟಿರುವುದು ನಾಚಿಕೆಗೇಡು. ಕಾಂಗ್ರೆಸ್ ಪಕ್ಷ ಅಂದು ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಟ ಮಾಡಿತ್ತು, ಇಂದು ಸಂವಿಧಾನವನ್ನು ಉಳಿಸುವುದಕ್ಕಾಗಿ ಬಿಜೆಪಿ ವಿರುದ್ಧ ಹೋರಾಟ ಮಾಡುವ ಸಂದರ್ಭ ಬಂದಿದೆ ಎಂದು ತಿಳಿಸಿದ್ದಾರೆ.
ಕಾಂಗ್ರೆಸ್ ಪಕ್ಷ ಹೋರಾಟಕ್ಕೆ ಸದಾ ಸಿದ್ಧ ಇದರ ವಿರುದ್ಧ ನಾವು ಹೋರಾಡುತ್ತೇವೆ ಬಿಜೆಪಿ ಸರ್ಕಾರದ ಈ ನಡೆಯನ್ನು ತೀವ್ರವಾಗಿ ಖಂಡಿಸುವುದಾಗಿ ತುಮಕೂರು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾದ ರಾಯಸಂದ್ರ ಎಸ್.ರವಿಕುಮಾರ್ ತಿಳಿಸಿದ್ದಾರೆ.