ಕರುವಿನ ಹೃದಯಕ್ಕೆ ಹೊಟ್ಟೆಯೊಳಗಿನಿಂದ ಚುಚ್ಚಿದ್ದ ಸೂಜಿಯನ್ನು ಶಸ್ತ್ರಚಿಕಿತ್ಸೆಯಿಂದ ಹೊರತೆಗೆದ ವೈದ್ಯರು

ನೊಣವಿನಕೆರೆ ಹೋಬಳಿಯ ಕೋಡಿಹಳ್ಳಿ ಗ್ರಾಮದ ಕಿಟ್ಟಪ್ಪನವರ ಕರುವು ಒಂದು ವಾರದಿಂದ ಮೇವನ್ನು ತಿನ್ನದೇ ಗದ್ದದ ಕೆಳಗೆ ಊತ ಬಂದು ಸಾವು ಬದುಕಿನ ನಡುವೆ ಹೋರಾಡುತ್ತಿತ್ತು. ಸ್ಥಳಕ್ಕೆ ಧಾವಿಸಿದ ಪಶುವೈದ್ಯ ಡಾ. ಮಂಜುನಾಥ್ ಎಸ್.ಪಿ, ಈ ಸ್ಥಿತಿಯನ್ನು ಹೃದಯದ ಸುತ್ತ ಕೀವು ತುಂಬಿರುವ ಸ್ಥಿತಿಯಾದ ಪೆರಿಕಾರ್ಡೈಟಿಸ್ ಎಂದು ಪತ್ತೆಹಚ್ಚಿ ಮೊದಲು ಹೃದಯದ ಸುತ್ತ ತುಂಬಿದ್ದ ಸುಮಾರು ಮುನ್ನೂರು ಮಿ.ಲಿ. ಕೀವನ್ನು ಶಸ್ತ್ರಚಿಕಿತ್ಸೆಯಿಂದ ತೆಗೆದರು. ನಂತರ ಕರುವು ನಿಂತಿರುವ ಸ್ಥಿತಿಯಲ್ಲೇ ಕರುವಿನ ಎಡಭಾಗದ ಉದರ ತೆರೆಯುವ ಶಸ್ತ್ರಚಿಕಿತ್ಸೆಯನ್ನು ನಡೆಸಿ ಹಸುವಿನ ಎರಡನೇ ಹೊಟ್ಟೆಯಾದ ರೆಟಿಕ್ಯುಲಮ್ ನಿಂದ ಹೃದಯಕ್ಕೆ ಚುಚ್ಚುತ್ತಿದ್ದ ಸೂಜಿಯನ್ನು ಹೊರತೆಗೆದರು. ಈಗ ಕರುವು ಗಣನೀಯವಾಗಿ  ಚೀತರಿಸಿಕೊಂಡಿದೆ.

Oplus_0

ಈ ಸಂದರ್ಭದಲ್ಲಿ ಮಾತನಾಡಿದ ವೈದ್ಯರು, ಹಸುವಿನ ಹೊಟ್ಟೆಯಲ್ಲಿ ನಾಲ್ಕು ಭಾಗಗಳಿದ್ದು ಚೂಪಾದ ಪರಿಕರಗಳನ್ನು ಸೇವಿಸಿದರೆ ಅವು ಎರಡನೇ ಹೊಟ್ಟೆಯಾದ ರೆಟಿಕ್ಯುಲಮ್ ನಲ್ಲಿ ಸಿಕ್ಕಿಕೊಳ್ಳುತ್ತವೆ. ರೆಟಿಕ್ಯುಲಮ್ ಹೃದಯದ ಪಕ್ಕವೇ ಇರುವುದರಿಂದ ಹೊಟ್ಟೆಯಿಂದ ಚುಚ್ಚಿಕೊಂಡು ಹೊರಬರುವ ಚೂಪಾದ ಪರಿಕರವು ಹೃದಯಕ್ಕೆ ಚುಚ್ಚಲಾರಂಬಿಸುತ್ತದೆ. ಇದರಿಂದ ಹೃದಯ‌ ಮತ್ತು ಅದರ  ಹೊರಪದರದ ನಡುವೆ ಕೀವು ತುಂಬಲಾರಂಬಿಸುತ್ತದೆ. ಆಗ ಹೃದಯಕ್ಕೆ ಕೆಲಸ ನಿರ್ವಹಿಸಲು ಸಾದ್ಯವಾಗದೇ ಜಾನುವಾರು ಅಸುನೀಗುತ್ತದೆ. ಆದ್ದರಿಂದ ರೈತರು ತಾವು ಕೊಡುವ ಮೇವಿನ ಮೇಲೆ ನಿಗಾ ಇಡಬೇಕು. ಈ ಕರುವಿನ ಚಿಕಿತ್ಸೆಯು ಅತ್ಯಂತ ಸವಾಲಿನದ್ದಾಗಿತ್ತು. ಸರಿಯಾದ ಸಮಯಕ್ಕೆ ಪ್ರಸ್ತುತ‌ಪಡಿಸಿದ್ದರಿಂದ ಜೀವ ಉಳಿಸಲು ಸಾಧ್ಯವಾಯಿತು ಎಂದರು.

Leave a Reply

Your email address will not be published. Required fields are marked *