ತುಮಕೂರು : ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರಿಗೆ ಮುಖ್ಯಮಂತ್ರಿಯಾಗುವ ಅವಕಾಶ ಸಿಕ್ಕಲ್ಲಿ ಬೆಂಬಲ ನೀಡುವುದಾಗಿ ಮಾಜಿ ಶಾಸಕ ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಕೆ.ಎನ್.ರಾಜಣ್ಣ ಹೇಳಿದರು
.
ಅವರಿಂದು ನಗರದ ಡಿಸಿಸಿ ಬ್ಯಾಂಕ್ನಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದರು.
ಡಾ.ಜಿ.ಪರಮೇಶ್ವರ್ ಅವರು ನಮ್ಮ ಜಿಲ್ಲೆಯವರೇ ಆಗಿರುವುದರಿಂದ ಅವರಿಗೆ ಆ ಅದೃಷ್ಟ ಬಂದರೆ ಖಂಡಿತವಾಗಿ ಬೆಂಬಲ ಇದ್ದೇ ಇರುತ್ತದೆ ಎಂದರು.
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ರಾಜ್ಯದ 224 ಕ್ಷೇತ್ರಗಳಲ್ಲಿ ಯಾವ ಕ್ಷೇತ್ರದಲ್ಲಾದರೂ ಸ್ಪರ್ಧಿಸಬಹುದು. ನಾವು ಈ ಹಿಂದೆ ಚಿಕ್ಕನಾಯಕನಹಳ್ಳಿ ಕ್ಷೇತ್ರದಿಂದ ಸ್ಪರ್ಧಿಸಲು ಮನವಿ ಮಾಡಿದ್ದೆವು, ಮಧುಗಿರಿಯಲ್ಲಿ ನಿಲ್ಲುವುದಾದರೆ ಕ್ಷೇತ್ರವನ್ನು ಬಿಟ್ಟು ಕೊಡುವುದಾಗಿ ತಿಳಿಸಿದರು. ತುಮಕೂರು ಜಿಲ್ಲೆಗೆ ಬಂದರೆ ಸಂತೋಷ ಎಂದ ಅವರು ಮಾಜಿ ಶಾಸಕ ಎಚ್ ನಿಂಗಪ್ಪ ರವರು ಕಾಂಗ್ರೆಸ್ ಸೇರುವುದು ಬಹುತೇಕ ಖಚಿತ, ಟಿಕೆಟ್ ನೀಡುವುದು ಬಿಡುವುದು ಹೈಕಮಾಂಡ್ಗೆ ಬಿಟ್ಟದ್ದು, ಆ ಬಗ್ಗೆ ನಾನೇನು ಹೇಳುವುದಿಲ್ಲ ಎಂದು ಹೇಳಿದರು.
ಇಲ್ಲಿನ ಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ವರದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯ ಸರ್ಕಾರದಿಂದ ಪುನರ್ ಸ್ಥಾಪಿಸಿರುವ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆ ಅಡಿಯಲ್ಲಿ ಸಹಕಾರ ಸಂಘಗಳ ಮೂಲಕ ಜಿಲ್ಲೆಯ ಹೆಚ್ಚು ಮಂದಿ ರೈತರು ಸದಸ್ಯತ್ವ ನೊಂದಾಯಿಸಬೇಕೆಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ ಎನ್ ರಾಜಣ್ಣ ತಿಳಿಸಿದರು.
ಯಶಸ್ವಿನಿ ಯೋಜನೆಯಡಿ ನೊಂದಾಯಿತ ನೆಟ್ವರ್ಕ್ ಆಸ್ಪತ್ರೆಗಳಲ್ಲಿ1650 ಕಾಯಿಲೆಗಳಿಗೆ ಚಿಕಿತ್ಸೆ ಪಡೆಯಲು ಪ್ರತಿ ಕುಟುಂಬಕ್ಕೆ 5 ಲಕ್ಷ ರೂ ವರೆಗೆ ಆರೋಗ್ಯ ವಿಮಾ ಸೌಲಭ್ಯವಿದೆ. ಪ್ರತಿಯೊಬ್ಬರು ಈ ಸೌಲಭ್ಯ ಪಡೆಯಬೇಕೆಂದರು. ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಸದಸ್ಯರುಗಳಿಗೆ ವಾರ್ಷಿಕ ವಂತಿಕೆ ಪಾವತಿಗೆ ವಿನಾಯಿತಿ ಇದೆ ಹೆಚ್ಚಿನ ಮಾಹಿತಿಗಾಗಿ ಡಿಸಿಸಿ ಬ್ಯಾಂಕ್ ಶಾಖೆ ಅಥವಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕಾರ್ಯದರ್ಶಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು.
