ತುಮಕೂರು : ಶೈನಾ ಅಧ್ಯಯನ ಸಂಸ್ಥೆಯ ಡಾ. ಬಿ.ಸಿ. ಶೈಲಾನಾಗರಾಜ್ರವರ ``ಕವಿಸಮಯ’’ ಪುಸ್ತಕ ಬಿಡುಗಡೆ ಸಮಾರಂಭವನ್ನು ಫೆಬ್ರವರಿ 28ರ ಶನಿವಾರ ಬೆಳಿಗ್ಗೆ 10-30 ಗಂಟೆಗೆ ಕನ್ನಡ ಭವನದಲ್ಲಿ ಏರ್ಪಡಿಸಲಾಗಿದೆ.
ಕರ್ನಾಟಕ ಸಾಹಿತ್ಯ ಅಕಾಡಮಿ ಅಧ್ಯಕ್ಷರಾದ ಎಲ್.ಎನ್. ಮುಕುಂದರಾಜ್ ಪುಸ್ತಕ ಬಿಡುಗಡೆ ಮಾಡಲಿದ್ದು, ಜಿಲ್ಲಾ ಕಸಾಪ ಅಧ್ಯಕ್ಷರಾದ ಕೆ.ಎಸ್. ಸಿದ್ಧಲಿಂಗಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ಕಲೇಸಂ ಜಿಲ್ಲಾ ಅಧ್ಯಕ್ಷರಾದ ಡಾ. ಆಶಾ ಬಗ್ಗನಡು ಕೃತಿಯನ್ನು ಕುರಿತು ಮಾತನಾಡಲಿದ್ದಾರೆ. ಲೇಖಕಿ ಡಾ. ಬಿ.ಸಿ. ಶೈಲಾನಾಗರಾಜ್ ಕೃತಿಯ ಬಗ್ಗೆ ತಮ್ಮ ಅನಿಸಿಕೆಗಳನ್ನು ಹಂಚಿಕೊಳ್ಳಲಿದ್ದಾರೆ. ಡಾ. ಗೀತಾವಸಂತ, ಬಾ.ಹ. ರಮಾಕುಮಾರಿ ಇವರುಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ದೊಂಬರನಹಳ್ಳಿ ನಾಗರಾಜ್ ಆಶಯ ನುಡಿಗಳನ್ನಾಡಲಿದ್ದಾರೆ.