ಜಿಲ್ಲಾಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆಗೆ ಸಹಾಯವಾಣಿ ಕೇಂದ್ರ-ಆರೋಗ್ಯ ಸಚಿವರು

ತುಮಕೂರು- ಜಿಲ್ಲಾ ಆಸ್ಪತ್ರೆಯಲ್ಲಿ ಸಹಾಯವಾಣಿ ಕೇಂದ್ರವನ್ನು ಸ್ಥಾಪಿಸಲಾಗುವುದು. ಈ ಸಹಾಯವಾಣಿ ಕೇಂದ್ರದ ಮೂಲಕ ಆಸ್ಪತ್ರೆಗೆ ಆಗಮಿಸುವ ರೋಗಿಗಳಿಗೆ ತುರ್ತು ಚಿಕಿತ್ಸೆಗೆ ಅನುವು ಮಾಡಿಕೊಡಲಾಗುವುದು ಎಂದು ಅವರು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದರು.

ಅವರಿಂದು ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ನಂತರ ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾಯಿಯನ್ನು ಕಳೆದುಕೊಂಡ 6 ವರ್ಷದ ಬಾಲಕಿಯನ್ನು ಸರ್ಕಾರದಿಂದ ನೋಡಿಕೊಳ್ಳಲಾಗುವುದು. ಬಾಲಕಿ ಹೆಸರಿಗೆ ಆರೋಗ್ಯ ಇಲಾಖೆಯಿಂದ 10 ಲಕ್ಷ ರೂ. ಎಫ್.ಡಿ. ಇಟ್ಟು ಆರೋಗ್ಯ ಮತ್ತು ಶಿಕ್ಷಣ ಜಿಲ್ಲಾಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆಗೆ ಸಹಾಯವಾಣಿ ಕೇಂದ್ರ-ಆರೋಗ್ಯ ಸಚಿವರು

ತುಮಕೂರು- ಜಿಲ್ಲಾ ಆಸ್ಪತ್ರೆಯಲ್ಲಿ ಸಹಾಯವಾಣಿ ಕೇಂದ್ರವನ್ನು ಸ್ಥಾಪಿಸಲಾಗುವುದು. ಈ ಸಹಾಯವಾಣಿ ಕೇಂದ್ರದ ಮೂಲಕ ಆಸ್ಪತ್ರೆಗೆ ಆಗಮಿಸುವ ರೋಗಿಗಳಿಗೆ ತುರ್ತು ಚಿಕಿತ್ಸೆಗೆ ಅನುವು ಮಾಡಿಕೊಡಲಾಗುವುದು ಎಂದು ಅವರು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದರು.

ಅವರಿಂದು ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ನಂತರ ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾಯಿಯನ್ನು ಕಳೆದುಕೊಂಡ 6 ವರ್ಷದ ಬಾಲಕಿಯನ್ನು ಸರ್ಕಾರದಿಂದ ನೋಡಿಕೊಳ್ಳಲಾಗುವುದು. ಬಾಲಕಿ ಹೆಸರಿಗೆ ಆರೋಗ್ಯ ಇಲಾಖೆಯಿಂದ 10 ಲಕ್ಷ ರೂ. ಎಫ್.ಡಿ. ಇಟ್ಟು ಆರೋಗ್ಯ ಮತ್ತು ಶಿಕ್ಷಣ ವೆಚ್ಚ ಭರಿಸಲಾಗುವುದು ಎಂದರು.

ಕಳೆದ ಹತ್ತು ದಿನಗಳ ಹಿಂದೆ ನಡೆದ ತುಮಕೂರಿನ ಭಾರತಿ ನಗರದ ಬಾಣಂತಿ ಹಾಗೂ ಅವಳಿ ಮಕ್ಕಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆಯ ಆಯುಕ್ತರ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ತನಿಖೆ ಪೂರ್ಣಗೊಂಡು ವರದಿ ಬಂದ ನಂತರ ಆ ವರದಿ ಆಧರಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದರು.

ವೈದ್ಯಕೀಯ ಸಂಘಕ್ಕೆ ವೈದ್ಯೆ ಡಾ. ಉಷಾ ರವರು ಪತ್ರ ಬರೆದಿರುವ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ನಾವು ಯಾವುದೇ ರೀತಿಯ ಏಕಪಕ್ಷೀಯ ನಿರ್ಧಾರ ತೆಗೆದುಕೊಂಡಿಲ್ಲ. ಸಿಸಿಟಿವಿ ದೃಶ್ಯವನ್ನು ಆಧರಿಸಿ ಹಾಗೂ ಮಾಹಿತಿಯನ್ನು ಪಡೆದು ಕ್ರಮ ಕೈಗೊಳ್ಳಲಾಗಿದೆ. ತನಿಖಾ ವರದಿ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.

Leave a Reply

Your email address will not be published. Required fields are marked *