ಈ ಹಿಂದೆ ಯಶಸ್ವಿನಿ ಯೋಜನೆ ಪುನರ್ ಸ್ಥಾಪನೆಗೆ ಒತ್ತಾಯಿಸಿದ್ದೆವು, ಮುಖ್ಯಮಂತ್ರಿಗಳು ಸಹಕಾರ ಸಚಿವರು ಅಧಿಕಾರಿಗಳೊಂದಿಗೆ ಚರ್ಚಿಸಿ ಯಶಸ್ವಿನಿ ಯೋಜನೆ ಮತ್ತೆ ಜಾರಿಗೆ ತಂದಿರುವುದು ಅಭಿನಂದನೀಯ ಎಂದರು.
ತುಮಕೂರು ಜಿಲ್ಲೆಯ ಹತ್ತು ತಾಲೂಕುಗಳ 11 ವಿಧಾನಸಭಾ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಈ ಬಾರಿ ಗೆಲ್ಲುತ್ತದೆ ಎಂಬ ವಿಶ್ವಾಸ ನಮಗಿದೆ, ಎಂದವರು ಹಾಲಿನ ದರ 10 ರು ಬೇಕಾದರೆ ಹೆಚ್ಚಿಸಲಿ ಆದರೆ ಕಚೇರಿ ಕೆಲಸಕ್ಕೆ ಸಂಬಳ ಸಾರಿಗೆಗೆ ಆ ಹಣವನ್ನು ಉಪಯೋಗಿಸಬಾರದು, 10 ರುಗಳನ್ನು ಹಾಲು ಉತ್ಪಾದಕರಿಗೆ ನೀಡಬೇಕು ಎಂದು ಒತ್ತಾಯಿಸುವುದಾಗಿ ತಿಳಿದಿರು.
ಹಾಲು ಉತ್ಪಾದಕರ ಸ್ಥಿತಿ ಕಷ್ಟಕರವಾಗಿದೆ ಹೀಗಾಗಿ ಎμÉ್ಟೀ ಹೆಚ್ಚು ಮಾಡಿದರು ಅದನ್ನು ಉತ್ಪಾದಕರಿಗೆ ನೀಡಬೇಕು, ಶಾಲೆಗಳನ್ನು ಕೇಸರಿ ಕಾರಣ ಮಾಡಲು ಹೊರಟಿರುವ ಕ್ರಮ ಸರಿಯಲ್ಲ, ಸ್ವಾಮಿ ವಿವೇಕಾನಂದರು ಹೊರದೇಶದಲ್ಲೆಲ್ಲಾ ಭಾರತದ ಗೌರವವನ್ನು ಹೆಚ್ಚಿಸಿದ್ದಾರೆ ಅಂತಹವರಿಗೆ ಅವಮಾನ ಮಾಡುವುದು ತರವಲ್ಲ ಎಂದರು.
. ಪತ್ರಿಕಾಗೋಷ್ಠಿಯಲ್ಲಿ ಜಿ ಜೆ ರಾಜಣ್ಣ, ಶ್ರೀಧರ್, ಸಣ್ಣಪ್ಪಯ್ಯ, ವೆಂಕಟೇಶ್, ಲಕ್ಷ್ಮೀನಾರಾಯಣಗೌಡ, ಸಿಂಗದಹಳ್ಳಿ ರಾಜಕುಮಾರ್ ಮತ್ತಿತರರು ಉಪಸ್ಥಿತರಿದ್ದರು.