ಕಾರ್ಮಿಕರ ದಡಿಯುವ ಸಮಯ ಹೆಚ್ಚಳ-ಬಿಎಸ್‍ಎನ್‍ಎಲ್ ಕಚೇರಿ ಮುಂದೆ ಪ್ರತಿಭಟನೆ

ತುಮಕೂರು- ರಾಜ್ಯ ಸರ್ಕಾರ ಇತ್ತೀಚೆಗೆ ಕಾರ್ಮಿಕರ ದುಡಿಯುವ ವೇಳೆಯನ್ನು 8 ಗಂಟೆಯಿಂದ 12 ಗಂಟೆಗೆ ಹೆಚ್ಚಿಸಿರುವ ಕ್ರಮವನ್ನು ಖಂಡಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ನಗರದ ಬಿಎಸ್‍ಎನ್‍ಎಲ್ ಕಚೇರಿ ಮುಂದೆ ಜಮಾಯಿಸಿದ ಕಾರ್ಮಿಕ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಕಾರ್ಮಿಕರು ಸರ್ಕಾರಗಳ ವಿರುದ್ಧ ಘೋಷಣೆಗಳನ್ನು ಕೂಗಿದರು.

ನಂತರ ಬಿಎಸ್‍ಎನ್‍ಎಲ್ ಕಚೇರಿಯಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆಯಲ್ಲಿ ಸಾಗಿದ ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳಿಗೆ ತಮ್ಮ ಬೇಡಿಕೆಯ ಮನವಿ ಪತ್ರವನ್ನು ಸಲ್ಲಿಸಿ ಸರ್ಕಾರಕ್ಕೆ ಕಳುಹಿಸಿಕೊಡುವಂತೆ ಕೋರಿದರು.

ರಾಜ್ಯದ ಕಾರ್ಖಾನೆಗಳಲ್ಲಿ ದಿನದ ಕೆಲಸದ ಅವಧಿ ಗರಿಷ್ಟ 9 ಗಂಟೆಯಿಂದ 12 ಗಂಟೆಗೆ ಹೆಚ್ಚಿಸಿ ಹಾಗೂ ದುಡಿಯುವ ಮಹಿಳೆಯರನ್ನು ರಾತ್ರಿ ಪಾಳಿಯಲ್ಲಿ ದುಡಿಸಿಕೊಳ್ಳಲು ಅವಕಾಶ ಕಲ್ಪಿಸಿ ಕಾರ್ಖಾನೆ ಕಾಯ್ದೆ – 1948ಕ್ಕೆ ತಿದ್ದುಪಡಿ ಮಾಡಿ ಕಾರ್ಖಾನೆಗಳ (ಕರ್ನಾಟಕ ತಿದ್ದುಪಡಿ) ವಿಧೇಯಕ 2023 ನ್ನು ಬಂಡವಾಳದಾರರ ಲಾಭಕ್ಕಾಗಿ ರಾಜ್ಯ ಸರ್ಕಾರ ವಿಧಾನಸಭೆಯಲ್ಲಿ ಮಂಡಿಸಿ ಅಂಗೀಕರಿಸಿರುವುದು ಕಾರ್ಮಿಕ ವಿರೋಧಿ ನಡೆಯಾಗಿದೆ ಎಂದು ಪ್ರತಿಭಟನಾಕಾರರು ದೂರಿದರು.

ಈ ಕಾರ್ಮಿಕ ವಿರೋಧಿ ನೀತಿಯನ್ನು ಹಿಂದಕ್ಕೆ ಪಡೆಯುವಂತೆ ಆಗ್ರಹಿಸಿದ ಪ್ರತಿಭಟನಾಕಾರರು
1948ರ ಕಾಯ್ದೆಯು ದಿನದ ಕೆಲಸದ ಅವಧಿಯ ಆರಂಭದಿಂದ ಗರಿಷ್ಠ 5 ಗಂಟೆಗೆ 30 ನಿಮಿಷ ವಿರಾಮವನ್ನು ನೀಡಬೇಕೆಂದು ಹೇಳುತ್ತದೆ. ಆದರೆ ಈ ತಿದ್ದುಪಡಿ ವಿಧೇಯಕದಲ್ಲಿ ಯಾವುದೇ ವಿರಾಮವಿಲ್ಲದೆ ದುಡಿಮೆ ಮಾಡುವ ಅವಧಿ ಗರಿಷ್ಠ 5 ಗಂಟೆಯಿಂದ 6 ಗಂಟೆಗೆ ಹೆಚ್ಚಿಸಿ ಹಾಗೂ ಕಾರ್ಮಿಕರ ದಿನದ ಕೆಲಸದ ಗರಿಷ್ಠ ಅವಧಿ 9 ಗಂಟೆಯಿಂದ 12 ಗಂಟೆಗೆ ಹೆಚ್ಚಿಸಿ ಕಾರ್ಮಿಕರ ಶೋಷಣೆಗೆ ಮತ್ತಷ್ಟು ಅವಕಾಶ ಕಲ್ಪಿಸಿದೆ ಎಂದು ಆಕ್ರೋಶ ಹೊರ ಹಾಕಿದರು.

