ಕಲೆಯಿಂದ ಮನುಷ್ಯನು ಸದಾ ಉತ್ಸಾಹಶಾಲಿಯಾಗಿರುತ್ತಾನೆ

ತುಮಕೂರು: ಮನುಷ್ಯನು ಉತ್ತಮ ಜೀವನವನ್ನು ಕಟ್ಟಿಕೊಳ್ಳುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಜೊತೆಗೆ ಕಲೆಯಿಂದ ಮನುಷ್ಯನು ಸದಾ ಉತ್ಸಾಹಶಾಲಿಯಾಗಿರುತ್ತಾನೆ ಎಂದು ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿಗಳಾದ ನಂಜುಂಡಪ್ಪನವರು ತಿಳಿಸಿದರು.

ನಗರದ ಶ್ರೀ ಸಿದ್ದಾರ್ಥ ತಾಂತ್ರಿಕ ಮಹಾವಿದ್ಯಾಲಯದ ಬಯಲು ರಂಗಸಜ್ಜಿಕೆಯಲ್ಲಿ ಆಯೋಜಿಸಲಾಗಿದ್ದ ಸಾಂಸ್ಕøತಿಕ ಹಬ್ಬ “ಕಲೋತ್ಸವ 2026” ಕಾರ್ಯಕ್ರಮವನ್ನು ಸಸಿಗೆ ನೀರು ಎರೆಯುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ದ ಅವರು ಕಲೋತ್ಸವ ಕರ್ಯಕ್ರಮವು ವಿದ್ಯಾರ್ಥಿಗಳು ತಮ್ಮ ಕ್ರಿಯಾತ್ಮಕತೆ ಪ್ರತಿಭೆಗಳನ್ನು ಹೊರಹಾಕಲು ಸೃಷ್ಟಿಯಾಗಿರುವ ಒಂದು ಉತ್ತಮವಾದ ವೇದಿಕೆಯಾಗಿದೆ. ಮನುಷ್ಯನಲ್ಲಿ ಕಲೆ ಇದ್ದರೆ ಖುಷಿ, ಸಂತೋಷ , ಆಯುಷ್ಯ, ಆರೋಗ್ಯ ವೃದ್ಧಿಯಾಗುತ್ತದೆ ಎಂದರು.

ನಮ್ಮ ಭಾರತ ದೇಶ ಲಲಿತ ಕಲೆ, ಸಂಸ್ಕøತಿ ಹಾಗೂ ಸಮಗ್ರತೆಯಿಂದ ಕೂಡಿರುವ ದೇಶವಾಗಿದ್ದು . ಮನುಷ್ಯನು ಹುಟ್ಟಿನಿಂದಲೇ ಕಲೆ ಮತ್ತು ಸಂಸ್ಕೃತಿಯನ್ನು ಬಳುವಳಿಯಾಗಿ ಪಡೆದುಕೊಂಡಿರುತ್ತಾನೆ. ಆದರೆ ಇತ್ತೀಚಿನ ದಿನಗಳಲ್ಲಿ ಗ್ರಾಮೀಣದ ಜನರು ಉದ್ಯೋಗಕ್ಕೆ ಮೊರೆ ಹೋಗಿ ಕಲೆ ಮತ್ತು ಸಂಸ್ಕೃತಿಯನ್ನು ಹಂತ ಹಂತವಾಗಿ ಮರೆತು ಹೋಗುತ್ತಿದ್ದಾರೆ. ಆದರೆ ಶೈಕ್ಷಣಿಕ ಕ್ಷೇತ್ರದಲ್ಲಿ ಮಾತ್ರ ವಿದ್ಯಾರ್ಥಿಗಳಿಂದ ಈ ಕಲೆ ಮತ್ತು ಸಂಸ್ಕೃತಿಯನ್ನು ಕಾಣಬಹುದಾಗಿದೆ ಹಾಗಾಗಿ ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿ ಕಲೆ ಸಂಸ್ಕøತಿಗೆ ರಾಯಭಾರಿಗಳಾಗಿರಬೇಕೆಂದು ಹೇಳಿದರು.

