ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಯನ್ನು ಸಮರ್ಪಕವಾಗಿ ಅನುಷ್ಟಾನಗೊಳಿಸಲು ಅಗತ್ಯ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ತುಮಕೂರು : ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ರೂ.2000ಗಳನ್ನು ನೀಡುವ “ಗೃಹಲಕ್ಷ್ಮಿ” ಯೋಜನೆಯಡಿ ಜುಲೈ 20, 2023 ರಿಂದ ಯೋಜನೆಯ ಸೌಲಭ್ಯಕ್ಕಾಗಿ ಸಾರ್ವಜನಿಕರು ಅರ್ಜಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ಅವರು ತಿಳಿಸಿದ್ದಾರೆ.

     ಸಾರ್ವಜನಿಕರು ಅರ್ಜಿ ಸಲ್ಲಿಸಲು ಗ್ರಾಮ ಒನ್ ಕೇಂದ್ರ, ಬಾಪೂಜಿ ಸೇವಾ ಕೇಂದ್ರ, ಕರ್ನಾಟಕ ಒನ್ ಕೇಂದ್ರಗಳಲ್ಲಿ ಸೇವಾಸಿಂಧು ಪೆÇೀರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.  ನಗರ ಪ್ರದೇಶಗಳಲ್ಲಿ ವಾರ್ಡ್ ಕಛೇರಿಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡುವ ಸಂಬಂಧ ಕ್ರಮವಹಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. 

    ಗುರುತಿಸಲಾದ ನೋಂದಣಿ ಕೇಂದ್ರಗಳಲ್ಲಿ ಪ್ರಜಾ ಪ್ರತಿನಿಧಿಗಳನ್ನು (Citizen volunteers)  ನೇಮಿಸಲಾಗುತ್ತಿದೆ. (ಒಬ್ಬ ಮಹಿಳೆ ಕಡ್ಡಾಯ) ಮತ್ತು ಸಾವಿರ ಜನಸಂಖ್ಯೆ ಮೀರಿದ ಗ್ರಾಮಗಳಲ್ಲಿ-ವಾರ್ಡ್‍ಗಳಲ್ಲಿ ಪ್ರತಿ 500 ಹೆಚ್ಚುವರಿ ಜನಸಂಖ್ಯೆಗೆ ಒಬ್ಬರಂತೆ ಹೆಚ್ಚುವರಿ ಪ್ರಜಾ ಪ್ರತಿನಿಧಿಗಳನ್ನು ನೇಮಕ ಮಾಡಲಾಗುತ್ತದೆ.  ಪ್ರಜಾ ಪ್ರತಿನಿಧಿಗಳ ನೇಮಕವನ್ನು ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರ ಅನುಮೋದನೆಯಂತೆ  ಮಾಡಲಾಗುತ್ತಿದೆ ಹಾಗೂ ನೇಮಕವಾದ ಪ್ರಜಾ ಪ್ರತಿನಿಧಿಗಳು ತಮ್ಮ ವ್ಯಾಪ್ತಿಯ ಗ್ರಾಮ-ವಾರ್ಡ್‍ಗಳಲ್ಲಿ ಮನೆ ಮನೆಗೆ ತೆರಳಿ ಫಲಾನುಭವಿಗಳ ಅರ್ಜಿಯನ್ನು ನೋಂದಾಯಿಸುವ ಕೆಲಸ ಮಾಡುತ್ತಾರೆ. ಪ್ರಜಾಪ್ರತಿನಿಧಿಗಳು ಈ ಸೇವೆಯನ್ನು ಸ್ವಯಂಪ್ರೇರಣೆಯಿಂದ ಮಾಡಬೇಕಿದ್ದು, ಅವರಿಗೆ ಯಾವುದೇ ಶುಲ್ಕ ಪಾವತಿ ಮಾಡಲಾಗುವುದಿಲ್ಲ ಎಂದು ತಿಳಿಸಿದ್ದಾರೆ.

