ಎಸ್.ಎಸ್.ಎಲ್.ಸಿ. ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಭೇಟಿ

ತುಮಕೂರು : ರಾಜ್ಯದಾದ್ಯಂತ ಇಂದಿನಿಂದ ಆರಂಭವಾಗಿರುವ ಎಸ್.ಎಸ್.ಎಲ್.ಸಿ. ಪರೀಕ್ಷೆ-1ರ ಅಂಗವಾಗಿ ತುಮಕೂರು ನಗರದ ಎಂಪ್ರೆಸ್ ಕಾಲೇಜು, ಕಾಳಿದಾಸ ಪ್ರೌಢಶಾಲೆ ಸೇರಿದಂತೆ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಬುಧವಾರ ಭೇಟಿ ನೀಡಿ ಪರಿಶೀಲಿಸಿದರು.

ಇಂದು ಬೆಳಿಗ್ಗೆ 8 ಗಂಟೆಯಿಂದಲೇ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಬಂದು ತಮ್ಮ ತಮ್ಮ ನೋಂದಣಿ ಸಂಖ್ಯೆ ಮತ್ತು ಕೊಠಡಿಗಳನ್ನು ಹುಡುಕಿಕೊಂಡು ಪರೀಕ್ಷೆ ಬರೆಯಲು ಉತ್ಸಾಹದಿಂದಿರುವ ವಿದ್ಯಾರ್ಥಿಗಳನ್ನು ನೋಡಿದ ಜಿಲ್ಲಾಧಿಕಾರಿಗಳು, ಎಸ್.ಎಸ್.ಎಲ್.ಸಿ. ಪರೀಕ್ಷೆ ಜೀವನದ ಕೊನೆ ಪರೀಕ್ಷೆ ಅಲ್ಲ, ಶಾಲೆಯಲ್ಲಿ ಕೇಳಿದ ಪಾಠ ಮತ್ತು ಓದಿರುವುದನ್ನು ನೆನಪಿನಲ್ಲಿಟ್ಟುಕೊಂಡು ಪರೀಕ್ಷೆಯನ್ನು ಉತ್ತಮವಾಗಿ ಬರೆಯಬೇಕು. ಎಸ್.ಎಸ್.ಎಲ್.ಸಿ. ಪರೀಕ್ಷೆಯು ಮೂರು ಬಾರಿ ನಡೆಯಲಿದೆ. ಹಾಗಾಗಿ ವಿದ್ಯಾರ್ಥಿಗಳು ಯಾವುದೇ ರೀತಿಯ ಆತಂಕ, ಭಯಕ್ಕೆ ಒಳಗಾಗದೆ ನಿರಾಳವಾಗಿ ಪರೀಕ್ಷೆ ಬರೆಯಬೇಕು ಎಂದು ಹೇಳುತ್ತಾ ಪರೀಕ್ಷೆ ಬರೆಯುತ್ತಿರುವ ಎಲ್ಲಾ ಮಕ್ಕಳಿಗೂ ಶುಭವಾಗಲಿ ಎಂದು ಹಾರೈಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿಗಳು, ವಿದ್ಯಾರ್ಥಿಗಳ ಪ್ರಮುಖ ಘಟ್ಟವೆಂದೇ ಹೇಳಲಾಗುವ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ಜಿಲ್ಲೆಯಲ್ಲಿ ಇಂದಿನಿಂದ ಆರಂಭವಾಗಿದ್ದು, ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಯಾವುದೇ ಲೋಪದೋಷವಿಲ್ಲದಂತೆ ಸುಸೂತ್ರವಾಗಿ ನಡೆಸಿದ್ದು, ಎಸ್.ಎಸ್.ಎಲ್.ಸಿ. ಪರೀಕ್ಷೆಯನ್ನೂ ಕೂಡ ಅದೇ ರೀತಿ ನಡೆಸಲು ಸಕಲ ಸಿದ್ಧತೆಯನ್ನು ಮಾಡಲಾಗಿದೆ ಎಂದರು.

ತುಮಕೂರು ಶೈಕ್ಷಣಿಕ ಹಾಗೂ ಮಧುಗಿರಿ ಶೈಕ್ಷಣಿಕ ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಯು ಇಂದಿನಿಂದ ಏಪ್ರಿಲ್ 2ರವರೆಗೆ ಒಟ್ಟು 131 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಒಟ್ಟು 37,130 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ತುಮಕೂರು(ದ) ಶೈಕ್ಷಣಿಕ ಜಿಲ್ಲೆಯ 82 ಪರೀಕ್ಷಾ ಕೇಂದ್ರಗಳಲ್ಲಿ 23,693 ವಿದ್ಯಾರ್ಥಿಗಳು, ಮಧುಗಿರಿ ಶೈಕ್ಷಣಿಕ ಜಿಲ್ಲೆಯ 49 ಪರೀಕ್ಷಾ ಕೇಂದ್ರಗಳಲ್ಲಿ 13,437 ವಿದ್ಯಾರ್ಥಿಗಳು ಪರೀಕ್ಷೆಗೆ ಬರೆಯಲಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗಿದೆ ಎಂದು ತಿಳಿಸಿದರು.

ಪರೀಕ್ಷಾ ಕೇಂದ್ರಗಳ ಎಲ್ಲಾ ಕೊಠಡಿಗಳಿಗೆ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ನಡೆಯುತ್ತಿರುವ ಪರೀಕ್ಷೆಯನ್ನು ವೀಕ್ಷಣೆ ಮಾಡಲು ವೆಬ್‍ಕಾಸ್ಟಿಂಗ್ ವ್ಯವಸ್ಥೆ ಸಹ ಮಾಡಲಾಗಿದೆ. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಡೆಸ್ಕ್, ಕುಡಿಯುವ ನೀರಿನ ಸೌಲಭ್ಯ, ಶೌಚಾಲಯ ವ್ಯವಸ್ಥೆ ಹಾಗೂ ವಿದ್ಯುತ್ ಸೌಲಭ್ಯ ಸೇರಿದಂತೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದರು.

ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿμÉೀಧಾಜ್ಞೆ ಜಾರಿಗೊಳಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸಮೀಪದಲ್ಲಿರುವ eóÉರಾಕ್ಸ್ ಸೆಂಟರ್, ಸೈಬರ್ ಸೆಂಟರ್‍ಗಳನ್ನು ಮುಚ್ಚಲು ಆದೇಶಿಸಲಾಗಿದೆ ಎಂದು ಅವರು ಹೇಳಿದರು.

Leave a Reply

Your email address will not be published. Required fields are marked *