ಸರಿಗಮಪ ಸಿಸನ್ 20ರ ಕಾರ್ಯಕ್ರಮದ ಸ್ಫರ್ಧಿ ಹಾಗೂ ಸಿದ್ಧಗಂಗಾ ಮೆಡಿಕಲ್ ಕಾಲೇಜಿನ ವೈದ್ಯರಾದ ಡಾ. ಶ್ರಾವ್ಯ ಮಾತನಡಿ ಪ್ರತಿಭೆ ಎನ್ನುವುದು ಮಾನವನಿಗೆ ದೇವರು ಕೊಟ್ಟಿರುವ ವರವಾಗಿದೆ. ಮಾನವನಲ್ಲಿ ವಿಭಿನ್ನ ರೀತಿಯ ಪ್ರತಿಭೆಗಳು ಅಡಗಿರುತ್ತವೆ, ಅವಕಾಶಗಳು ಸಿಕ್ಕಾಗ ಅಂತರಂಗದಲ್ಲಿರುವ ಪ್ರತಿಭೆಗಳನ್ನು ಸಕಾರಾತ್ಮಕವಾಗಿ ಬಳಸಿಕೊಂಡು ಹೊರ ಜಗತ್ತಿಗೆ ಪರಿಚಯಿಸುವುದರಿಂದ ಸಮಾಜದಲ್ಲಿ ಬದುಕನ್ನು ಕಟ್ಟಿಕೊಳ್ಳಲು ಒಳ್ಳೆಯ ಮಾರ್ಗವಾಗಿದೆ ಎಂದು ಹೇಳಿದರು.

ಎಸ್ ಎಸ್ ಐಟಿ ಕಾಲೇಜಿನ ವಿಶ್ರಾಂತ ಪ್ರಾಂಶುಪಾಲರಾದ ಡಾ. ವೀರಯ್ಯ ಮಾತನಾಡಿ ಧನಾತ್ಮಕ ವರ್ತನೆ, ಏಕಾಗ್ರತೆ, ಒಳ್ಳೆಯ ನಡತೆ, ಹಾಡ್ರ್ವರ್ಕ್ ಇವೆಲ್ಲವೂ ನಮ್ಮ ಜೊತೆ ಇದ್ದರೆ ಮಾತ್ರ ಗೆಲುವು ನಮ್ಮದಾಗುತ್ತದೆ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಎಸ್‍ಎಸ್‍ಐಟಿ ಕಾಲೇಜಿನ ಪ್ರಾಂಶುಪಾಲರಾದ ಹಾಗೂ ಡಾ. ಮಹಾಂತೇಶ್ ಎಂ ನಡಕಟ್ಟಿ ಮಾತನಾಡಿ ನಮ್ಮ ಸಂಸ್ಥೆಯ ವಿದ್ಯಾರ್ಥಿಗಳು ಸ್ಪರ್ಧೆಗಳನ್ನು ನಾವಿನ್ಯತೆ, ಸೃಜನಾತ್ಮಕತೆ, ಕ್ರಿಯಾತ್ಮಕತೆಯಿಂದ ಆಯೋಜಿಸಿ ಉತ್ಸಾಹದಿಂದ ಕಾರ್ಯಕ್ರಮದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಪ್ರತಿಯೊಂದು ಕ್ಷಣವನ್ನು ಆನಂದಿಸಿರಿ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.

ಈ ಸಂದರ್ಭದಲ್ಲಿ ಸಾಹೇ ವಿವಿಯಿಂದ ನೂತನವಾಗಿ ಪಿಎಚ್‍ಡಿ ಪಡೆದ ಪ್ರಾಧ್ಯಾಪಕರಿಗೆ ಗೌರವಿಸಲಾಯಿತು. ಕಲೋತ್ಸವ 2026 ಕಾರ್ಯಕ್ರಮದಲ್ಲಿ 30ಕ್ಕೂ ಹೆಚ್ಚು ಸ್ಫರ್ಧೆಗಳಿದ್ದು ವಿದ್ಯಾರ್ಥಿಗಳು ಈ ಸ್ಫರ್ಧೆಗಳಲ್ಲಿ ಉತ್ಸಾಹದಿಂದ ಪಾಲ್ಗೊಳ್ಳುತ್ತಿದ್ದಾರೆ.

Leave a Reply

Your email address will not be published. Required fields are marked *