ಡಿ.12 ರಂದು “ಗ್ರಾಮ ಸ್ವರಾಜ್ಯಕ್ಕಾಗಿ ಗ್ರಾಮ ಪಂಚಾಯತಿ ಸದಸ್ಯರ ಬೆಂಗಳೂರು ಚಲೋ”-ಕಾಡಶೆಟ್ಟಿಹಳ್ಳಿ ಸತೀಶ್

ತುಮಕೂರು : ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ “ಸ್ವರಾಜ್ಯದಿಂದ ಗ್ರಾಮ ಸ್ವರಾಜ್ಯದೆಡೆಗೆ ಹೆಜ್ಜೆಹಾಕುವ ಮೂಲಕ, ಗ್ರಾಮ ಪಂಚಾಯತಿಗಳ ಆಡಳಿತದಲ್ಲಿ ಹಸ್ತಕ್ಷೇಪ ಮಾಡುತ್ತಿರುವ ಮೇಲಧಿಕಾರಿಗಳು ಹಾಗೂ ಮೇಲಿನ ಹಂತದ ಜನಪ್ರತಿನಿಧಿಗಳ ವಿರುದ್ದ ಹೋರಾಡಿ ಸ್ವಾತಂತ್ರವನ್ನು ಗಳಿಸುವ ಮೂಲಕ ಗಾಂಧೀಜಿಯವರ ಗ್ರಾಮ ಸ್ವರಾಜ್ಯದ ಕನಸನ್ನು ಸಾಕಾರಗೊಳಿಸಬೇಕಾಗಿದೆ, ಗ್ರಾಮ ಪಂಚಾಯತಿ ಸದಸ್ಯರ ಅಧಿಕಾರ ಮೊಟಕುಗೊಳಿಸುತ್ತಿರುವುದರಿಂದ ಡಿಸೆಂಬರ್ 12ರಂದು “ಗ್ರಾಮ ಸ್ವರಾಜ್ಯಕ್ಕಾಗಿ ಗ್ರಾಮ ಪಂಚಾಯತಿ ಸದಸ್ಯರ ಬೆಂಗಳೂರು ಚಲೋ” ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ಸದಸ್ಯರ ಮಹಾ ಒಕ್ಕೂಟದ ರಾಜ್ಯಾಧ್ಯಕ್ಷರಾದ ಕಾಡಶೆಟ್ಟಿಹಳ್ಳಿ ಸತೀಶ್ ಹೇಳಿದರು.

ಅವರಿಂದು ನಗರದ ಕನ್ನಡಭವನದಲ್ಲಿ ಬೆಂಗಳೂರು ಚಲೋ.. ಕಾರ್ಯಕ್ರಮದ ಕುರಿತು ತುಮಕೂರು ಜಿಲ್ಲೆಯ ಗ್ರಾಮ ಪಂಚಾಯತಿ ಸದಸ್ಯರಿಗೆ ಅರಿವು ಮೂಡಿಸುವ ಹಾಗೂ ತುಮಕೂರು ಜಿಲ್ಲೆಯಲ್ಲಿ ಗ್ರಾಮ ಪಂಚಾಯತಿ ಸದಸ್ಯರ ಒಕ್ಕೂಟವನ್ನು ರಚಿಸಲು ಕರೆದಿದ್ದ ಗ್ರಾಮಪಂಚಾಯಿತಿ ಸದಸ್ಯರುಗಳ ಸಭೆಯನ್ನುದ್ದೇಶಿಸಿ ಮಾತನಾಡುತ್ತಿದ್ದರು.

ಭಾರತ ಸಂವಿಧಾನದ ರಾಜ್ಯ ನಿರ್ದೇಶಕ ತತ್ವಗಳ ಪ್ರಕರಣ 40 ರಲ್ಲಿ “ ರಾಜ್ಯವು ಗ್ರಾಮ ಪಂಚಾಯತಿಗಳನ್ನು ಸಂಘಟಿಸಲು ಕ್ರಮ ಕೈಗೊಳ್ಳತಕ್ಕದ್ದು ಮತ್ತು ಸ್ವಯಂ ಆಡಳಿತ ಘಟಕಗಳಾಗಿ ಅವು ಕೆಲಸ ಮಾಡುವುದಕ್ಕೆ ಅವಶ್ಯಕವಾಗಬಹುದಂತಹ ಅಧಿಕಾರಗಳನ್ನು ಮತ್ತು ಪ್ರಾಧಿಕಾರಗಳನ್ನು ಅವುಗಳಿಗೆ ಕೊಡತಕ್ಕದ್ದು.” ಎಂದು ಹೇಳಿದ್ದರೂ, 1992 ರಲ್ಲಿ ಸಂವಿಧಾನದ 73 ಮತ್ತು 74 ನೇ ತಿದ್ದುಪಡಿಗಳ ಮೂಲಕ ಪಂಚಾಯತ್ ರಾಜ್ ಸಂಸ್ಥೆಗಳನ್ನು ಸಂವಿಧಾನ ಬದ್ಧಗೊಳಿಸುವ ತನಕ ದೇಶದ ಬಹುತೇಕ ರಾಜ್ಯಗಳಲ್ಲಿ ಗ್ರಾಮ ಪಂಚಾಯತಿಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿರಲಿಲ್ಲ. 1992 ರಲ್ಲಿ ಸಂವಿಧಾನದ 73 ಮತ್ತು 74 ನೇ ತಿದ್ದುಪಡಿಗಳಾದ ಮೇಲೆ ದೇಶಾದ್ಯಂತ ಎಲ್ಲಾ ರಾಜ್ಯಗಳಲ್ಲಿ ಪಂಚಾಯತ್ ರಾಜ್ ವ್ಯವಸ್ಥೆ ಅಸ್ತಿತ್ವಕ್ಕೆ ಬಂದಿರುವುದನ್ನು ನೋಡಬಹುದು. ಆದರೆ ಸಂವಿಧಾನದ ಪ್ರಕರಣ 40 ಮತ್ತು 243 ಜಿ ರ ಅನ್ವಯ ಗ್ರಾಮ ಪಂಚಾಯತಿಗಳು ಸ್ವಯಂ ಸರ್ಕಾರಗಳಾಗಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದರೂ, ಸಂವಿಧಾನದ ಆಶಯ ಹಾಗೂ ಗಾಂಧೀಜಿಯವರ ಗ್ರಾಮ ಸ್ವರಾಜ್ಯದ ಕನಸು ಕೇವಲ ಕನಸಾಗಿಯೇ ಉಳಿದಿರುವುದು ಒಂದು ವಿಪರ್ಯಾಸ ಎಂದು ಹೇಳಿದರು

ಕರ್ನಾಟಕದ ಮಟ್ಟಿಗೆ ಹೇಳುವುದಾದರೆ ಪಂಚಾಯತ್ ರಾಜ್ ಸಂಸ್ಥೆಗಳ ಬೆಳವಣಿಗೆ ಆಶಾದಾಯಕವಾಗಿದ್ದರು, ದೇಶದಲ್ಲೇ ಕ್ರಾಂತಿಕಾರಕವಾದ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993 ರಚನೆಯಾಗಿದ್ದರೂ, ಅಧಿನಿಯಮದ ಅನುಷ್ಟಾನ ಅಗತ್ಯದ ಮಟ್ಟಿಗಿಲ್ಲ ಎಂಬುದು ಸತ್ಯ. ಇದಕ್ಕೆ ಕಾರಣಗಳನ್ನು ಅವಲೋಕಿಸಿದಾಗ ಮೇಲಿನ ಹಂತದ ಜನಪ್ರತಿನಿಧಿಗಳು ಹಾಗೂ ಆಧಿಕಾರಿ ವರ್ಗ ತಮ್ಮ ಅಧಿಕಾರವನ್ನು ಸಂವಿಧಾನದ ಆಶಯಗಳಿಗನುಗುಣವಾಗಿ ಪಂಚಾಯತ್ ರಾಜ್ ಸಂಸ್ಥೆಗಳೊಂದಿಗೆ ಹಂಚಿಕೊಳ್ಳಲು ಸಿದ್ದವಿಲ್ಲ ಎಂಬುದು ಎದು ್ದಕಾಣುತ್ತದೆ ಎಂದರು.

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ “ಸ್ವರಾಜ್ಯದಿಂದ ಗ್ರಾಮ ಸ್ವರಾಜ್ಯದೆಡೆಗೆ ಹೆಜ್ಜೆಹಾಕುವ ಮೂಲಕ, ಗ್ರಾಮ ಪಂಚಾಯತಿಗಳ ಆಡಳಿತದಲ್ಲಿ ಹಸ್ತಕ್ಷೇಪ ಮಾಡುತ್ತಿರುವ ಮೇಲಧಿಕಾರಿಗಳು ಹಾಗೂ ಮೇಲಿನ ಹಂತದ ಜನಪ್ರತಿನಿಧಿಗಳ ವಿರುದ್ದ ಹೋರಾಡಿ ಸ್ವಾತಂತ್ರವನ್ನು ಗಳಿಸುವ ಮೂಲಕ ಗಾಂಧೀಜಿಯವರ ಗ್ರಾಮ ಸ್ವರಾಜ್ಯದ ಕನಸನ್ನು ಸಾಕಾರಗೊಳಿಸಬೇಕಾಗಿದೆ ಎಂದರು.

