ಮೇ 10, 11 ಸಂವಿಧಾನ ಅರಿವು ಕಾರ್ಯಗಾರ

ತುಮಕೂರು : ಜನಸ್ಪಂದನ ಟ್ರಸ್ಟ್ ತಿಪಟೂರು, ಮತ್ತು ತುಮಕೂರು ವಿಶ್ವವಿದ್ಯಾನಿಲಯ ವತಿಯಿಂದ ಮೇ 10 ಮತ್ತು 11ರಂದು ತುಮಕೂರು ಜಿಲ್ಲೆಯ ಡಿಗ್ರಿ ಕಾಲೇಜುಗಳ ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿನಿಯರಿಗೆ ‘ಸಂವಿಧಾನ ಅರಿವು ಕಾರ್ಯಕ್ರಮವನ್ನು ತುಮಕೂರು ವಿಶ್ವವಿದ್ಯಾನಿಲಯದ ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಈ ಕಾರ್ಯಗಾರದಲ್ಲಿ 50ವಿದ್ಯಾರ್ಥಿಗಳಿಗೆ, 50ವಿದ್ಯಾರ್ಥಿನಿಯರಿಗೆ ಸೇರಿದಂತೆ 100 ವಿದ್ಯಾರ್ಥಿಗಳಿಗೆ ಸಂವಿಧಾನ ಅರಿವು ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದ್ದು, ಅತ್ಯುತ್ತಮ ನಾಲ್ವರು ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ತಲಾ ಐದು ಸಾವಿರ ನಗದು, ಬೆಳ್ಳಿ ಪದಕ ಮತ್ತು ಪ್ರಶಸ್ತಿ ಪತ್ರ ನೀಡಲಾಗುವುದು, ಉತ್ತಮ ಐದು ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ತಲಾ ಎರಡೂವರೆ ಸಾವಿರ ನಗದು, ಬೆಳ್ಳಿ ಪದಕ ಮತ್ತು ಪ್ರಶಸ್ತಿ ಪತ್ರ ನೀಡಲಾಗುವುದು ಹಾಗೂ ಭಾಗವಹಿಸಿದ ಎಲ್ಲಾ ಶಿಬಿರಾರ್ಥಿಗಳಿಗೆ ತಲಾ ಒಂದು ಸಾವಿರ ನಗದು ಮತ್ತು ಪ್ರಶಸ್ತಿ ಪತ್ರ ನೀಡಲಾಗುವುದು ಎಂದು ಜನಸ್ಪಂದನ ಟ್ರಸ್ಟ್ ತಿಳಿಸಿದೆ.

Leave a Reply

Your email address will not be published. Required fields are marked *