  ಪ್ರಜಾ ಪ್ರತಿನಿಧಿಗಳನ್ನು ನೇಮಕ ಸಂಬಂಧ ಪಟ್ಟಿಯನ್ನು ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರಿಂದ ಅನುಮೋದನೆ ಪಡೆದು ಅವರ ಮಾಹಿತಿಯನ್ನು ಜಿಲ್ಲಾಧಿಕಾರಿಗಳ ಕಛೇರಿಯಿಂದ ನೊಂದಣಿ ಮಾಡಿ ಲಾಗಿನ್ ಐಡಿ ಪಡೆಯಲು ತಿಳಿಸಿರುತ್ತಾರೆ. ಹಾಗೇ ನೇಮಕಗೊಂಡ ಪ್ರಜಾ ಪ್ರತಿನಿಧಿಗಳಿಗೆ ಗುರುತಿನ ಚೀಟಿ ಮತ್ತು ಅವರಿಗೆ ತರಬೇತಿಯನ್ನು ನೀಡುವ ಸಂಬಂಧ ಅಗತ್ಯ ಕ್ರಮವನ್ನು ತಹಶೀಲ್ದಾರು, ಕಾರ್ಯನಿರ್ವಾಹಕ ಅಧಿಕಾರಿಗಳು ತಾ.ಪಂ, ಯೋಜನಾ ನಿರ್ದೇಶಕರು ಜಿಲ್ಲಾ ನಗರಾಭಿವೃದ್ಧಿ ಕೋಶ ಮತ್ತು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ವಹಿಸುವರು. 

ಗುರುತಿಸಲಾದ ನೋಂದಣಿ ಕೇಂದ್ರಗಳಲ್ಲಿ ಪ್ರತಿ ದಿನ 60 ಅರ್ಜಿಗಳನ್ನು ಸಲ್ಲಿಸಲು ಅವಕಾಶವಿರುತ್ತದೆ. (ಬೆಳಗಿನ ಅವಧಿಗೆ 30 ಅರ್ಜಿ ಮತ್ತು ಮಧ್ಯಾಹ್ನ ಅವಧಿಗೆ 30 ಅರ್ಜಿ) ಹಾಗೂ  ಸಾರ್ವಜನಿಕರು ತಾವು ಯಾವ ನೋಂದಣಿ ಕೇಂದ್ರದಲ್ಲಿ ಮತ್ತು ಯಾವ ದಿನಾಂಕದಂದು ಅರ್ಜಿ ಸಲ್ಲಿಸಬೇಕು ಎಂಬುದರ ಬಗ್ಗೆ ಆಧಾರ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆಗೆ ಮುಂಚಿತವಾಗಿ ಎಸ್.ಎಂ.ಎಸ್ ಸಂದೇಶದ ಮೂಲಕ ಮಾಹಿತಿ ನೀಡಲಾಗುವುದು, ಉಚಿತ ಸಹಾಯವಾಣಿ ಸಂಖ್ಯೆ 1902 ಮೂಲಕವು ತಮ್ಮ ಸಮಸ್ಯೆಯನ್ನು ಪರಿಹಾರ ಮಾಡಿಕೊಳ್ಳಬಹುದಾಗಿದೆ. 8147500500ಗೆ ಎಸ್.ಎಂ.ಎಸ್ ಮಾಡುವ ಮೂಲಕ ಪಡಿತರ ಚೀಟಿ ಸಂಖ್ಯೆಯನ್ನು ನಮೂದಿಸಿ ನೋಂದಣಿ ದಿನಾಂಕವನ್ನು ಹಾಗೂ ನೋಂದಣಿ ಕೇಂದ್ರದ ಮಾಹಿತಿಯನ್ನು ಪಡೆಯಬಹುದು ಹಾಗೂ ಎಲ್ಲಾ ತಾಲ್ಲೂಕುಗಳಲ್ಲಿ ಶಿಶು ಅಭಿವೃದ್ಧಿ ಯೋಜನಾ ಕಛೇರಿಗಳಲ್ಲಿ ಮತ್ತು ಉಪನಿರ್ದೇಶಕರ ಕಛೇರಿಯಲ್ಲಿ ಸಹಾಯವಾಣಿ ಕೇಂದ್ರಗಳನ್ನು ತೆರೆಯಲಾಗಿದೆ.

