
ತುಮಕೂರು :ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ(ಐಎಫ್ ಡಬ್ಲ್ಯೂಜೆ) ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಯಾಗಿ ತುಮಕೂರಿನ ಸುದ್ದಿ ಬಿಂಬ ಪತ್ರಿಕೆ ಸಂಪಾದಕರು ಹಾಗೂ ಕರ್ನಾಟಕ ಕಾರ್ಯನಿರತ ಪರ್ತಕರ್ತರ ಸಂಘದ ರಾಷ್ಟ್ರೀಯ ಮಂಡಳಿ ಸದಸ್ಯರೂ ಆದ ಡಿ. ಎಂ. ಸತೀಶ್ ಅವರನ್ನು ನೇಮಕ ಮಾಡಲಾಗಿದೆ.

ಐಎಫ್ ಡಬ್ಲ್ಯೂಜೆ ರಾಷ್ಟ್ರೀಯ ಅಧ್ಯಕ್ಷ ರಾದ ಬಿ. ವಿ. ಮಲ್ಲಿಕಾರ್ಜುನ ಯ್ಯ ಅವರು ಡಿ. ಎಂ. ಸತೀಶ್ ಅವರನ್ನು ನೇಮಕ ಮಾಡಿರುವುದಾಗಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪರಮಾನಂದ ಪಾಂಡೆ ನೇಮಕ ಪತ್ರ ದಲ್ಲಿ ತಿಳಿಸಿದ್ದು, ಕರ್ನಾಟಕ, ಕೇರಳ, ತಮಿಳು ನಾಡು, ತೆಲಂಗಾಣ, ಗೋವಾ ಹಾಗೂ ಕೇಂದ್ರಾಡಳಿತ ಪ್ರದೇಶಗಳಾದ ಲಕ್ಷದ್ವೀಪ, ಅಂಡಮಾನ್ ನಿಕೋಬಾರ್ ನಲ್ಲಿ ಕಾರ್ಯನಿರತ ಪರ್ತಕರ್ತರ ಸಂಘಟನೆ ಯ ಜವಾಬ್ದಾರಿ ನೀಡಲಾಗಿದೆ ಎಂದಿದ್ದಾರೆ. ಡಿ. ಎಂ. ಸತೀಶ್ ಅವರು ಸಂಘದ ಜಿಲ್ಲಾ ನಿರ್ದೇಶಕರು, ರಾಷ್ಟ್ರೀಯ ಮಂಡಳಿ ಸದಸ್ಯ ರಾಗಿ ಎರಡು ಅವಧಿಗೆ ಕಾರ್ಯನಿರ್ವಹಿಸಿದ್ದು,ಹಿಂದೆ ದಕ್ಷಿಣ ಭಾರತದ ಸಣ್ಣ ಮತ್ತು ಮಧ್ಯಮ ಪತ್ರಿಕೆಗಳ ಸಂಚಾಲಕರಾಗಿಯೂ ಸೇವೆ ಸಲ್ಲಿಸಿದ್ದು, ಈಗ ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ(ಐಎಫ್ ಡಬ್ಲ್ಯೂಜೆ) ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಯಾಗಿ ನೇಮಕವಾಗಿದ್ದಾರೆ.