ರೈಲ್ವೆ ಪರೀಕ್ಷೆಯಲ್ಲಿ ಪ್ರಾದೇಶಿಕ ಭಾಷೆಗಳಿಗೆ ಆದ್ಯತೆ ನೀಡದಿದ್ದರೆ 5 ರಾಜ್ಯಗಳ ಚುನಾವಣೆಯಲ್ಲಿ ಕೇಂದ್ರಕ್ಕೆ ತಕ್ಕಪಾಠ-ಮುರಳೀಧರ ಹಾಲಪ್ಪ

ತುಮಕೂರು- ರೈಲ್ವೆ ನೇಮಕಾತಿ ಮಂಡಳಿ ಪರೀಕ್ಷೆಗಳಲ್ಲಿ ಕನ್ನಡ ಸೇರಿದಂತೆ ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡುದ ಕೇಂದ್ರ ಸರಕಾರದ ಕ್ರಮವನ್ನು ಖಂಡಿಸಿ, ಇಂದು ಸಂಜೆ ನಡೆಯುವ ಕರ್ನಾಟಕದ ಸಂಸದರ ಸಭೆಯಲ್ಲಿ ಮನವಿ ಸಲ್ಲಿಸಲಾಗುವುದು ಎಂದು ಕೆಪಿಸಿಸಿ ಉಪಾಧ್ಯಕ್ಷರು ಹಾಗೂ ಕೌಶಲ್ಯಾಭಿವೃದ್ದಿ ಮಂಡಳಿ ಮಾಜಿ ಅಧ್ಯಕ್ಷ ಮುರುಳೀಧರ ಹಾಲಪ್ಪ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ,ಮೊನ್ನೆಯವರೆಗೂ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸುವ ಭರವಸೆ ನೀಡಿದ್ದ, ರೈಲ್ವೆ ನೇಮಕಾತಿ ಮಂಡಳಿ, ಹೊರಡಿಸಿರುವ ಅಧಿಸೂಚನೆಯಲ್ಲಿ ಪರೀಕ್ಷೆ ಬರೆಯಲು ಹಿಂದಿ ಮತ್ತು ಇಂಗ್ಲಿಷ್ ಭಾಷೆಗೆ ಮಾತ್ರ ಅವಕಾಶ ಕಲ್ಪಿಸಿ, ಉಳಿದ ಪ್ರಾದೇಶಿಕ ಭಾಷೆಗಳನ್ನು ಪರಿಗಣೆಗೆ ತೆಗೆದುಕೊಂಡಿಲ್ಲ. ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳ ಉದ್ಯೋಗಾಂಕ್ಷಿಗಳಿಗೆ ಬರಸಿಡಿಲು ಬಡಿದಂತಾಗಿದೆ. ಕೇಂದ್ರ ಸರಕಾರದ ಮಲತಾಯಿ ಧೋರಣೆ ವಿರುದ್ದ ದ್ವನಿ ಎತ್ತುವಂತೆ ದೆಹಲಿಯಲ್ಲಿ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆಯುವ ರಾಜ್ಯ ಸಂಸದರ ಸಭೆಯಲ್ಲಿ ಮನವಿ ಮಾಡುವುದಲ್ಲದೆ, ರೈಲ್ವೆ ಸಚಿವರಾದ ಅಶ್ವಿನ್ ಶ್ರೀ ವೈಷ್ಣವ್ ಅವರಿಗೆ ಮನವಿ ಮಾಡಲಾಗುವುದು ಎಂದು ಹಾಲಪ್ಪ ನುಡಿದರು.

ದೇಶದಲ್ಲಿಯೇ ಅತಿ ಹೆಚ್ಚು ನೇಮಕಾತಿ ಮಾಡಿಕೊಳ್ಳುವ ಇಲಾಖೆಗಳಲ್ಲಿ ರೈಲ್ವೆ ಕೂಡ ಒಂದು, ಪ್ರಸ್ತುತ ರೈಲ್ವೆಯಲ್ಲಿ 13 ಲಕ್ಷ ನೌಕರರಿದ್ದು, ಇವರಲ್ಲಿ 11 ಲಕ್ಷ ಹಿಂದಿ ಭಾಷಿಕರು, ಇತರೆ ಭಾಷೆಯ ಯುವಕರಿಗೆ ಅತ್ಯಂತ ಕಡಿಮೆ ಅದ್ಯತೆ ಇದೆ. ಭಾರತದ ಸಂವಿಧಾನದಲ್ಲಿ 22 ಭಾಷೆಗಳಿಗೆ ಮಾನ್ಯತೆ ಇದೆ. ಆದರೆ ಎರಡು ಭಾಷೆಗಳಲ್ಲಿ ಮಾತ್ರ ಪರೀಕ್ಷೆ ಬರೆಯಲು ಅವಕಾಶ ನೀಡಿರುವುದು ಸಂವಿಧಾನಬಾಹಿರ ಕೆಲಸವಾಗಿದೆ.ಹಾಗಾಗಿ ಕೂಡಲೆ ಆರ್.ಆರ್.ಬಿ. ಅಧಿಸೂಚನೆ ಹಿಂಪಡೆದು, ಎಲ್ಲಾ ಪ್ರಾದೇಶಿಕ ಭಾಷೆಗಳಿಗೆ ಅವಕಾಶ ಕಲ್ಪಿಸಿದ ಹೊಸ ಅಧಿಸೂಚನೆ ಹೊರಡಿಸಬೇಕೆಂಬುದು ಕನ್ನಡಪರ ಸಂಘಟನೆಗಳು ಹಾಗು ದ್ರಾವಿಡ ಭಾಷೆಗಳ ಒತ್ತಾಯವಾಗಿದೆ.ಕೇಂದ್ರ ಸರಕಾರ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಮುಂಬರುವ ಐದು ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹಾಲಪ್ಪ ತಿಳಿಸಿದರು.