ಪ್ರತಿಭಟನಾಕಾರರನ್ನು ಉದ್ದೇಶಿಸಿ ಸಿಐಟಿಯುನ ಸೈಯದ್ ಮುಜೀಬ್ ಮಾತನಾಡಿ,
ಉದ್ಯೋಗದ ಕಡಿತ, ಕಡಿಮೆ ವೇತನಕ್ಕೆ ದುಡಿಮೆ, ಅಧಿಕ ಉತ್ಪಾದನೆ ಮಾಡಿಸಿಕೊಳ್ಳುವುದು ಈ ಅವಧಿಯಲ್ಲಿ ಹೆಚ್ಚಾಗಿದೆ. ಈ ತಿದ್ದುಪಡಿಗಳು ಕಾರ್ಮಿಕರ ಮೇಲೆ ವಿರಾಮವಿಲ್ಲದೆ ಅಧಿಕ ಉತ್ಪಾದನೆ ಮಾಡಬೇಕೆನ್ನುವ ಒತ್ತಡ, ಕಾರ್ಮಿಕರ ಶೋಷಣೆ ಹೆಚ್ಚಿಸಲಿದೆ. ಹಲವು ಕಾರ್ಖಾನೆ ಮಾಲೀಕರಿಗೆ ಆರು ದಿನಗಳ ಉತ್ಪಾದನೆಯನ್ನು ನಾಲ್ಕು ದಿನಗಳಲ್ಲೇ ಉತ್ಪಾದನೆ ಮಾಡಿಸಿಕೊಳ್ಳಲು ಈ ಕಾಯ್ದೆಯಲ್ಲಿ ಅವಕಾಶ ಸಿಗಲಿದೆ. ಇದು ಕಾರ್ಮಿಕರ ಶ್ರಮದ ಅತೀವ ಶೋಷಣೆಯಾಗಿದೆ. ಮೂರು ಪಾಳಿಗಳಿಗೆ ಒದಗಿಸಬೇಕಾದ ಸಾರಿಗೆ ಸೌಲಭ್ಯ ಹಾಗೂ ಕ್ಯಾಂಟೀನ್ ಮತ್ತು ಇನ್ನಿತರ ಸೌಲಭ್ಯಗಳನ್ನು ಉಳಿಸಲು ಇದು ದಾರಿ ಮಾಡಿಕೊಡಲಿದೆ.

ಚಾರಿತ್ರಿಕ 8 ಗಂಟೆ ಕೆಲಸ, 8 ಗಂಟೆ ವಿರಾಮ ಮತ್ತು 8 ಗಂಟೆ ಮನೋರಂಜನೆ ಎಂಬ ಜೀವಪರ, ವೈಜ್ಞಾನಿಕ, ತಾತ್ವಿಕ ನೆಲೆಯನ್ನು ಕಳಚಿ ಹಾಕಿ, ಕಾಪೆರ್Çೀರೇಟ್ ಬಂಡವಾಳಕ್ಕೆ ಲಾಭ ಮಾಡಿಕೊಡುವ ನವ ಉದಾರವಾದಿ ಆರ್ಥಿಕ ನೀತಿಯ ಜಾರಿಯ ನಿಟ್ಟಿನಲ್ಲಿ ಸರ್ಕಾರವು ಈ ತಿದ್ದುಪಡಿ ಮಾಡಿದೆ ಎಂದು ಕಿಡಿಕಾರಿದರು.

ಎಐಟಿಯುಸಿ ಗಿರೀಶ್ ಮಾತನಾಡಿದರು. ಕಾರ್ಖಾನೆಗಳಲ್ಲಿ ಹೊಸ ಉದ್ಯೋಗ ಅವಕಾಶಗಳ ಸೃಷ್ಟಿಗೆ, ಕಾರ್ಮಿಕರ ಮೇಲೆ ಅಧಿಕ ಉತ್ಪಾದನೆ ಮಾಡಬೇಕೆನ್ನುವ ಒತ್ತಡಗಳನ್ನು ಕಡಿಮೆ ಮಾಡಲು, ಕಾರ್ಮಿಕರ ಜೀವನವನ್ನು ಉತ್ತಮಪಡಿಸಲು ವಾರಕ್ಕೆ 5 ದಿನ ಕೆಲಸ, ದಿನಕ್ಕೆ 7 ಗಂಟೆ, ವಾರಕ್ಕೆ 35 ಗಂಟೆ ಕೆಲಸದ ಅವಧಿ ನಿಗದಿಪಡಿಸಿ ಕಾಯ್ದೆಗೆ ತಿದ್ದುಪಡಿ ಮಾಡಬೇಕು ಎಂದು ಒತ್ತಾಯಿಸಿ

ಕಾರ್ಮಿಕ ವಿರೋಧಿ ತಿದ್ದುಪಡಿಗಳನ್ನು ಒಳಗೊಂಡಿರುವ ಕಾರ್ಖಾನೆಗಳ (ಕರ್ನಾಟಕ ತಿದ್ದುಪಡಿ) ವಿಧೇಯಕ 2023 ನ್ನು ರಾಜ್ಯ ಸರ್ಕಾರ ಕೂಡಲೇ ವಾಪಸ್ಸು ಪಡೆಯಬೇಕು ಎಂದು ಅವರು ಆಗ್ರಹಿಸಿದರು.

Leave a Reply

Your email address will not be published. Required fields are marked *