 ಅರ್ಜಿ ಸಲ್ಲಿಕೆ ಪ್ರಾರಂಭದ ದಿನಗಳು ನೋಂದಣಿ ಕೇಂದ್ರಗಳಲ್ಲಿ ಹೆಚ್ಚು ಜನಸಂದಣಿ ಉಂಟಾಗುವ ಸಾಧ್ಯತೆ ಇರುವ ಪ್ರಯುಕ್ತ ಸದರಿ ಕೇಂದ್ರಗಳಲ್ಲಿ ಪೆÇಲೀಸ್ ಇಲಾಖೆಯಿಂದ ಅಗತ್ಯ ಪೆÇಲೀಸ್ ಸಿಬ್ಬಂದಿಯನ್ನು ಕಡ್ಡಾಯವಾಗಿ ನಿಯೋಜಿಸಲಾಗುವುದು. ನೋಂದಣಿ ಕೇಂದ್ರಗಳಲ್ಲಿ ನೋಂದಣಿ ಪ್ರಕ್ರಿಯೆಯು ಭಾನುವಾರದ ರಜೆಯನ್ನು ಹೊರತುಪಡಿಸಿ ಉಳಿದ ಎಲ್ಲಾ ದಿನಗಳಲ್ಲಿಯೂ ನಡೆಯುವುದರಿಂದ ನೋಂದಣಿ ಕೇಂದ್ರಗಳಲ್ಲಿ ಸಾಕಷ್ಟು ಪ್ರಮಾಣದಲ್ಲಿ ಪವರ್ ಬ್ಯಾಕ್ ಅಪ್-ಇಂಟರನೆಟ್ ವ್ಯವಸ್ಥೆ ಕಂಪ್ಯೂಟರ್ & ಪ್ರಿಂಟರ್‍ಗಳ ವ್ಯವಸ್ಥೆಯನ್ನು ಮಾಡಿಕೊಳ್ಳುವುದು ಹಾಗೂ ವಿದ್ಯುತ್ ಶಕ್ತಿ ವಿತರಣೆಯಲ್ಲಿ ಯಾವುದೇ ರೀತಿಯ ವ್ಯತ್ಯಯ ಉಂಟಾಗದಂತೆ ಕ್ರಮವಹಿಸಲಾಗುವುದು.

 ನೋಂದಣಿ ಪ್ರಕ್ರಿಯೆಯ ಮೇಲು ಉಸ್ತುವಾರಿಯನ್ನು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ತಾಲ್ಲೂಕು ಮೇಲು ಉಸ್ತುವಾರಿಯನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿ, ಕರ್ನಾಟಕ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಒನ್ ಕೇಂದ್ರಗಳ ಮೇಲು ಉಸ್ತುವಾರಿಯನ್ನು ಆಯುಕ್ತರು, ನಗರಸಭೆ - ಪುರಸಭೆ ಹಾಗೂ ಬಾಪೂಜಿ ಸೇವಾ ಕೇಂದ್ರಗಳಿಗೆ ಸಂಬಂಧಪಟ್ಟ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಗ್ರಾಮ ಒನ್ ಕೇಂದ್ರಗಳಿಗೆ ಗ್ರಾಮ ಆಡಳಿತಾಧಿಕಾರಿಗಳು ಹಾಗೂ ಸಂಬಂಧಪಟ್ಟ ಕಂದಾಯ ನಿರೀಕ್ಷಕರುಗಳು ಉಸ್ತುವಾರಿ ವಹಿಸಿ ಗೃಹಲಕ್ಷ್ಮಿ ಯೋಜನೆಯನ್ನು ಯಶಸ್ವಿಗೊಳಿಸುವುದು, ಸದರಿ ಗೃಹಲಕ್ಷ್ಮಿ ಯೋಜನೆಯ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ಸಲುವಾಗಿ ಹಾಗೂ ಅವರಲ್ಲಿ ಉಂಟಾಗುವ ಗೊಂದಲಗಳನ್ನು ನಿವಾರಿಸುವ ಸಂಬಂಧ ತಹಶೀಲ್ದಾರ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಲು ಹಾಗೂ ಸದರಿ ಕಾರ್ಯದಲ್ಲಿ ಕಂದಾಯ ನಿರೀಕ್ಷಕರು, ಗ್ರಾಮ ಲೆಕ್ಕಾಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಮಹಿಳಾ ಮೇಲ್ವಿಚಾರಕಿಯರು ಭಾಗವಹಿಸುವಂತೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *