ತುಮಕೂರು : ಹೈಕಮಾಂಡ್ ಸೂಚನೆ ಹಿನ್ನೆಲೆಯಲ್ಲಿ ಇಂದು ಸಚಿವ ಸ್ಥಾನಕ್ಕೆ ಸಹಕಾರ ಸಚಿವ ರಾಜಣ್ಣ ರಾಜೀನಾಮೆ ನೀಡಿದ್ದಾರೆ
ಸಿಎಂ ಸಿದ್ದರಾಮಯ್ಯ ಅವರ ಆತ್ಮೀಯ ಬಳಗದಲ್ಲಿ ಗುರುತಿಸಿಕೊಂಡಿರುವ ಅವರು ಸದ್ಯ ತುಮಕೂರು ಜಿಲ್ಲೆ ಮಧುಗಿರಿ ವಿಧಾನಸಭಾದ ಶಾಸಕರಾಗಿದ್ದಾರೆ.
ಇತ್ತೀಚೆಗೆ ಕೆ.ಎನ್.ರಾಜಣ್ಣ ಅವರು ಮತಗಳ್ಳತನದ ಬಗ್ಗೆ ಮಾತನಾಡುತ್ತಾ ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ನಮ್ಮದೇ ಸರ್ಕಾರ ಇತ್ತು ಆಗ ಏನು ಮಾಡುತ್ತಿದ್ದರು ಎಂದು ಮಾತನಾಡಿದ್ದರು. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತಗಳ್ಳತನದ ಬಗ್ಗೆ ದೇಸದ್ಯಾಂತ ಹೋರಾಟ ರೂಪಿಸುತ್ತಿರುವ ಕಾಳದಲ್ಲೇ, ರಾಜಣ್ಣವರ ಈ ಹೇಳಿಕೆ ಪಕ್ಷ ಮತ್ತು ರಾಹುಲ್ ಗಾಂಧಿಯವರಿಗೆ ಮಜಗರವನ್ನುಂಟು ಮಾಡಿತ್ತು.
ಈ ಹಿನ್ನಲೆಯಲ್ಲಿ ಹೈಕಮಾಂಡ್ ಕೆ.ಎನ್.ರಾಜಣ್ಣನವರ ರಾಜೀನಾಮೆ ಕೂಡಲೇ ಪಡೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕಟುವಾಗಿ ಹೇಳಿದ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿಗಳು ಕೆ.ಎನ್.ರಾಜಣ್ಣ ಅವರ ರಾಜೀನಾಮೆಯನ್ನು ಪಡೆದಿದ್ದಾರೆ.
ಕೆಲ ದಿನಗಳ ಹಿಂದೆ ಹೈಕಮಾಂಡ್ ಜೊತೆಗೆ ನೇರವಾಗಿ ಸಿಟ್ಟಾಗಿದ್ದ ರಾಜಣ್ಣ ಹೈಕಮಾಂಡ್ ನಾಯಕರ ವಿರುದ್ದವೇ ಮಾತನಾಡಿದ್ದು ಈಗ ಅವರ ರಾಜೀನಾಮೆಗೆ ಕಾರಣ ಎನ್ನಲಾಗಿದೆ.
ಸಹಕಾರಿ ಕ್ಷೇತ್ರದಲ್ಲಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದ ರಾಜಣ್ಣ, ಈ ಹಿಂದೆ ಭಾರತದ ರಾಷ್ಟ್ರೀಯ ಕೃಷಿ ಸಹಕಾರಿ ಮಾರುಕಟ್ಟೆ ಒಕ್ಕೂಟದ ನಿರ್ದೇಶಕರಾಗಿ ಮತ್ತು ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಲಿಮಿಟೆಡ್ನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ರಾಜಣ್ಣ 1972 ರಿಂದ ಸಹಕಾರಿ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದರು. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ನ ಕ್ಯಾತಸಂದ್ರ ತಾಲ್ಲೂಕು ಘಟಕದ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ ಅದೇ ಅವಧಿಯಲ್ಲಿ ಅವರ ಸಾರ್ವಜನಿಕ ಜೀವನ ಪ್ರಾರಂಭವಾಯಿತು. 1976 ರಲ್ಲಿ, ಅವರು ಕ್ಯಾತಸಂದ್ರ ನಗರ ಪಂಚಾಯತ್ ಅಧ್ಯಕ್ಷರಾಗಿ ಆಯ್ಕೆಯಾದರು, 1980 ಮತ್ತು 1984 ರ ನಡುವೆ ತುಮಕೂರು ಜಿಲ್ಲಾ ಘಟಕದ ಐಎನ್ಸಿಯ ಯುವ ಕಾಂಗ್ರೆಸ್ ವಿಭಾಗದ ಮುಖ್ಯಸ್ಥರಾಗಿದ್ದರು.
ಕೆಲವು ದಿನಗಳ ಹಿಂದೆ ತಮ್ಮನ್ನು ‘ಮಧುಬಲೆ’ಗೆ (ಹನಿಟ್ರ್ಯಾಪ್) ಕೆಡವಲು ಯತ್ನಿಸಿದ ಪ್ರಕರಣದ ಕುರಿತು ಉನ್ನತಮಟ್ಟದ ತನಿಖೆ ನಡೆಸುವಂತೆ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ಗೃಹ ಸಚಿವ ಜಿ. ಪರಮೇಶ್ವರ ಅವರಿಗೆ ಮನವಿ ಸಲ್ಲಿಸಿದರು. ಆದರೆ ತನಿಖಾ ತಂಡ ಕೆ.ಎನ್. ರಾಜಣ್ಣ ಅವರ ಆರೋಪ ಸುಳ್ಳು ಅಂತ ತನಿಖಾ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿತ್ತು.
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೆ.ಎನ್.ರಾಜಣ್ಣನವರ ರಾಜೀನಾಯನ್ನು ಪಡೆದಿದ್ದು, ಕೆ.ಎನ್.ರಾಜಣ್ಣನವರ ರಾಜೀನಾಮೆಯನ್ನು ಅಂಗೀಕರಿಸುವಂತೆ ರಾಜ್ಯಪಲರಿಗೆ ಕಳುಹಿಸಿ ಕೊಡಲಾಗಿತ್ತು, ರಾಜ್ಯಪಾಲರು ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ.