ಆರ್ಥಿಕ ಅಸಮತೋಲನವೂ ಜೀತಪದ್ಧತಿಗೆ ಕಾರಣ : ಎಸ್‍ಪಿ ಕೆ.ವಿ. ಅಶೋಕ್

ತುಮಕೂರು : ಸಾಲದ ಹೊರೆ ಹಾಗೂ ಉದ್ಯೋಗದ ಅಭಾವದಿಂದ ಅನೇಕರು ಸಾಲ ಪಡೆದು ಮನೆಗೆಲಸ, ತೋಟ ಮತ್ತು ಕಾರ್ಖಾನೆಗಳಲ್ಲಿ ಬಲವಂತದ ಜೀತದಾರರಾಗಿ ಕೆಲಸ ಮಾಡುವ ಪರಿಸ್ಥಿತಿ ಉಂಟಾಗುತ್ತಿದೆ ಎಂದು ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಕೆ.ವಿ. ಅಶೋಕ್ ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗುರುವಾರ ಜೀತಪದ್ಧತಿಯ ನಿರ್ಮೂಲನ ದಿನಾಚರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜೀತಪದ್ಧತಿ ಎಂಬುದು ಕೇವಲ ಸಾಮಾಜಿಕ ಸಮಸ್ಯೆಯಲ್ಲ, ಅದು ಆರ್ಥಿಕ ಅಸಮತೋಲನದಿಂದ ಉಂಟಾಗುವ ಗಂಭೀರ ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದರು.

ಇತ್ತೀಚಿನ ದಿನಗಳಲ್ಲಿ ವಿದೇಶಗಳಲ್ಲಿ ಹೆಚ್ಚಿನ ಸಂಬಳ ಸಿಗುತ್ತದೆ, ಉತ್ತಮ ಜೀವನ ಸಾಗಿಸಬುದು ಎಂಬ ಸುಳ್ಳು ಭರವಸೆ ನೀಡಿ ಜನರನ್ನು ಮೋಸಗೊಳಿಸಿ ಮಾನವ ಕಳ್ಳಸಾಗಾಣಿಕೆ ನಡೆಸುವ ಘಟನೆಗಳು ಹೆಚ್ಚುತ್ತಿವೆ. ವಿದೇಶದಲ್ಲಿ ಕೆಲಸ ಕೊಡಿಸುತ್ತೇವೆ ಎಂದು ಕರೆದುಕೊಂಡು ಹೋಗಿ, ಪಾಸ್‍ಪೆÇೀರ್ಟ್‍ಗಳನ್ನು ಕಸಿದುಕೊಂಡು, ಅಲ್ಲಿ ದುಡಿಮೆ ಮಾಡಿಸಿ ಸರಿಯಾದ ವೇತನ ನೀಡದೆ ಬಲವಂತವಾಗಿ ಜೀತದಾಳರಾಗಿ ಕೆಲಸ ಮಾಡಿಸುತ್ತಿರುವ ಪ್ರಕರಣಗಳು ಹಲವಾರು ದೇಶಗಳಲ್ಲಿ ಕಂಡು ಬರುತ್ತಿವೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.

ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಶಿಕ್ಷಣದ ಕೊರತೆ, ಉದ್ಯೋಗದ ಅಭಾವ ಹಾಗೂ ಮಾಹಿತಿಯ ಕೊರತೆಯಿಂದ ಜನರು ಸುಲಭವಾಗಿ ಮೋಸಕ್ಕೆ ಒಳಗಾಗುತ್ತಿದ್ದಾರೆ. ಆದ್ದರಿಂದ ಯಾವುದೇ ಕೆಲಸಕ್ಕಾಗಿ ವಿದೇಶಕ್ಕೆ ಹೋಗುವ ಮೊದಲು ಸರ್ಕಾರದಿಂದ ಮಾನ್ಯತೆ ಪಡೆದ ಏಜೆನ್ಸಿಗಳ ಮೂಲಕವೇ ಹೋಗಬೇಕು, ಅನುಮಾನಾಸ್ಪದ ವ್ಯಕ್ತಿಗಳು ಅಥವಾ ಸಂಸ್ಥೆಗಳ ಮಾತುಗಳನ್ನು ನಂಬಬಾರದು ಎಂದು ಅವರು ಸಲಹೆ ನೀಡಿದರು.