ಹಾಗೂ ಕೋವಿಡ್ ಸಂದರ್ಭದಲ್ಲಿ ಗ್ರಾಮ ಪಂಚಾಯತಿಗಳು ನಿರ್ವಹಿಸಿದ ಮಹತ್ತರವಾದ ಪಾತ್ರ ಇದರ ಅನಿವಾರ್ಯತೆಯನ್ನು ಎಲ್ಲರಿಗೂ ಮನಗಾಣಿಸಿದೆ. ಅದ್ದರಿಂದ ಗ್ರಾಮ ಪಂಚಾಯತಿಗಳು ಸ್ಥಳೀಯ ಸ್ವಯಂ ಸರ್ಕಾರಗಳಾಗಿ ಕಾರ್ಯನಿರ್ವಹಿಸಲು ಅನೇಕ ಕಾಯ್ದೆ ವಿರೋಧಿ ನಿಯಮಗಳು, ಸುತ್ತೋಲೆಗಳು, ನಿರ್ಣಯಗಳು, ಮೇಲಧಿಕಾರಿಗಳ ನಡೆಗಳು, ಅನುಷ್ಟಾನಗೊಳ್ಳದ ಕಾಯ್ದೆಯ ಅನೇಕ ಅಂಶಗಳು ಕಾರಣವಾಗಿರುವುದನ್ನು ಮನಗೊಂಡು ಸರ್ಕಾರಕ್ಕೆ ಕಾಲಕಾಲಕ್ಕೆ ಅನೇಕ ಮನವಿಗಳನ್ನು ಮಹಾ ಒಕ್ಕೂಟವು ನೀಡಿರುತ್ತದೆ. ಆದರೆ ಇದುವರೆವಿಗೂ ಸರ್ಕಾರ ಯಾವುದೇ ಪ್ರತಿಕ್ರಿಯೆಯನ್ನು ನೀಡದೆ ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾಗಿರುವ ಸುಮಾರು ಒಂದು ಲಕ್ಷ ಜನಪ್ರತಿನಿಧಿಗಳಿಂದ ಕೂಡಿದ, ಆರು ಸಾವಿರದಷ್ಟು ಸ್ಥಳೀಯ ಸರ್ಕಾರಗಳ ಮನವಿಗೆ ಕಿವುಡಾಗಿ ವರ್ತಿಸಿರುವುದು ಸರ್ಕಾರದ ಪ್ರಜಾತಂತ್ರ ವಿರೋಧಿ ನಡೆಯಾಗಿರುತ್ತದೆ ಎಂದು ತಿಳಿಸಿದರು,

ಆದ್ದರಿಂದ ಬೆಂಗಳೂರಿನಲ್ಲಿ ಕೇಂದ್ರೀಕರಣಗೊಂಡಿರುವ ಅಡಳಿತವನ್ನು ಸಂವಿಧಾನ ಮತ್ತು ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಕಾಯ್ದೆ ಅನ್ವಯ ವಿಕೇಂದ್ರಿಕರಣ ಗೊಳಿಸುವ ನಿಟ್ಟಿನಲ್ಲಿ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದ್ದೇವೆ. ದಿನಾಂಕ 11-12-2022 ರೊಳಗಾಗಿ ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ದಿನಾಂಕ 12-12-2022 ರಿಂದ “ಗ್ರಾಮ ಸ್ವರಾಜ್ಯಕ್ಕಾಗಿ ಗ್ರಾಮ ಪಂಚಾಯತಿ ಸದಸ್ಯರ ಬೆಂಗಳೂರು ಚಲೋ” ಕಾಂiÀರ್iಕ್ರಮದ ಮೂಲಕ ಬೆಂಗಳೂರಿನ ಫ್ರೀಡಂ ಪಾರ್ಕ್‍ನಲ್ಲಿ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹವನ್ನು ಪ್ರಾರಂಭಿಸಲಾಗುವುದು. ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳಿಂದ ಸುಮಾರು 10 ಸಾವಿರಕ್ಕೂ ಹೆಚ್ಚು ಗ್ರಾಮ ಪಂಚಾಯತಿ ಸದಸ್ಯರು ಹೋರಾಟದಲ್ಲಿ ಭಾವಹಿಸಲಿದ್ದಾರೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *