ಸಿದ್ಧಿವಿನಾಯಕ ಮಾರುಕಟ್ಟೆ ಜಾಗದಲ್ಲಿ ಮಾಲ್ ನಿರ್ಮಾಣಕ್ಕೆ ಬಿಜೆಪಿ ಶಾಸಕದ್ವರಿಂದ ವಿರೋಧ-ಪ್ರತಿಭಟನೆ

ತುಮಕೂರು: ನಗರದ ಸಿದ್ಧಿವಿನಾಯಕ ಮಾರುಕಟ್ಟೆ ಪ್ರದೇಶದಲ್ಲಿ ಸರ್ಕಾರದ ವತಿಯಿಂದ ಕೈಗೊಳ್ಳುತ್ತಿರುವ ಮಲ್ಟಿ ಯುಟಿಲಿಟಿ ಮಾಲ್ ನಲ್ಲಿ ಈ ಹಿಂದೆ ಇದ್ದ ವ್ಯಾಪಾರಸ್ಥರಿಗೆ ಕಡಿಮೆ ಬಾಡಿಗೆ ಮಳಿಗೆಗಳನ್ನು ನೀಡಿದರೆ ಮಾತ್ರ ಮಾಲ್ ಕಟ್ಟಲು ಬಿಡುವುದಾಗಿ ಶಾಸಕರುಗಳಾದ ಜಿ.ಬಿ.ಜ್ಯೋತಿಗಣೇಶ್ ಮತ್ತು ಬಿ.ಸುರೇಶ್ ಗೌಡ ಒತ್ತಾಯಿಸಿದರು.

ಶಾಸಕದ್ವರು ಯೋಜನೆಯನ್ನು ತೀವ್ರವಾಗಿ ವಿರೋಧಿಸಿ,ಸ್ಥಳೀಯ ಸಾರ್ವಜನಿಕರು, ಸಂಘ ಸಂಸ್ಥೆಗಳ ಅಭಿಪ್ರಾಯದಂತೆ ಕೈ ಬಿಡುವಂತೆ ಒತ್ತಾಯಿಸಿ ಜುಲೈ27ರಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಗೆ ಮನವಿ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ಅವರು ಸಿದ್ಧಿ ವಿನಾಯಕ ಮರುಕಟ್ಟೆ ಪ್ರದೇಶದಲ್ಲಿ ಮಲ್ಟಿ ಯುಟಿಲಿಟಿ ಮಾಲ್ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸುವುದನ್ನು ವಿರೋಧಿಸಿ ಯೋಜನೆ ಕೈಬಿಡುವಂತೆ ಒತ್ತಾಯಿಸಿ, ಸಚಿವರಿಗೆ ಮನವಿ ಸಲ್ಲಿಸಲು ಮಾರುಕಟ್ಟೆ ಸ್ಥಳಕ್ಕೆ ಹೊರಟಾಗ ಪೊಲೀಸರು ಬಿಜಿಎಸ್ ವೃತ್ತದಲ್ಲಿ ತಡೆದಾಗ,ವ್ಯಾಪಾರಸ್ಥರು, ಸಾರ್ವಜನಿಕರು ಪೊಲೀಸರು ನಡುವೆ ಮಾತಿನ ಜಟಾಪಟಿ ನಡೆದಾಗ ಪೊಲೀಸರು ಮುಖಂಡರನ್ನು ಬಂಧಿಸಿ ವಶಕ್ಕೆ ಪಡೆದು ಚಿಲುಮೆ ಪೊಲೀಸ್ ಸಮುದಾಯ ಭವನಕ್ಕೆ ಕರೆದೊಯ್ದರು.

ಮಾರುಕಟ್ಟೆಗೆ ಭೇಟಿ:

ಬಿಜೆಪಿ ಮುಖಂಡರನ್ನು ಪೊಲೀಸರು ಬಿಡುಗಡೆ ಮಾಡಿದ ನಂತರ ಸಿದ್ಧಿ ವಿನಾಯಕ ಮಾರುಕಟ್ಟೆ ಪ್ರದೇಶಕ್ಕೆ ಆಗಮಿಸಿದ ಶಾಸಕರಾದ ಜಿ.ಬಿ.ಜ್ಯೋತಿಗಣೇಶ್, ಬಿ.ಸುರೇಶ್‌ಗೌಡರು, ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಎಸ್.ರವಿಶಂಕರ್ ಹೆಬ್ಬಾಕ ಹಾಗೂ ಮುಖಂಡರು ಸರ್ಕಾರದ ಕ್ರಮ ಖಂಡಿಸಿದರು.

ಪೊಲೀಸರು ಮುಖಂಡರನ್ನು ಬಂಧಿಸಿ ವಶಕ್ಕೆ ಪಡೆದು ಚಿಲುಮೆ ಪೊಲೀಸ್ ಸಮುದಾಯ ಭವನದಲ್ಲಿ ಕೂರಿಸಿರುವುದು.

2021ರ ಜುಲೈ 29ರಂದು ಶ್ರೀ ಸಿದ್ಧಿ ವಿನಾಯಕ ಮಾರುಕಟ್ಟೆ ಪ್ರದೇಶದಲ್ಲಿ ಮಲ್ಟಿ ಯುಟಿಲಿಟಿ ಮಾಲ್ ಮತ್ತು ಕಾರು ಪಾರ್ಕಿಂಗ್ ಯೋಜನೆಯನ್ನು ಕೈಬಿಡುವಂತೆ ಕೋರಿ ಮನವಿ ಸಲ್ಲಿಸಿದ್ದ ಕಾರಣ, ಸದರಿ ಯೋಜನೆಯನ್ನು ಸ್ಥಗಿತಗೊಳಿಸಲಾಗಿತ್ತು. ಏಕಾಏಕಿ ಯೋಜನೆಯನ್ನು ಪುನರ್ ಪ್ರಾರಂಭಿಸುತ್ತಿರುವ ಹಿಂದಿನ ದುರುದ್ದೇಶವಾದರೂ ಏನು? ಎಂದು ಪ್ರಶ್ನಿಸಿದ್ದಾರೆ.

ಈ ಜಾಗದಲ್ಲಿ ಹಣ್ಣು, ಹೂವು, ತರಕಾರಿ ವ್ಯಾಪಾರ ಮಾಡುವ ಸಣ್ಣ ವ್ಯಾಪಾರಿಗಳಿಗೆ ಅವಕಾಶ ಮಾಡಿಕೊಡಬೇಕು ಇಲ್ಲದಿದ್ದರೆ ಉದ್ದೇಶಿತ ಮಾಲ್ ನಿರ್ಮಾಣದ ಯೋಜನೆ ಕೈಬಿಡಬೇಕು, ಬಡವರಿಗೆ ಅನ್ಯಾಯ ಮಾಡಿ, ಶ್ರೀಮಂತರಿಗೆ ಅನುಕೂಲ ಮಾಡುವ ಮೂಲಕ ಸರ್ಕಾರ ಬಡವರ ವಿರೋಧಿ ಧೋರಣೆ ಕೈಬಿಡಬೇಕು ಎಂದು ಒತ್ತಾಯಿಸಿದರು.

ಇಲ್ಲಿನ ದೇವಸ್ಥಾನ ಒಂದು ಚೂರು ಅಲುಗಾಡಿದರೂ ಅದಕ್ಕೆ ಸರ್ಕಾರವೇ ಹೊಣೆ, ಜನರ ಭಾವನೆಗಳೊಂದಿಗೆ ಸರ್ಕಾರ ಆಟವಾಡುತ್ತಿದೆ. ಇಲ್ಲಿ ಮಾಲ್ ನಿರ್ಮಾಣಕ್ಕೆ ಅವಕಾಶ ಮಾಡಿಕೊಡುವುದಿಲ್ಲ. ಸ್ಥಳೀಯ ವ್ಯಾಪಾರಿಗಳೊಂದಿಗೆ ಸೇರಿ ಸತ್ಯಾಗ್ರಹ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಶಾಸಕ ಬಿ.ಬಿ.ಜ್ಯೋತಿಗಣೇಶ್ ಮಾತನಾಡಿ, ಸ್ಥಳಿಯ ನಾಗರೀಕರು, ಸಂಘಸAಸ್ಥೆಗಳ ಅಭಿಪ್ರಾಯದಂತೆ ಇಲ್ಲಿ ಮಾಲ್ ನಿರ್ಮಾಣ ಯೋಜನೆ ಸ್ಥಗಿತಗೊಳಿಸಲಾಗಿತ್ತು. ಆದರೆ ಸಚಿವರು ಇಂದು ಏಕಾಏಕಿ ಪೊಲೀಸರÀ ಬಂದೋಬಸ್ತಿನಲ್ಲಿ ಮಾಲ್ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಆದರೆ ಕಟ್ಟಡ ನಿರ್ಮಾಣಕ್ಕೆ ಅವಕಾಶ ನೀಡುವುದಿಲ್ಲ ಎಂದರು.

ಇಲ್ಲಿ ಮಲ್ಟಿ ಯುಟಿಲಿಟಿ ಮಾಲ್ ವಿತ್ ಕಾರ್ ಪಾರ್ಕಿಂಗ್ ನಿರ್ಮಾಣದ ಯೋಜನೆಯನ್ನು ರದ್ದುಗೊಳಿಸಬೇಕು. ಈ ಜಾಗವನ್ನು ಸ್ಥಳೀಯ ತರಕಾರಿ, ಹಣ್ಣು, ಹೂವು ಮಾರಾಟ ಮಾಡುವ ಸಣ್ಣ ಪುಟ್ಟ ವ್ಯಾಪಾರಿಗಳ ವ್ಯಾಪಾರಕ್ಕಾಗಿ ಮೀಸಲಿಡಬೇಕು ಎಂದು ಒತ್ತಾಯಿಸಿದರು.

Leave a Reply

Your email address will not be published. Required fields are marked *