ಜೀತಪದ್ಧತಿ ನಿರ್ಮೂಲನೆಗೆ ಸರ್ಕಾರ ಮಾತ್ರವಲ್ಲ, ಸಮಾಜದ ಪ್ರತಿಯೊಬ್ಬರೂ ಕೈಜೋಡಿಸಬೇಕು. ಸಂಶಯಾಸ್ಪದ ಚಟುವಟಿಕೆಗಳು ಕಂಡುಬಂದರೆ ತಕ್ಷಣ ಪೆÇಲೀಸ್ ಇಲಾಖೆ ಅಥವಾ ಸಂಬಂಧಿತ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ಮಾನವ ಕಳ್ಳಸಾಗಾಣಿಕೆ ಹಾಗೂ ಜೀತಪದ್ಧತಿಗೆ ಸಂಬಂಧಿಸಿದಂತೆ ಕಟ್ಟುನಿಟ್ಟಿನ ಕಾನೂನುಗಳಿವೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅವರು ಎಚ್ಚರಿಸಿದರು.

ಜನರಲ್ಲಿ ಜಾಗೃತಿ ಮೂಡಿಸುವುದು, ಶಿಕ್ಷಣ ಹಾಗೂ ಉದ್ಯೋಗಾವಕಾಶಗಳನ್ನು ಹೆಚ್ಚಿಸುವುದು ಮತ್ತು ಸಾಮಾಜಿಕ ಸಹಕಾರದ ಮೂಲಕವೇ ಜೀತಪದ್ಧತಿಯನ್ನು ಸಂಪೂರ್ಣ ನಿರ್ಮೂಲನೆ ಮಾಡಬಹುದು ಎಂದು ಅವರು ಹೇಳಿದರು.

ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ ಮಾತನಾಡಿ, ವಸತಿ ನಿಲಯವಿಲ್ಲದೆ ಒಂದು ಹೊತ್ತು ಊಟಕ್ಕೂ ಪರದಾಡುವಂತಹ ದುರ್ಬಲ ವರ್ಗದ ಜನರು ಹಾಗೂ ಸಾಲ ಪಡೆದು ಅದನ್ನು ತೀರಿಸಲು ಸಾಧ್ಯವಾಗದೆ ಮನೆಗಳು, ತೋಟಗಳು ಮತ್ತು ಕಾರ್ಖಾನೆಗಳಲ್ಲಿ ಜೀತಪದ್ಧತಿಗೆ ಒಳಗಾಗುವ ಪರಿಸ್ಥಿತಿ ಉಂಟಾಗುತ್ತಿದೆ ಎಂದು ಹೇಳಿದರು.

ಇಂತಹ ಶೋಷಣೆಯಿಂದ ಜನರನ್ನು ರಕ್ಷಿಸಿ ಜೀತಪದ್ಧತಿಯನ್ನು ನಿರ್ಮೂಲನೆ ಮಾಡಲು ಸರ್ಕಾರವು ವಿವಿಧ ಕಲ್ಯಾಣ ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳ ಬಗ್ಗೆ ಜನರಿಗೆ ಸಮರ್ಪಕ ಮಾಹಿತಿ ನೀಡಿ ಸದುಪಯೋಗಪಡಿಸಿಕೊಳ್ಳುವಂತೆ ಮಾಡುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದರು.

ಜೀತಪದ್ಧತಿ ನಿರ್ಮೂಲನೆಗೆ ಕೇವಲ ಕಾನೂನು ಜಾರಿ ಸಾಕಾಗುವುದಿಲ್ಲ ಜನರಲ್ಲಿ ಜಾಗೃತಿ ಮೂಡಿಸುವುದು, ಶಿಕ್ಷಣ ಹಾಗೂ ಉದ್ಯೋಗಾವಕಾಶಗಳನ್ನು ವೃದ್ಧಿಸುವುದು ಮತ್ತು ಸಮಾಜದ ಸಹಭಾಗಿತ್ವ ಅತ್ಯಂತ ಅಗತ್ಯ ಎಂದು ಅವರು ಹೇಳಿದರು. ಸಂಬಂಧಿತ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ, ಪೀಡಿತರನ್ನು ಗುರುತಿಸಿ ಪುನರ್ವಸತಿ ಕಲ್ಪಿಸುವ ಮೂಲಕ ಜೀತಪದ್ಧತಿಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ದಿಸೆಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಅವರು ಸೂಚಿಸಿದರು.

ಕಾರ್ಯಕ್ರಮದಲ್ಲಿ ಉಪವಿಭಾಗಾಧಿಕಾರಿಗಳಾದ ನಾಹಿದಾ ಜಮ್ ಜಮ್ ಹಾಗೂ ಗೋಟೂರು ಶಿವಪ್ಪ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಗಳಾದ ಸಂಜೀವಪ್ಪ ಹಾಗೂ ಈಶ್ವರಪ್ಪ, ತಹಸೀಲ್ದಾರ್ ರಾಜೇಶ್ವರಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *