ಮಂಗಳಮುಖಿಯಿಂದ ಕ್ರೀಡಾಕೂಟ ಉದ್ಘಾಟನೆ-ಜಿಲ್ಲಾ ಪೊಲೀಸ್ ಇಲಾಖೆಗೆ ವಿಶೆಷ ಶ್ಲಾಘನೆ

ತುಮಕೂರು – ನಗರದ ಡಿ.ಎ.ಆರ್. ಮೈದಾನದಲ್ಲಿ ನವೆಂಬರ್21ರಿಂದ ಮೂರು ದಿನಗಳ ಕಾಲ ನಡೆಯುವ ತುಮಕೂರು ಜಿಲ್ಲಾ ಪೆÇಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಒಂದು ವಿಶೇಷವಾದ ಆಕರ್ಷಣೆ ಮತ್ತು ಒಂದು ಮಾನವೀಯ ನೆಲೆಯಿಂದ ಕಡೆಗಣಿಸಲ್ಪಡುವ ಮಂಗಳಮುಖಿಯೊಬ್ಬರಿಂದ ಕ್ರೀಡಾಕೂಟವನ್ನು ಉದ್ಘಾನೆಗೊಳಿಸಿದ್ದಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಾರ್ಯವನ್ನು ಜನತೆ ಶ್ಲಾಘಿಸಿದ್ದಾರೆ.

ಮೈಸೂರು ಜಿಲ್ಲೆ ಸಾಲಿಗ್ರಾಮ ಗ್ರಾಮ ಪಂಚಾಯ್ತಿಯ ಮಾಜಿ ಅಧ್ಯಕ್ಷರಾದ ಮಂಗಳಮುಖಿ ದೇವಿಕ ಅವರು ಜಿಲ್ಲಾ ಪೆÇಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಪಾರಿವಾಳ ಮತ್ತು ಬಲೂನ್‍ಗಳನ್ನು ಹಾರಿ ಬಿಡುವ ಮೂಲಕ ಚಾಲನೆ ಇಂದು ಚಾಲನೆ ನೀಡಿದರು.

ಈ ಮೂಲಕ ಜಿಲ್ಲಾ ಪೊಲೀಸ್ ಇಲಾಖೆಯು ಒಂದು ಹೊಸ ಆಲೋಚನೆಯನ್ನು ಹುಟ್ಟು ಹಾಕಿದ್ದು, ಈ ಕಾರ್ಯ ಮಾಡಿದ್ದಕ್ಕೆ ಜಿಲ್ಲಾ ಪೊಲೀಸ್ ಇಲಾಖೆಯನ್ನು ಉನ್ನತಾಧಿಕಾರಿಗಳು ಜಿಲ್ಲಾ ಪೊಲೀಸ್ ವರಿಷ್ಠಾಧೀಕಾರಿಗಳನ್ನು ಅಭಿನಂದಿಸಿದ್ದಾರೆ.

ನಂತರ ಕ್ರೀಡಾಪಟುಗಳಿಂದ ಕ್ರೀಡಾ ಜ್ಯೋತಿ ಸ್ವೀಕರಿಸಿ ಮಾತನಾಡಿದ ಅವರು, ಶಿಕ್ಷಣದ ಅರ್ಹತೆ ಹೊಂದಿರುವ ಮಂಗಳಮುಖಿಯರಿಗೆ ಪೆÇಲೀಸ್ ಇಲಾಖೆ ಸೇರಿದಂತೆ ಇತರೆ ಸರ್ಕಾರಿ ಇಲಾಖೆಗಳಲ್ಲಿ ಉದ್ಯೋಗಾವಕಾಶ ನೀಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.

ಮಂಗಳಮುಖಿಯರಲ್ಲಿ ಓದಿದವರು ಇದ್ದಾರೆ. ಅಂತಹವರಿಗೆ ಸರ್ಕಾರಿ ಉದ್ಯೋಗ ನೀಡಿದರೆ ಬದುಕಿಗೆ ತುಂಬಾ ಅನುಕೂಲವಾಗಲಿದೆ ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ಮಂಗಳಮುಖಿಯರಿಗೆ ಪೆÇಲೀಸ್ ಇಲಾಖೆಯಲ್ಲಿ ಹೆಚ್ಚು ಉದ್ಯೋಗ ನೀಡುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದರು.

ಮಂಗಳಮುಖಿಯರು ಇರಲು ಸೂರು ಇಲ್ಲದೆ ಬದುಕು ದೂಡುವಂತಾಗಿದೆ. ಸರ್ಕಾರ ಮಂಗಳಮುಖಿಯರಿಗೆ ನಿವೇಶನ ನೀಡಿ ಮನೆ ನಿರ್ಮಿಸಿಕೊಸಿಕೊಡುವ ಮೂಲಕ ಇತರರಂತೆ ಸಮಾಜದಲ್ಲಿ ಬದುಕು ನಡೆಸಲು ಅನುಕೂಲ ಕಲ್ಪಿಸಬೇಕು ಎಂದು ಅವರು ಮನವಿ ಮಾಡಿದರು.

ಮಂಗಳಮುಖಿಯರು ಎಲ್ಲೇ ಇರಲಿ, ಹೇಗೆ ಇರಲಿ ಪೆÇಲೀಸ್ ಅಧಿಕಾರಿಗಳು ತುಂಬಾ ಸಹಾಯ ಮಾಡುತ್ತಾರೆ. ನಮಗೆ ಸದಾ ಪೆÇಲೀಸರ ಸಹಕಾರ ಅತ್ಯವಶ್ಯವಾಗಿದೆ ಎಂದರು.

ಮಂಗಳಮುಖಿಯರು ಸಾಧನೆ ಮಾಡಲು ಕುಟುಂಬದವರೇ ಸಹಕರಿಸುವುದಿಲ್ಲ. ಎμÉ್ಟೂೀ ತಾಯಿ ತಂದೆ, ಅಣ್ಣ ತಮ್ಮಂದಿರುವ ಮಂಗಳಮುಖಿಯರು ಎಂದಾಕ್ಷಣ ಮನೆಯಿಂದ ಹೊರಗೆ ಹಾಕುತ್ತಾರೆ. ಹೀಗಾಗಿ ಮಂಗಳಮುಖಿಯರಾದ ನಾವು ಭಿಕ್ಷಾಟನೆ ಮಾಡುತ್ತಾ ಜೀವನ ನಡೆಸಬೇಕಾಗಿದೆ ಎಂದರು.

ಜನಸಾಮಾನ್ಯರು ನೀಡುವ ಕಾಣಿಕೆ ಹಣದಲ್ಲಿ ಮಂಗಳಮುಖಿಯರು ಅನಾಥ ಮಕ್ಕಳನ್ನು ಸಾಕುತ್ತಿದ್ದಾರೆ. ಜತೆಗೆ ಬಡವರಿಗೂ ದಾನ ಮಾಡಲಾಗುತ್ತಿದೆ ಎಂದು ಹೇಳಿದರು.

ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ರಾಹುಲ್‍ಕುಮಾರ್ ಶಹಪೂರ್‍ವಾಡ್ ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು.

ಇದೇ ಸಂದರ್ಭದಲ್ಲಿ ಜಿಲ್ಲೆಯ ವಿವಿಧ ಉಪವಿಭಾಗದ ಪೆÇಲೀಸ್ ಕ್ರೀಡಾಪಟುಗಳಿಂದ ಆಕರ್ಷಕ ಪಥಸಂಚಲನ ನಡೆಯಿತು.

ಕಾರ್ಯಕ್ರಮದಲ್ಲಿ ಅಡಿಷನಲ್ ಎಸ್ಪಿ ಟಿ.ಜೆ. ಉದೇಶ್, ತಿಪಟೂರು ಉಪವಿಭಾಗದ ಎಎಸ್ಪಿ ಸಿದ್ದಾರ್ಥ ಸೇರಿದಂತೆ ಜಿಲ್ಲೆಯ ಎಲ್ಲ ಉಪವಿಭಾಗಾಗಳ ಪೆÇಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಗವಹಿಸಿದ್ದರು.

Leave a Reply

Your email address will not be published. Required fields are marked *