
ತುಮಕೂರು : ಕರ್ನಾಟಕ ರಾಜ್ಯದ ಸಂಪುಟದರ್ಜೆ ಸಚಿವರಾಗಿ ಸರಳ ಸಜ್ಜನ ಎಂದೇ ಗುರುತಿಸಿಕೊಂಡಿರುವ ಡಾ.ಜಿ.ಪರಮೇಶ್ವರ್ ಅವರು ಸಂವಿಧಾನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಮಂತ್ರಿಯಾಗಿ ಪ್ರಮಾಣ ಸ್ವೀಕರಿಸಿದ ಕೊರಟಗೆರೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಜಿ.ಪರಮೇಶ್ವರ್ ಇಂದು ಬೆಂಗಳೂರಿನ ಕಂಠಿರವ ಸ್ಟೇಡಿಯಂನಲ್ಲಿ ಮಂತ್ರಿಯಾಗಿ ಇಂದು ರಾಜ್ಯಪಾಲರಾದ ಥಾವರ್ಚಂದ್ ಗ್ಲುಹೋಟ್ ಅವರಿಂದ ಪ್ರತಿಜ್ಞಾವಿಧಿ ಸ್ವೀಕರಿಸುವ ಮೂಲಕ ಪ್ರಮಾಣವಚನವನ್ನು ಸಂವಿಧಾನ ಹೆಸರಿನಲ್ಲಿ ಹೆಸರಿನಲ್ಲಿ ಸ್ವೀಕರಿಸಿದರು.
ಸಂಪುಟದರ್ಜೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಡಾ.ಜಿ.ಪರಮೇಶ್ವರ್ ರಾಜ್ಯಪಾಲರಾದ ಥಾವರ್ಚಂದ್ ಗ್ಲುಹೋಟ್ ಅವರು ಪುಷ್ಪಗುಚ್ಚ ನೀಡುವುದರ ಮೂಲಕ ಶುಭ ಹಾರೈಸಿದರು.