ತುಮಕೂರು ಸಂಸದರು, ಕೇಂದ್ರದ ರೈಲ್ವೆ ಖಾತೆ ರಾಜ್ಯ ಸಚಿವರಾದ ವಿ.ಸೋಮಣ್ಣ ಸಾಕಷ್ಟು ಕನ್ನಡ ಭಾಷೆಯಲ್ಲಿ ರೈಲ್ವೆ ನೇಮಕಾತಿ ಪರೀಕ್ಷೆ ಬರೆಯುವ ಸಂಬಂಧಿಸಿದಂತೆ ಸಾಕಷ್ಟು ಪತ್ರ ವ್ಯವಹಾರ ನಡೆಸಿದ್ದಾರೆ. ಆದರೆ ಅವರ ಪ್ರಯತ್ನ ಕೈಗೂಡಿಲ್ಲ. ಕೇಂದ್ರದ ಮೌಖಿಕ ಭರವಸೆಯಿಂದ ಆಯಾಯ ಪ್ರಾದೇಶಿಕ ಭಾಷೆಯಲ್ಲಿ ಪರೀಕ್ಷೆಗೆ ಸಿದ್ದತೆ ನಡೆಸಿದ್ದ ಕರ್ನಾಟಕ ರಾಜ್ಯದ 1.80 ಲಕ್ಷ ಆಕಾಂಕ್ಷಿಗಳು ದಿಕ್ಕು ತೋಚದಂತಾಗಿದ್ದಾರೆ.ಹಾಗಾಗಿ ಕೇಂದ್ರ ರೈಲ್ವೆ ನೇಮಕಾತಿ ಮಂಡಳಿ ಮತ್ತೊಮ್ಮೆ ಪರಿಶೀಲನೆ ನಡೆಸಬೇಕೆಂಬುದು ಎಲ್ಲಾ ಕನ್ನಡಿಗರ ಆಗ್ರಹವಾಗಿದೆ ಎಂದರು.

ಕೇಂದ್ರ ಸರಕಾರಕ್ಕೆ ದ್ರಾವಿಡ ಭಾಷೆಗಳ ಮೇಲೆ ಮೊದಲಿನಿಂದಲು ಮಲತಾಯಿ ಧೋರಣೆ, ಇದುವರೆಗೂ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸುವ ಭರವಸೆ ನೀಡಿ, ಈಗ ಹಿಂದಿ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಮಾತ್ರ ಅವಕಾಶ ನೀಡಿ ಕನ್ನಡಿಗರ ತಲೆಯ ಮೇಲೆ ಚಪ್ಪಡಿ ಕಲ್ಕು ಎಳೆದಿದೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ನಡೆಯುವ ರಾಜ್ಯದ ಸಂಸದರ ಸಭೆಯಲ್ಲಿ ಮನವಿ ಮಾಡಿ, ಸರಕಾರದ ಮೇಲೆ ಕನ್ನಡ ಭಾಷೆಗೆ ಅವಕಾಶ ನೀಡಲು ಒತ್ತಡ ತರುವಂತೆ ಕೋರಲಾಗುವುದು ಎಂದರು.

ಇಂದು ದೆಹಲಿಗೆ ರಾಜ್ಯದ ಪತ್ರಿ ಜಿಲ್ಲೆಯಿಂದ ಒಬ್ಬರಂತೆ ಹಾಗು ಕನ್ನಡ ಪರ ಸಂಘಟನೆಗಳ ಮುಖಂಡರು ನಿಯೋಗದಲ್ಲಿ ತೆರಳಿ ಮನವಿ ಸಲ್ಲಿಸಲಿದ್ದೇವೆ. ಸರಕಾರ ಸ್ಪಂದಿಸದಿದ್ದರೆ, ಕೇರಳ, ತಮಿಳುನಾಡು, ಪುದುಚೇರಿ ಚುನಾವಣೆಗಳಲ್ಲಿ ಜನರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಮುರುಳೀಧರ ಹಾಲಪ್ಪ ನುಡಿದರು.

Leave a Reply

Your email address will not be published. Required fields are marked *